ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು ನಿಧನ



ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಹಿರಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ಮಹಾಬಲ ಪೂಜಾರಿ, ಪಂದುಬೆಟ್ಟು (81 ವರ್ಷ) ಅವರು ಇಂದು ಸೆ.8ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮಹಾಬಲ ಪೂಜಾರಿ ಅವರು ಬಸ್ ಮಾಲಕರಾಗಿದ್ದು, ಉಡುಪಿಯ ಹಿರಿಯ ಬಸ್ ಏಜೆಂಟರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಬಂಧು ವರ್ಗ ಹಾಗೂ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.

ಮೃತರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರವು ನಾಳೆ ಸೆ.9ರಂದು ಬೆಳಿಗ್ಗೆ 10.00 ಗಂಟೆಗೆ ಅವರ ಪಂದುಬೆಟ್ಟು ನಿವಾಸದಲ್ಲಿ ನಡೆಯಲಿದೆ.

Leave a comment

Design a site like this with WordPress.com
Get started