ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮ

ತುಮಕೂರು 2 ಜಿಲ್ಲೆಯ ಶಿರಾ2 ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ 2, ಕಳ್ಳಂಬೆಳ್ಳ ಪೊಲೀಸ್ ಠಾಣೆ, ಕರ್ನಾಟಕ ಪಬ್ಲಿಕ್ ಸ್ಕೂಲ್, ಚಿಕ್ಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯೋಜನಾಧಿಕಾರಿಗಳಾದ ಶ್ರೀ ರಮೇಶ್ ಎನ್ ಮಾತನಾಡುತ್ತಾ ಸುಂದರ ಆರೋಗ್ಯಕ್ಕಾಗಿ ದುಷ್ಚಟ ಮುಕ್ತ ಜೀವನ ನಡೆಸಬೇಕೆಂದು ತಿಳಿಸಿದರು, ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶ್ರೀ ರವೀಂದ್ರ ಅವರು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಸಿದ್ದಣ್ಣ ಅವರು ದುಶ್ಚಟದಿಂದ ಆರೋಗ್ಯದ ಮೇಲೆ ಆಗುವ ಹಾನಿಯ ಕುರಿತು ತಿಳಿಸಿದರು, ಕಾರ್ಯಕ್ರಮದಲ್ಲಿ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವೀಂದ್ರ , ಕಾಲೇಜಿನ ಪ್ರಾಂಶುಪಾಲರಾದ ಜಯರಾಮ್ , ಸಂಪನ್ಮೂಲ ವ್ಯಕ್ತಿಗಳಾದ ಸಿದ್ದಣ್ಣ , ತಾಲೂಕು ಯೋಜನಾಧಿಕಾರಿಗಳಾದ ರಮೇಶ್ ಎನ್. ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುನಂದ R , ವಲಯದ ಮೇಲ್ವಿಚಾರಕರಾದ ನಗ್ಮಾ , ಕೃಷಿ ಅಧಿಕಾರಿ ಶ್ರೀಶ ಆಚಾರ್ಯ, ಸೇವಾಪ್ರತಿನಿಧಿ ಕವಿತಾ, ಶಾಲಾ ಶಿಕ್ಷಕವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು

Leave a comment

Design a site like this with WordPress.com
Get started