ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ



ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಭಜನಾ ಮಂದಿರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಶಾಲು ಹೊದೆಸಿ ಗೌರವಿಸಿ, ಶ್ರೀದೇವರ ಪ್ರಸಾದವನ್ನು ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಸುವರ್ಣ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಕುಮಾರ್, ಸಂಘದ ಆಡಳಿತ ಸಮಿತಿ ಸದಸ್ಯರಾದ ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್, ಮುದ್ದಣ್ಣ ಪೂಜಾರಿ, ಸುಧಾಕರ್ ಎ., ವಿನಯ್ ಕುಮಾರ್, ನಿತಿನ್ ಕುಮಾರ್, ಗುರುರಾಜ್ ಪೂಜಾರಿ, ಸತೀಶ್ ಪೂಜಾರಿ, ಭಾಸ್ಕರ ಕೋಟ್ಯಾನ್, ಜನಾರ್ಧನ ಪೂಜಾರಿ, ಚೆನ್ನಕೇಶವ, ವಿನೋದ್ ಪೂಜಾರಿ ಹಾಗೂ ಕುಶಲ್ ಕುಮಾರ್, ಶಂಕರ ಪೂಜಾರಿ, ರವಿ ಪಾಲನ್, ಸುಧಾಕರ, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ಜಯಂತಿ ಹರೀಶ್, ಕಾರ್ಯದರ್ಶಿ ವಾಣಿಶ್ರೀ ಅರುಣ್ ಸಹಿತ ಸಮಿತಿ ಸದಸ್ಯರು ಮತ್ತು ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started