ಉಡುಪಿ: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಯನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಸ್ವಾಗತಿಸಿದ್ದಾರೆ. ಬಿ.ವೈ. ವಿಜಯೇಂದ್ರರವರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕರಾಗಿ, ನೀಡಿದ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ. ರಾಘವೇಂದ್ರ ಅವರಿಗಿದೆ. ಅವರ ನಾಯಕತ್ವದಲ್ಲಿ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಲು ನಾಂದಿ ಹಾಡಿದಂತಾಗಿದೆ. ಬಿ.ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕೆ.ಉದಯContinue reading “ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ನಾಂದಿ : ಕೆ.ಉದಯಕುಮಾರ್ ಶೆಟ್ಟಿ”
Daily Archives: November 10, 2023
ಹಿರಿಯ ಪತ್ರಕರ್ತ, ಪರಿಸರ ಪ್ರೇಮಿ ಶಶಿಧರ್ ಹೆಮ್ಮಣ್ಣ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ಪತ್ರಿಕಾ ಮತ್ತು ದೃಶ್ಯ ಮಾಧ್ಯಮ ರಂಗದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಜಿಲ್ಲೆಯ ಹಿರಿಯ ಪತ್ರಕರ್ತ, ಪರಿಸರ ಪ್ರೇಮಿ ಶಶಿಧರ್ ಹೆಮ್ಮಣ್ಣ ರವರ ಅಕಾಲಿಕ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹೆಮ್ಮಣ್ಣ ರವರು ಕ್ಷಿತಿಜ ಎಂಬ ವಾರ ಪತ್ರಿಕೆ ಆರಂಭಿಸಿ, ಈಟಿವಿ ಕನ್ನಡ, ಡಿಡಿ ನ್ಯೂಸ್ ವರದಿಗಾರರಾಗಿ, ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ, ಪರಿಣಾಮಕಾರಿ ಕೃಷಿContinue reading “ಹಿರಿಯ ಪತ್ರಕರ್ತ, ಪರಿಸರ ಪ್ರೇಮಿ ಶಶಿಧರ್ ಹೆಮ್ಮಣ್ಣ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಸಂಘಟನಾ ಚತುರ, ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರರವರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ. ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾದ್ಯಂತ ಸದೃಢವಾಗಿ ಬೆಳೆದು ಇನ್ನಷ್ಟು ಎತ್ತರಕ್ಕೇರಿ ಮುಂದಿನ ಲೋಕಸಭಾ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಭರ್ಜರಿ ವಿಜಯ ದಾಖಲಿಸುವುದು ನಿಶ್ಚಿತ. ನೂತನ ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರರವರಿಗೆ ಹಾರ್ದಿಕ ಅಭಿನಂದನೆಯನ್ನು ಸಲ್ಲಿಸುವ ಜೊತೆಗೆ ಯುವ ನಾಯಕತ್ವದೊಂದಿಗೆ ಯುವ ಶಕ್ತಿಗೆContinue reading “ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ”
ಉಚಿತ ಗ್ಯಾರಂಟಿಗಳ ಬೆನ್ನು ಹತ್ತಿ ಸರಕಾರದ ಗ್ಯಾರಂಟಿ ಕಳೆದುಕೊಂಡ ಕಾಂಗ್ರೆಸ್ : ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಏರಲೇಬೇಕೆಂಬ ಏಕೈಕ ಉದ್ದೇಶವನ್ನಿಟ್ಟುಕೊಂಡು ಬದ್ಧತೆ ಇಲ್ಲದ ಉಚಿತಗಳ ಗ್ಯಾರಂಟಿಗಳನ್ನು ಘೋಷಿಸಿ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್, ಜನಹಿತ ಮತ್ತು ರಾಜ್ಯದ ಅಭಿವೃದ್ಧಿಯನ್ನು ಬಲಿಕೊಟ್ಟು, ಗ್ಯಾರಂಟಿಗಳ ವ್ಯವಸ್ಥಿತ ನಿರ್ವಹಣೆಯನ್ನೂ ಕಡೆಗಣಿಸಿ ಭ್ರಷ್ಟಾಚಾರ, ಕಮಿಷನ್ ದoಧೆ, ಬಣ ರಾಜಕೀಯ, ಆಡಳಿತ ವೈಫಲ್ಯದ ಜೊತೆಗೆ ಸರಕಾರದ ಅಸ್ತಿತ್ವದ ಗ್ಯಾರಂಟಿಯನ್ನು ಕಳೆದುಕೊಂಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಆಹಾರ ಭದ್ರತಾ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಉಚಿತContinue reading “ಉಚಿತ ಗ್ಯಾರಂಟಿಗಳ ಬೆನ್ನು ಹತ್ತಿ ಸರಕಾರದ ಗ್ಯಾರಂಟಿ ಕಳೆದುಕೊಂಡ ಕಾಂಗ್ರೆಸ್ : ಕುಯಿಲಾಡಿ ಸುರೇಶ್ ನಾಯಕ್”