ಸಿ.ಎಂ. ಹಿಜಾಬ್ ಹೇಳಿಕೆ ಅತಿರೇಕದ ಪರಮಾವಧಿ : ಕೆ.ಉದಯಕುಮಾರ್ ಶೆಟ್ಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಜಾಬ್ ನಿಷೇಧ ಹಿoಪಡೆಯುತ್ತೇನೆ ಎನ್ನುವ ಹೇಳಿಕೆ ಅತಿರೇಕದ ಪರಮಾವಧಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.

ಸಿದ್ದರಾಮಯ್ಯ ಹಿಂದಿನಿಂದಲೂ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಾ ಬಂದವರು. ಅದು ಶಾಲಾ ವಿದ್ಯಾರ್ಥಿಗಳ ಬಗ್ಗೆ ಇರಬಹುದು ಅಥವಾ ಧರ್ಮದ ಬಗ್ಗೆ ಇರಬಹುದು. ಇದು ಮುಸ್ಲಿಂ ಓಲೈಕೆಯ ಮುಂದುವರಿದ ಭಾಗವಾಗಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಗೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳಿಲ್ಲ.

ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಅಧ್ಯಾಯವನ್ನು ಬೇಕಂತಲೇ ಕೆದಕಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸುವ ಹುನ್ನಾರಕ್ಕೆ ಸಿ.ಎಂ. ಮುಂದಾದಂತೆ ಕಾಣುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಈ ವಿಷಯ ಕಾಂಗ್ರೆಸ್ಸಿಗೆ ಮುಳುವಾಗಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started