
ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರದ ವಿರುಧ್ಧ ಕಾಪುಮಂಡಲದ ವತಿಯಿಂದ ಅಲೆವೂರಿನಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ರಾಜ್ಯ ಸರಕಾರದ ಪೆಟ್ರೋಲ್ ಡೀಸೆಲ್, ಅಬಕಾರಿ, ಮುದ್ರಾಂಕ ಶುಲ್ಕ, ಬಸ್ ದರ, ವಿದ್ಯುತ್ ದರ , ಆಸ್ತಿ ನೋಂದಣಿ ತೆರಿಗೆ ಹೀಗೆ ಎಲ್ಲದಕ್ಕೂ ಬೆಲೆ ಏರಿಕೆ ಮಾಡಿದ ಹಾಗೂ ವಾಲ್ಮೀಕಿ ನಿಗಮದ ಹಗರಣ ಮಾಡಿ ಲೂಟಿ ಮಾಡುತ್ತಿರುವ ರಾಜ್ಯ ಸರಕಾರವನ್ನು ಕಿತ್ತೊಗೆಯುವ ತನಕ ಪ್ರತಿಯೊಬ್ಬ ನಾಗರಿಕನೂ ಪ್ರತಿಭಟಿಸಬೇಕೆಂದು ಕರೆ ನೀಡಿದರು.
ಕಳೆದ ಬಾರಿ ಪೆಟ್ರೋಲ್ ಡಿಸೆಲ್ ಬೆಲೆ ಏರಿದೆ ಎಂದು ಸಿಧ್ಧರಾಮಯ್ಯರವರು ಸ್ಕೂಟರ್ ಒಂದರ ಅಣಕು ಶವಯಾತ್ರೆ ಮಾಡಿದ್ದು ಬೆಲೆ ಏರಿಕೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅವರೇ ಹೇಳಿಕೆ ನೀಡಿದ್ದರು. ಅದನ್ನು ಅವರಿಗೆ ನೆನಪಿಸಲು ಇಂದು ಅಲೆವೂರು ರಾಮಪುರದಲ್ಲಿ ಅಣಕು ಶವಯಾತ್ರೆ ನಡೆಸಿ ಅವರಿಗೆ ನೆನಪಿಸುವ ಕೆಲಸ ಮಾಡಿ ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗಿದರು
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಗಳಾದ ಗೋಪಾಲಕೃಷ್ಣ ರಾವ್ ಹಾಗೂ ಶರಣ್ ಕುಮಾರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸುವರ್ಣ, ರಾಜ್ಯ ಎಸ್ ಸಿ ಮೋರ್ಚ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ ನಾಯಕ್, ಜಿಲ್ಲಾ ಯುವಮೋರ್ಚ ಉಪಾಧ್ಯಕ್ಷರಾದ ಸಚಿನ್ ಸುವರ್ಣ, ಜಿಲ್ಲಾ ಬಿಜೆಪಿ ವಕ್ತಾರರಾದ ವಿಜಯ್ ಕುಮಾರ್ ಉದ್ಯಾವರ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ದಿಲ್ಲೇಶ್ ಶೆಟ್ಟಿ, ಕಾಪು ಮಂಡಲ ಉಪಾಧ್ಯಕ್ಷರಾದ ರಾಜೇಶ್ ಕುಂದರ್, ಮಂಡಲ ಕಾರ್ಯದರ್ಶಿ ಪ್ರೇಮಾ ಕೊರಂಗ್ರಪಾಡಿ, ವಿವಿಧ ಪದಾಧಿಕಾರಿಗಳು, ಮೋರ್ಚ ಅಧ್ಯಕ್ಷರು ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರುಗಳು ಸದಸ್ಯರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಲಾಯಿತು.