ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ, ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಸಂತಾಪ



ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಬೈಂದೂರು ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರ ನಿಧನಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿ, ಪಕ್ಷವನ್ನು ತಳ ಮಟ್ಟದಿಂದ ಸದೃಢವಾಗಿ ಕಟ್ಟುವ ಜೊತೆಗೆ ಬೈಂದೂರು ಶಾಸಕರಾಗಿ ಜನಪರ ಕೆಲಸ ಕಾರ್ಯಗಳ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ಲಕ್ಷ್ಮೀನಾರಾಯಣ ಬೈಂದೂರು ಅವರ ಸೇವಾ ಮನೋಭಾವ ಪ್ರೇರಣಾದಾಯಕ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started