ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆ ಪ್ರಯುಕ್ತ ಅಂಬಲಪಾಡಿ ಸ್ವಯಂ ಸೇವಕರಿಂದ ಸಾಮೂಹಿಕ ಪ್ರಾರ್ಥನೆ, ಮಂತ್ರಾಕ್ಷತೆ ವಿತರಣೆ

ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಹಾಗೂ ಶ್ರೀ ರಾಮ ಮಂದಿರದ ಉದ್ಘಾಟನೆಯ ಪ್ರಯುಕ್ತ ಅಂಬಲಪಾಡಿ ನಗರ ಮತ್ತು ಗ್ರಾಮಾಂತರ ಭಾಗದ ರಾಮ ಭಕ್ತ ಸ್ವಯಂ ಸೇವಕರಿಂದ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. 9 ತಂಡಗಳ ನೇತೃತ್ವದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯನ್ನು ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ 9 ತಂಡಗಳ ಪ್ರಮುಖರು ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

Design a site like this with WordPress.com
Get started