ಜಿಲ್ಲಾಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ತೆರವು ರಾಜ್ಯ ಕಾಂಗ್ರೆಸ್ ಸರಕಾರದ ಕೀಳು ಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಜನಪರ ಯೋಜನೆಯಾದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬಡವರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ದೊರಕಬೇಕು, ಯಾವುದೇ ಔಷಧಿಗಳ ಕೊರತೆಯಿಂದ ಬಡವರು ಪ್ರಾಣ ಕಳೆದುಕೊಳ್ಳುವಂತಾಗಬಾರದು ಎಂಬ ಸದುದ್ಧೇಶದಿಂದ ಕೇಂದ್ರ ಸರಕಾರ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯುವ ಮೂಲಕ ಬಡ ಜನತೆಯContinue reading “ಜಿಲ್ಲಾಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳ ತೆರವು ರಾಜ್ಯ ಕಾಂಗ್ರೆಸ್ ಸರಕಾರದ ಕೀಳು ಮಟ್ಟದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ: ಕಿಶೋರ್ ಕುಮಾರ್ ಕುಂದಾಪುರ”

ಸಿಂಧೂರ ಅಳಿಸಿದ ಉಗ್ರರಿಗೆ ‘ಆಪರೇಷನ್ ಸಿಂಧೂರ’ ಮೂಲಕ ದಿಟ್ಟ ಉತ್ತರ ನೀಡಿದ ಭಾರತ: ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ

ಏ.22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಅಮಾಯಕ ಭಾರತೀಯ ಪ್ರವಾಸಿಗರ ಧರ್ಮ ಕೇಳಿ ಹತ್ಯಾಕಾಂಡ ನಡೆಸಿರುವ ಪಾಕಿಸ್ತಾನ ಪ್ರಯೋಜಿತ ಉಗ್ರರಿಗೆ ಹಾಗೂ ಬೆಂಬಲಿಗರಿಗೆ ಭಾರತ ತಕ್ಕ ಶಾಸ್ತಿಯನ್ನು ಮಾಡಿದೆ. ‘ಸಿಂಧೂರ’ ಅಳಿಸಿದವರಿಗೆ ‘ಆಪರೇಷನ್ ಸಿಂಧೂರ’ ಮೂಲಕ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ. ಭಾರತೀಯರೆಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುವ ಅತ್ಯಂತ ಸಂತಸದ ಕ್ಷಣ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾContinue reading “ಸಿಂಧೂರ ಅಳಿಸಿದ ಉಗ್ರರಿಗೆ ‘ಆಪರೇಷನ್ ಸಿಂಧೂರ’ ಮೂಲಕ ದಿಟ್ಟ ಉತ್ತರ ನೀಡಿದ ಭಾರತ: ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ”

ಅಕ್ರಮ ಪಾಕಿಸ್ತಾನಿ ನುಸುಳುಕೋರರ ಗಡಿಪಾರಿಗೆ ತುರ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ ಸಲ್ಲಿಕೆ

ಉಡುಪಿ: ಏ.22ರಂದು ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ನೆರವಿನಿಂದ 26 ಅಮಾಯಕ ಭಾರತೀಯ ಪ್ರಜೆಗಳನ್ನು ಉಗ್ರರು ಧರ್ಮವನ್ನು ಕೇಳಿ ತಿಳಿದು ಗುಂಡಿಕ್ಕಿ ಹತ್ಯೆಗೈದಿರುವ ದಾರುಣ ಘಟನೆಯ ಹಿನ್ನೆಲೆಯಲ್ಲಿ ಹಾಗೂ ಕೇಂದ್ರ ಸರಕಾರ ಈಗಾಗಲೇ ಆದೇಶ ಹೊರಡಿಸಿರುವಂತೆ ಜಿಲ್ಲೆಯಲ್ಲಿ ಆಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳನ್ನು ಶ್ರೀಘ್ರವಾಗಿ ಪತ್ತೆ ಹಚ್ಚಿ ಅವರನ್ನು ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡುವ ಬಗ್ಗೆ ಆದ್ಯತೆ ಮೇರೆಗೆ ತುರ್ತು ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರContinue reading “ಅಕ್ರಮ ಪಾಕಿಸ್ತಾನಿ ನುಸುಳುಕೋರರ ಗಡಿಪಾರಿಗೆ ತುರ್ತು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಬಿಜೆಪಿ ಮನವಿ ಸಲ್ಲಿಕೆ”

ಮೇ 6 : ಜಿಲ್ಲಾ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಉಡುಪಿ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪೆಹಲ್ಗಾಂವ್ ನಲ್ಲಿ 26 ಹಿಂದೂಗಳನ್ನು ಬಲಿ ಪಡೆದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ತಕ್ಷಣ ಭಾರತದಿಂದ ತಮ್ಮ ದೇಶಕ್ಕೆ ತೆರಳುವಂತೆ ಕೇಂದ್ರ ಸರಕಾರ ಈಗಾಗಲೇ ಸೂಚನೆಯನ್ನು ನೀಡಿ ಕಾಲಮಿತಿಯ ಗಡುವನ್ನು ವಿಧಿಸಿದೆ. ಇನ್ನೂ ಕೂಡಾ ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ಉಳಿದಿದ್ದಲ್ಲಿ ಅವರನ್ನು ಶೀಘ್ರ ಪತ್ತೆ ಹಚ್ಚಿ ತಕ್ಷಣ ದೇಶ ಬಿಟ್ಟು ಹೊರಡುವಂತೆ ಅಗತ್ಯ ಕ್ರಮಕೈಗೊಳ್ಳಲು ರಾಜ್ಯಾದ್ಯoತ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ ಸಲ್ಲಿಸಲಿದೆ. ಈ ನೆಲೆಯಲ್ಲಿContinue reading “ಮೇ 6 : ಜಿಲ್ಲಾ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ”

ಕಾಂಗ್ರೆಸ್ ಸರಕಾರದ ಮುಸ್ಲಿಂ ಓಲೈಕೆಯಿಂದ ಸಮಾಜದಲ್ಲಿ ದುಶ್ಶ್ಕೃತ್ಯಕ್ಕೆ ಪರೋಕ್ಷ ಬೆಂಬಲ: ಕಿಶೋರ್ ಕುಮಾರ್ ಕುಂದಾಪುರಹಿಂದೂ ಸಂಘಟನೆಯ ಮುಂದಾಳು ಸುಹಾಸ್ ಶೆಟ್ಟಿ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ ಮತ್ತು ಸಂತಾಪ

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಾಮಾನ್ಯ ಜನರ ಬದುಕು ಸರಿಗೆ ಮೇಲಿನ ನಡಿಗೆಯಂತಾಗಿದೆ. ಪ್ರತೀ ಹೆಜ್ಜೆಯನ್ನೂ ಆತಂಕ ಮತ್ತು ಭಯದಿಂದ ಇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ ಸಮುದಾಯದ ಅತಿಯಾದ ಓಲೈಕೆಯ ಮೂಲಕ ಸಮಾಜದಲ್ಲಿ ಇಂತಹ ದುಶ್ಶ್ಕೃತ್ಯ ನಡೆಯಲು ಸರಕಾರವೇ ಪರೋಕ್ಷ ಬೆಂಬಲ ನೀಡಿದಂತೆ ಕಂಡು ಬರುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರಿನ ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಮುಂದಾಳುContinue reading “ಕಾಂಗ್ರೆಸ್ ಸರಕಾರದ ಮುಸ್ಲಿಂ ಓಲೈಕೆಯಿಂದ ಸಮಾಜದಲ್ಲಿ ದುಶ್ಶ್ಕೃತ್ಯಕ್ಕೆ ಪರೋಕ್ಷ ಬೆಂಬಲ: ಕಿಶೋರ್ ಕುಮಾರ್ ಕುಂದಾಪುರಹಿಂದೂ ಸಂಘಟನೆಯ ಮುಂದಾಳು ಸುಹಾಸ್ ಶೆಟ್ಟಿ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ ಮತ್ತು ಸಂತಾಪ”

Design a site like this with WordPress.com
Get started