ಬಿಜೆಪಿ ಗೆಲುವಿಗೆ ಮಹಿಳಾ ಕಾರ್ಯಕರ್ತರಿಂದ ‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಹಾಗೂ ‘ಶಕ್ತಿ ಚೌಪಾಲ್’ ಅಭಿಯಾನ

‘ಸಬ್ ಕೇ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ಎಲ್ಲ ವರ್ಗಗಳ ಕಲ್ಯಾಣಕ್ಕೆ ಕಂಕಣಬದ್ಧರಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಮಸ್ತ ಮಹಿಳೆಯರ ಭರವಸೆಯ ನಾಯಕರಾಗಿದ್ದಾರೆ. ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಚನೆ-ಯೋಜನೆಗಳಿಂದ ‘ದೇಶಕ್ಕೆ ಮೋದಿಯೇ ಗ್ಯಾರಂಟಿ’ ಎನ್ನುವುದನ್ನು ಈಗಾಗಲೇ ಮಹಿಳಾ ಮತದಾರರು ಅರ್ಥೈಸಿಕೊಂಡಿದ್ದು ಮುoದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಕ್ಷೇತ್ರದ ನಾರೀ ಶಕ್ತಿ ಮಹತ್ತರ ಕೊಡುಗೆ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾContinue reading “ಬಿಜೆಪಿ ಗೆಲುವಿಗೆ ಮಹಿಳಾ ಕಾರ್ಯಕರ್ತರಿಂದ ‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಹಾಗೂ ‘ಶಕ್ತಿ ಚೌಪಾಲ್’ ಅಭಿಯಾನ”

ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ

ನಿಡಂಬೂರು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ, ಅಂಬಲಪಾಡಿ (ಮೂಡು ಪಾಲು) ಇದರ ವತಿಯಿಂದ ನಡೆದ ಶ್ರೀ ಬಬ್ಬು ಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವದ ಸಂದರ್ಭದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಖ್ಯಾತ ತಬಲಾ ವಾದಕ ಹಾಗೂ ಉಚಿತ ತಬಲಾ ತರಬೇತುದಾರ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ದಿ! ನಿ.ಬೀ. ಅಣ್ಣಾಜಿ ಬಲ್ಲಾಳ್ ಸ್ಮರಣಾರ್ಥ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿContinue reading “ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ”

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಏ.3ರಂದು ಮಣಿಪಾಲದ ರಜತಾದ್ರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ವಿದ್ಯಾ ಕುಮಾರಿ ಅವರಿಗೆ ಚುನಾವಣಾ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬೋಜೇ ಗೌಡ ಇವರು ಉಪಸ್ಥಿತರಿದ್ದರು.

*ಏ.3 : ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಹಿಂದೂ ಫೈರ್ ಬ್ರಾಂಡ್ ಯತ್ನಾಳ್, ಸಿ.ಟಿ. ರವಿ, ಸುನಿಲ್ ಕುಮಾರ್ ಭಾಗಿ

ಉಡುಪಿ: ಏ.3ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಕೇoದ್ರ ಸಚಿವ, ಹಿಂದೂ ಫೈರ್ ಬ್ರಾoಡ್ ಬಸವನಗೌಡ ಪಾಟೀಲ್ ಯತ್ನಾಳ್ ದಿಕ್ಸೂಚಿ ಭಾಷಣ ಮಾಡಲಿರುವರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯContinue reading “*ಏ.3 : ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಹಿಂದೂ ಫೈರ್ ಬ್ರಾಂಡ್ ಯತ್ನಾಳ್, ಸಿ.ಟಿ. ರವಿ, ಸುನಿಲ್ ಕುಮಾರ್ ಭಾಗಿ”

Design a site like this with WordPress.com
Get started