ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಯವರಿಗೆ ಉಡುಪಿ ನಗರ ಬಿಜೆಪಿಯಿಂದ ಅಭಿನಂದನೆ





ಉಡುಪಿ: ಬಿಜೆಪಿ ಯುವ ಮೋರ್ಚಾದ ನೂತನ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ವಿಖ್ಯಾತ್ ಶೆಟ್ಟಿಯವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ರವರು ನಗರ ಕಛೇರಿಯಲ್ಲಿ ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಕುತ್ಪಾಡಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಪ್ರಜಿತ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started