ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ



ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಸಂಘಟನಾ ಚತುರ, ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರರವರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ.

ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾದ್ಯಂತ ಸದೃಢವಾಗಿ ಬೆಳೆದು ಇನ್ನಷ್ಟು ಎತ್ತರಕ್ಕೇರಿ ಮುಂದಿನ ಲೋಕಸಭಾ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಭರ್ಜರಿ ವಿಜಯ ದಾಖಲಿಸುವುದು ನಿಶ್ಚಿತ.

ನೂತನ ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರರವರಿಗೆ ಹಾರ್ದಿಕ ಅಭಿನಂದನೆಯನ್ನು ಸಲ್ಲಿಸುವ ಜೊತೆಗೆ ಯುವ ನಾಯಕತ್ವದೊಂದಿಗೆ ಯುವ ಶಕ್ತಿಗೆ ಹೊಸ ಚೈತನ್ಯ ತುಂಬಿದ ಪಕ್ಷದ ವರಿಷ್ಠರ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started