
ಉಡುಪಿ: ಪಶ್ಚಿಮ ಬಂಗಾಲದ ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಮೊoಬತ್ತಿ ಉರಿಸಿ ಶಾಂತಿಯುತ ಪ್ರತಿಭಟನೆ ನಡೆಯಿತು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಮಹಿಳಾ ಮೋರ್ಚಾ ಪ್ರಮುಖರಾದ ಸುಜಾಲ ಸುವರ್ಣ, ಸುಮ ಶೆಟ್ಟಿ, ಲೀಲಾ ಆರ್. ಅಮೀನ್, ರಜನಿ ಹೆಬ್ಬಾರ್, ಶಾಂತ, ನೀತಾ ಪ್ರಭು, ತಾರಾ ಆಚಾರ್ಯ, ಸರೋಜಾ ಶೆಣೈ, ಶಾಂತಿ ಮನೋಜ್, ಸುಧಾ ಪೈ , ಪೂರ್ಣಿಮಾ ಶೆಟ್ಟಿ, ಸುಗುಣಾ ನಾಯ್ಕ್, ಪ್ರೀತಿ, ಸುಕನ್ಯಾ, ಶೋಭಾ ಪೈ, ಪ್ರಜ್ಞಾ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.