ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ





ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಾಗಿಟ್ಟ ಅನುದಾನವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನವನ್ನು ಇಲಾಖೆಗೆ ಹಿಂದಿರುಗಿಸಿರುವಂತೆ ಆಗ್ರಹ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಅನಂದ ಮಟಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಸದಾನಂದ ಕೈಪುಂಜಾಲು, ಎಸ್.ಸಿ. ಮೋರ್ಚಾ ಬೈಂದೂರು ಪ್ರಧಾನ ಕಾರ್ಯದರ್ಶಿ ಸುರೇಶ್ ಮೂಡುಬಗೆ, ಎಸ್.ಸಿ. ಮೋರ್ಚಾ ಉಡುಪಿ ಮಂಡಲ ಅಧ್ಯಕ್ಷ ಕಿರಣ್ ಕುಮಾರ್ ಸಹಿತ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.*ಪ್ರಕಟಣೆಯ ಕೃಪೆಗಾಗಿ*

*ಪ.ಜಾ. ಜನಾಂಗದ ಅಭಿವೃದ್ಧಿಗೆ ಮೀಸಲಾಗಿಟ್ಟ ಅನುದಾನದ ದುರ್ಬಳಕೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಪ್ರತಿಭಟನೆ, ಅನುದಾನ ಹಿoತಿರುಗಿಸಲು ಆಗ್ರಹ*

ಪರಿಶಿಷ್ಟ ಜನಾಂಗದ ಅಭಿವೃದ್ಧಿಗಾಗಿ ಮೀಸಲಾಗಿಟ್ಟ ಅನುದಾನವನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ, ಅನುದಾನವನ್ನು ಇಲಾಖೆಗೆ ಹಿಂದಿರುಗಿಸಿರುವಂತೆ ಆಗ್ರಹ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ಗೋಪಾಲ ಕಳಂಜೆ, ಉಪಾಧ್ಯಕ್ಷ ಅನಂದ ಮಟಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಡಿ.ಬಿ., ಸದಾನಂದ ಕೈಪುಂಜಾಲು, ಎಸ್.ಸಿ. ಮೋರ್ಚಾ ಬೈಂದೂರು ಪ್ರಧಾನ ಕಾರ್ಯದರ್ಶಿ ಸುರೇಶ್ ಮೂಡುಬಗೆ, ಎಸ್.ಸಿ. ಮೋರ್ಚಾ ಉಡುಪಿ ಮಂಡಲ ಅಧ್ಯಕ್ಷ ಕಿರಣ್ ಕುಮಾರ್ ಸಹಿತ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started