ಉಡುಪಿ ಜಿಲ್ಲಾ ಬಿಜೆಪಿಯಿಂದ ಡಾ! ವಿ.ಎಸ್. ಆಚಾರ್ಯ ಸಂಸ್ಮರಣೆ

ಉಡುಪಿ: ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ! ವಿ.ಎಸ್. ಆಚಾರ್ಯ ರವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪ ಎಂದು ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ (ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಮ್.ಬಿ. ಬಾನುಪ್ರಕಾಶ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ! ಆಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಡಾ! ಆಚಾರ್ಯರವರು ದೇಶದಲ್ಲೇ ಮೊದಲ ಬಾರಿಗೆ ತಲೆಯಲ್ಲಿ ಮಲವನ್ನು ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿರುವುದು ಐತಿಹಾಸಿಕ ದಾಖಲೆ ಎಂದರು.
ರಾಷ್ಟ್ರೀಯ ನಾಯಕರ ಜೊತೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ ಮೇರು ವ್ಯಕ್ತಿತ್ವದ ಡಾ! ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು ಅನುಕರಣೀಯ. ಅಭಿವೃದ್ಧಿಯ ಹೊಸ ಶಕೆಯ ಜೊತೆಗೆ ರಾಜಕೀಯ ಮೌಲ್ಯಗಳನ್ನು ಎತ್ತಿ ಹಿಡಿದಿರುವ ದಾಖಲೆಗಳ ಸರದಾರ ಡಾ! ವಿ.ಎಸ್. ಆಚಾರ್ಯರವರು ಹಾಕಿಕೊಟ್ಟ ಮಾರ್ಗ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಚಂದ್ರಶೇಖರ ಪ್ರಭು, ಶಿವರಾಮ ಕಾಡಿಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
*ಪ್ರಕಟಣೆಯ ಕೃಪೆಗಾಗಿ*
*ಡಾ! ಆಚಾರ್ಯ ಪಕ್ಷ ನಿಷ್ಠೆ, ದಕ್ಷತೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ದಾರಿ ದೀಪ : ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ ಎಮ್.ಬಿ. ಭಾನುಪ್ರಕಾಶ್*
*ಉಡುಪಿ ಜಿಲ್ಲಾ ಬಿಜೆಪಿಯಿಂದ ಡಾ! ವಿ.ಎಸ್. ಆಚಾರ್ಯ ಸಂಸ್ಮರಣೆ*
ನವ ಉಡುಪಿಯ ನಿರ್ಮಾತೃ, ಮಾಜಿ ಸಚಿವ ಡಾ! ವಿ.ಎಸ್. ಆಚಾರ್ಯ ರವರ ಪಕ್ಷ ನಿಷ್ಠೆ, ದಕ್ಷತೆ, ಬದ್ಧತೆ ಹಾಗೂ ಪ್ರಾಮಾಣಿಕತೆ ಪಕ್ಷದ ಕಾರ್ಯಕರ್ತರಿಗೆ ದಾರಿ ದೀಪ ಎಂದು ಲೋಕಸಭಾ ಚುನಾವಣಾ ಕ್ಲಸ್ಟರ್ ಸಂಚಾಲಕ (ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ) ಎಮ್.ಬಿ. ಬಾನುಪ್ರಕಾಶ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಡಾ! ವಿ.ಎಸ್. ಆಚಾರ್ಯ ಅವರ 12ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಡಾ! ಆಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಡಾ! ಆಚಾರ್ಯರವರು ದೇಶದಲ್ಲೇ ಮೊದಲ ಬಾರಿಗೆ ತಲೆಯಲ್ಲಿ ಮಲವನ್ನು ಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿರುವುದು ಐತಿಹಾಸಿಕ ದಾಖಲೆ ಎಂದರು.
ರಾಷ್ಟ್ರೀಯ ನಾಯಕರ ಜೊತೆ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದ ಮೇರು ವ್ಯಕ್ತಿತ್ವದ ಡಾ! ಆಚಾರ್ಯ ಅವರ ದೂರದರ್ಶಿತ್ವದ ಚಿಂತನೆಗಳು ಅನುಕರಣೀಯ. ಅಭಿವೃದ್ಧಿಯ ಹೊಸ ಶಕೆಯ ಜೊತೆಗೆ ರಾಜಕೀಯ ಮೌಲ್ಯಗಳನ್ನು ಎತ್ತಿ ಹಿಡಿದಿರುವ ದಾಖಲೆಗಳ ಸರದಾರ ಡಾ! ವಿ.ಎಸ್. ಆಚಾರ್ಯರವರು ಹಾಕಿಕೊಟ್ಟ ಮಾರ್ಗ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಡುಪಿ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ಲೋಕಸಭಾ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯಕುಮಾರ್ ಶೆಟ್ಟಿ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪ್ರಮುಖರಾದ ಶ್ರೀಕಾಂತ್ ಶೆಟ್ಟಿ, ಚಂದ್ರಶೇಖರ ಪ್ರಭು, ಶಿವರಾಮ ಕಾಡಿಮಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.