
ಕಾಪು: ಅಲೆವೂರು ರಾಮಪುರದ ಶ್ರೀಪತಿ ಆಚಾರ್ಯ ಮತ್ತು ಇಂದಿರಾ ಇವರ ಪುತ್ರಿ ಕು. ಶ್ರೀನಿಧಿ ಬಿ ಎಸ್ ರವರು ಮಂಗಳೂರು ವಿಶ್ವವಿದ್ಯಾನಿಲಯದ ಬಿಎಸ್ ಡಬ್ಲ್ಯೂ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದು ಅವರನ್ನು ಅವರ ಸ್ವಗ್ರಹದಲ್ಲಿ ಬೂತ್ ಅಧ್ಯಕ್ಷರಾದ ನಾರಾಯಣ ಆಚಾರ್ಯ ಇವರ ನೇತ್ರತ್ವದಲ್ಲಿ ಸನ್ಮಾನ ಮಾಡಿ ಗೌರವಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್,ಹಿರಿಯರಾದ ಅಶೋಕ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ಅರುಣ್ ಆಚಾರ್ಯ, ಹರೀಶ್ ಶೆಟ್ಟಿಗಾರ್, ಸುಧಾಮ ರಾಮಪುರ, ಉಮೇಶ್ ಸೇರಿಗಾರ್, ಸಂದೀಪ್ ಕೊರಂಗ್ರಪಾಡಿ, ದಿನೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.