ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ



ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಬಂಕೇರಕಟ್ಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಪುಟಾಣಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು.

ಸ್ಥಳೀಯ ಉದ್ಯಮಿ, ಶ್ರೀ ನಾಗರಾಜ ಸೇವಾ ಸಮಿತಿ ಬಂಕೇರಕಟ್ಟ ಇದರ ಗೌರವಾಧ್ಯಕ್ಷ ಎ.ವಿಶ್ವನಾಥ್ ಹೆಗ್ಡೆಯವರು ಕೊಡುಗೆ ನೀಡಿದ ಸ್ಟೀಲ್ ಕವಾಟನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸ್ಥಳೀಯ ವಾರ್ಡ್ ಸದಸ್ಯ ರಾಜೇಶ್ ಸುವರ್ಣ, ಮಾಜಿ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ಭಾರತಿ ಭಾಸ್ಕರ್, ಮಾಜಿ ಉಪಾಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ, ಸೋಮನಾಥ್ ಬಿ.ಕೆ., ಸ್ಥಳೀಯರಾದ ಗುರುರಾಜ್, ಅಂಗನವಾಡಿ ಕಾರ್ಯಕರ್ತೆ ಇಂದಿರಾ, ಸಹಾಯಕಿ ಶ್ರೀಲತಾ, ಬಾಲವಿಕಾಸ ಸಮಿತಿ ಸದಸ್ಯರು, ಪುಟಾಣಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started