
ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ಜಿಲ್ಲಾ ಸಹಸಂಚಾಲಕರಾದ ವಿಜಯ್ ಕುಮಾರ್ ಉದ್ಯಾವರ ಪ್ರಸ್ತಾವನೆಗೈದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ ಗ್ರಾಮ್ ಚಲೋ ಕಾರ್ಯಕ್ರಮದ ರೂಪುರೇಶೆಗಳನ್ನು ವಿವರಿಸಿದರು. ಕಾಪು ಮಂಡಲ ಸಂಚಾಲಕರಾದ ಮುರಳೀದರ್ ಪೈ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಚುನಾವಣಾ ಸಂಚಾಲಕರಾಗಿ ಆಯ್ಕೆಯಾದ ಕುತ್ಯಾರು ನವೀನ್ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು. ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಸಹಸಂಚಾಲಕರಾದ ನವೀನ್ ಎಸ್ ಕೆ ಮತ್ತಿತರರು ಉಪಸ್ಥಿತರಿದ್ದರು.