

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸಂಘದ ವಠಾರದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಅವಿನಾಶ್ ಕುಮಾರ್, ಆಡಳಿತ ಸಮಿತಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ನಿತಿನ್ ಕುಮಾರ್, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ರಮೇಶ್ ಕೋಟ್ಯಾನ್, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ ಹಾಗೂ ನವೀನ್ ಕುಮಾರ್, ಆನಂದ ಕೋಟ್ಯಾನ್, ಪ್ರಖ್ಯಾತ್ ಎಸ್. ಕುಮಾರ್, ರೀಷಾ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.