ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯ ಪ್ರತಿಬಿಂಬ: ಕೆ.ಉದಯಕುಮಾರ್ ಶೆಟ್ಟಿ





ಉಡುಪಿ:ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆ ಅವರ ಹತಾಶ ಮಾನಸಿಕತೆಯನ್ನು ಬಿಂಬಿಸುತ್ತದೆ. ಬ್ರಿಟಿಷರ ಬೂಟು ನೆಕ್ಕುವ ಸಂಸ್ಕೃತಿ ನಮ್ಮದಲ್ಲ. ಬಿಜೆಪಿ ದೇಶಕ್ಕಾಗಿ ಹೋರಾಟ ಮಾಡಿದ ಸ್ವಾತಂತ್ರ್ಯ ವೀರರ, ಗಡಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ ಹಾಗೂ ಶೋಷಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬೂಟು ಒರೆಸುವ ಕೆಲಸ ಮಾಡುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.

ನೀವು ಇಟಲಿ ಮಹಿಳೆಯ ಸೆರಗಿನ ಹಿಂದೆ ರಾಜಕೀಯ ಮಾಡುತ್ತಾ ಇನ್ನೂ ಅದೇ ಪಳಿಯುಳಿಕೆಗೆ ಜೋತು ಬಿದ್ದವರು. ನಿಮಗೆ ದೇಶಪ್ರೇಮಿಗಳು ದೇಶದ್ರೋಹಿಗಳಂತೆ ಹಾಗೂ ದೇಶದ್ರೋಹಿಗಳು ದೇಶಪ್ರೇಮಿಗಳಂತೆ ಕಾಣುವುದು ಸಹಜ ಎಂದಿದ್ದಾರೆ.

ಬಿ.ಕೆ. ಹರಿಪ್ರಸಾದ್ ಅವರ ಮಾನಸಿಕ ಸ್ಥಿಮಿತ ಕಳೆದುಕೊಂಡಂತಿರುವ ನಡವಳಿಕೆಗಳು ಕಾಂಗ್ರೆಸ್ ಪಕ್ಷವನ್ನು ಮುಳುಗಿಸಲು ಸುಪಾರಿ ಪಡೆದಂತೆ ಬಾಸವಾಗುತ್ತಿದೆ ಎಂದು ಉದಯಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started