ಉಡುಪಿ:ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ (ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ.) ಸುಮಾರು ರೂ 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ದಲಿತ ದ್ರೋಹಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಅವರು ಸೋಮವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನಾಂದೋಲನವನ್ನುContinue reading “ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಹಣ ದುರ್ಬಳಕೆ ಮಾಡಿದ ದಲಿತ ದ್ರೋಹಿ’ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ”
Monthly Archives: February 2025
ತಾಲೂಕು ಭಜನಾ ಪರಿಷತ್ತನ್ನು ವಲಯ ಮಟ್ಟದಿಂದ ಸದೃಢಗೊಳಿಸಲು ರಾಜೇಂದ್ರ ಕುಮಾರ್ ಬಸ್ರೂರು ಕರೆ
ಉಡುಪಿ : ಆತ್ಮವಿಶ್ವಾಸದ ವೃದ್ಧಿಯ ಜೊತೆಗೆ ಭಗವಂತನ ಸಾಕ್ಷಾತ್ಕಾರವನ್ನು ಕಂಡುಕೊಳ್ಳಲು ಇರುವ ಸುಲಭ ದಾರಿ ಭಜನೆ. ಇಂದು ಭಜನೆಯತ್ತ ಯುವ ಸಮುದಾಯದ ಸಹಿತ ಎಲ್ಲ ವರ್ಗದ ಜನತೆ ಆಕರ್ಷಿತರಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ವಲಯಗಳ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಭಜನಾ ಮಂಡಳಿಗಳನ್ನು ಸಂಘಟಿಸುವ ಮೂಲಕ ಭಜನಾ ಪರಿಷತ್ತನ್ನು ಇನ್ನಷ್ಟು ಸದೃಢವಾಗಿ ಬೆಳೆಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹೇಳಿದರು. ಅವರು ಶ್ರೀ ಕ್ಷೇ.ಧ.Continue reading “ತಾಲೂಕು ಭಜನಾ ಪರಿಷತ್ತನ್ನು ವಲಯ ಮಟ್ಟದಿಂದ ಸದೃಢಗೊಳಿಸಲು ರಾಜೇಂದ್ರ ಕುಮಾರ್ ಬಸ್ರೂರು ಕರೆ”
ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ
ಉಡುಪಿ:ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಸುಧೀರ್ಘ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೊದಲ ಬಾರಿ ಸ್ಪರ್ಧಿಸಿ ಗೆಲುವುContinue reading “ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ”
ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ
ಉಡುಪಿ: ‘ಗಂಗೆಯಲ್ಲಿ ಮಿಂದರೆ ಬಡತನ ನೀಗುತ್ತದೆಯೇ’ ಎಂದು ಪ್ರಶ್ನಿಸಿ ಕೋಟ್ಯಾoತರ ಆಸ್ತಿಕ ಹಿಂದೂಗಳ ಭಾವನೆಗಳಿಗೆ ಘಾಸಿಯಂನ್ನುಟುಮಾಡಿದ್ದ ಎಐಸಿಸಿ ಅಧ್ಯಕ್ಷ ಖರ್ಗೆ ಉವಾಚದ ನಡುವೆಯೇ ಸದನದ ವಸತಿ ಸಮಿತಿ ಸದಸ್ಯರಿಗೆ, ಅದರಲ್ಲೂ ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಶಾಸಕರಿಗೆ ಕುಂಭಮೇಳ (ಉತ್ತರ ಭಾರತ) ಅಧ್ಯಯನ ಪ್ರವಾಸಕ್ಕೆ ರೂ.50 ಲಕ್ಷಕ್ಕೂ ಮಿಕ್ಕಿದ ಮೊತ್ತವನ್ನು ವ್ಯಯಿಸಲು ಮುಂದಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕಳೆದ ಒಂದು ವಾರದಿಂದ ವಿವಿಧ ತುರ್ತು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯoತ ಪ್ರತೀ ತಾಲೂಕು ಕೇಂದ್ರಗಳಲ್ಲಿ ನಡೆಯುತ್ತಿರುವ ಗ್ರಾಮContinue reading “ಕುಂಭಮೇಳ ಅಧ್ಯಯನ ಪ್ರವಾಸಕ್ಕೆ ತನ್ನ ಶಾಸಕರಿಗೆ ಲಕ್ಷಾಂತರ ಹಣ ವ್ಯಯಿಸುವ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಜ್ವಲಂತ ಸಮಸ್ಯೆಗಳು ಕಾಣದಾಯಿತೇ : ರೇಷ್ಮಾ ಉದಯ ಶೆಟ್ಟಿ”
ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಎಲ್ಲರಿಗೂ ಪ್ರೇರಣಾದಾಯಕ : ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಆದರ್ಶ ವ್ಯಕ್ತಿಯಾಗಿದ್ದಾರೆ. ಸಂಘಟನೆಗೆ ಭದ್ರ ಬುನಾದಿಯನ್ನು ಹಾಕಿಕೊಡುವಲ್ಲಿ ಅವರ ಸೇವೆ ಅನನ್ಯ. ಪಂಡಿತ್ ಜೀ ಅವರ ಬಲಿದಾನ ದಿನದಂದು ಅವರ ಉದಾತ್ತ ತತ್ವ ಸಿದ್ಧಾಂತಗಳನ್ನು ನೆನಪಿಸಿಕೊಂಡು ಅವರನ್ನು ಸ್ಮರಿಸುವುದು ಪಕ್ಷದ ಕಾರ್ಯಕರ್ತರ ಆದ್ಯ ಕರ್ತವ್ಯ. ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜೀವನಾದರ್ಶ, ಜೀವನ ಸ್ಫೂರ್ತಿ ಎಲ್ಲರಿಗೂ ಪ್ರೇರಣಾದಾಯಕವಾಗಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಎಲ್ಲರಿಗೂ ಪ್ರೇರಣಾದಾಯಕ : ಕಿಶೋರ್ ಕುಮಾರ್ ಕುಂದಾಪುರ”
ಕೇಜ್ರಿವಾಲ್ ಭ್ರಷ್ಟ ಆಡಳಿತಕ್ಕೆ ತಿಲಾಂಜಲಿ, ಬಿಜೆಪಿಗೆ ದೆಹಲಿ ಗದ್ದುಗೆ ನೀಡಿದ ಮತದಾರರು ಅಭಿನಂದನಾರ್ಹರು: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಭರ್ಜರಿ ಗೆಲುವು ಸಾಧಿಸಿ, 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾರಣೀಭೂತರಾದ ದೆಹಲಿ ಮತದಾರರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ. ನಡ್ದಾ ಅಭಿನಂದನಾರ್ಹರು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಹರ್ಷ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ಭ್ರಷ್ಟಚಾರ ವಿರುದ್ಧದ ಹೋರಾಟದ ಮೂಲಕ ರಾಜಕೀಯContinue reading “ಕೇಜ್ರಿವಾಲ್ ಭ್ರಷ್ಟ ಆಡಳಿತಕ್ಕೆ ತಿಲಾಂಜಲಿ, ಬಿಜೆಪಿಗೆ ದೆಹಲಿ ಗದ್ದುಗೆ ನೀಡಿದ ಮತದಾರರು ಅಭಿನಂದನಾರ್ಹರು: ಕಿಶೋರ್ ಕುಮಾರ್ ಕುಂದಾಪುರ”
ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.*
ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್, ಉಡುಪಿContinue reading “ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು : ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ.*”
ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸ್ವಾಗತಾರ್ಹ : ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಪ್ರತಿಷ್ಠಿತ ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ನಗರಸಭೆ ಮಹಾ ನಗರಪಾಲಿಕೆಯಾಗಿ ಪರಿವರ್ತಿತವಾದಲ್ಲಿ ಉಡುಪಿ ನಗರದ ಸಹಿತ ನಗರಕ್ಕೆ ಹೊಂದಿಕೊಂಡಿರುವ ಹಲವಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಿದಂತಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಮೂಲತ: ಸಿಟಿ ಮುನ್ಸಿಪಲ್ ಕೌನ್ಸಿಲ್, ಪುರಸಭೆಯಾಗಿದ್ದ ಉಡುಪಿ ನಗರಸಭೆ 1996ರಲ್ಲಿ ಮಲ್ಪೆ (ಕೊಡವೂರು), ಪುತ್ತೂರು, ಶಿವಳ್ಳಿ,Continue reading “ಉಡುಪಿ ನಗರಸಭೆಯನ್ನು ಮಹಾ ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸ್ವಾಗತಾರ್ಹ : ಕಿಶೋರ್ ಕುಮಾರ್ ಕುಂದಾಪುರ”
ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ
ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವವು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾContinue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ”