2 ಕೋಟಿ 17 ಲಕ್ಷ ಅನುದಾನದಲ್ಲಿ ಹರಿಖಂಡಿಕೆ – ಎಳ್ಳಾರೆ – ಚಟ್ಕಲ್ ಪಾದೆ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಹರಿಖಂಡಿಕೆ – ಎಳ್ಳಾರೆ – ಚಟ್ಕಲ್ ಪಾದೆ (ಪೆರ್ಡೂರು ನಿಂದ ಕುಂಟಾಲ್ ಕಟ್ಟೆ ರಸ್ತೆ) ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 2 ಕೋಟಿ 17 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 15-04-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.*

*ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಜಿಯಾನಂದ ಹೆಗಡೆ, ಸುಚೇತ ರಾವ್, ಸುಜಾತಾ, ಅನಂತು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.*

Leave a comment

Design a site like this with WordPress.com
Get started