ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗ(ರಿ.) ಬೆಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ ‘ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ವಿದ್ವಾಂಸರಾದ ಡಾ! ಬಿ.ಗೋಪಾಲಾಚಾರ್ಯContinue reading “ನ.10 : ‘ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ’ದ ಅಂಗವಾಗಿ ಉಡುಪಿಯ ರಾಜಾಂಗಣದಲ್ಲಿ ‘ಸಹಸ್ರ ಕಂಠ ಗಾಯನ’ ಮತ್ತು ‘ಭಜನಾ ಮಂಡಳಿಗಳ ಸಮಾವೇಶ’”

ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ವಕ್ಫ್ ಸಚಿವ ಜಮೀರ್ ಅಹ್ಮದ್ ಷಡ್ಯಂತ್ರದಿಂದ ರಾಜ್ಯಾದ್ಯಂತ ಸೃಷ್ಟಿಯಾಗಿರುವ ‘ಲ್ಯಾಂಡ್ ಜಿಹಾದ್’ ಅವಾಂತರವನ್ನು ಖಂಡಿಸಿ, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ‘ಬೃಹತ್ ಪ್ರತಿಭಟನಾ ರ್ಯಾಲಿ’ ನಡೆಯಿತು. ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಜಿಲ್ಲಾಧ್ಯಕ್ಷContinue reading “ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”

ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ‘ಏಕತಾ ಓಟ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ದೇಶಕ್ಕೆ ಏಕತೆಯನ್ನು ಕಂಡುಕೊಳ್ಳಲು, ದೇಶದ ಸಮಗ್ರತೆಯನ್ನು ಕಾಪಾಡುವುದಕ್ಕೋಸ್ಕರ ಭಾರತದ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರು ನೀಡಿದ ಕೊಡುಗೆ ಅತ್ಯಂತ ಮಹತ್ವಪೂರ್ಣ. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಏಕತಾ ಓಟ’ದ ಮೂಲಕ ಇಡೀ ದೇಶ ಒಟ್ಟಾಗಿ ಒಂದಾಗಿ ದೇಶದ ಐಕ್ಯತೆ, ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ  ದೃಢ ಸಂಕಲ್ಪ ತೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾರತದ ಮಾಜಿ ಉಪ ಪ್ರಧಾನಿ, ‘ಭಾರತ ರತ್ನ’ ಸರ್ದಾರ್ ವಲ್ಲಭContinue reading “ದೇಶದ ಐಕ್ಯತೆ, ಏಕತೆ, ಸಮಗ್ರತೆಗಾಗಿ ‘ಏಕತಾ ಓಟ’ : ಸಂಸದ ಕೋಟ ಶ್ರೀನಿವಾಸ ಪೂಜಾರಿ”

ಕಿಶೋರ್ ಕುಮಾರ್ ಪುತ್ತೂರು ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಹಾರ್ದಿಕ ಅಭಿನಂದನೆಗಳು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಿರುವ ಎಲ್ಲ ಸ್ತರದ ಜನಪ್ರತಿನಿಧಿಗಳಿಗೆ, ಸಹಕರಿಸಿರುವContinue reading “ಕಿಶೋರ್ ಕುಮಾರ್ ಪುತ್ತೂರು ಗೆಲುವಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬಿಜೆಪಿ ಭದ್ರಕೋಟೆ ಎಂಬುದು ಮಗದೊಮ್ಮೆ ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ”

ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ

ಬಡ ಮತ್ತು ಮಧ್ಯಮ ವರ್ಗದ ಜನತೆಯನ್ನು ಗ್ಯಾರಂಟಿಗಳ ಜಾಲಕ್ಕೆ ಸಿಲುಕಿಸಿ ವಾಮ ಮಾರ್ಗದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್ ಇದೀಗ ಜನತೆಯನ್ನು ವಂಚಿಸಿ ಲಕ್ಷಾಂತರ ಬಿಪಿಎಲ್ ಕಾರ್ಡ್ ಗಳ ರದ್ದತಿಗೆ ತೀರ್ಮಾನ ಕೈಗೊಂಡಿರುವುದು ರಾಜ್ಯ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಸುಮಾರು 30ರಿಂದ 40 ಸಾವಿರ ಕುಟುಂಬಗಳು ಸೇರಿದಂತೆ ರಾಜ್ಯಾದ್ಯಂತ ಸುಮಾರು 12 ಲಕ್ಷ ಕುಟುಂಬಗಳ ಮೇಲೆ ಬಿಪಿಎಲ್ ಕಾರ್ಡ್ ರದ್ಧತಿಯ ಕರಿ ನೆರಳು ಬೀಳುವContinue reading “ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ”

ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಗ್ರಾಮ ಮಟ್ಟದಿಂದ ರಾಷ್ಟ್ರಮಟ್ಟದ ವರೆಗಿನ ವಿವಿಧ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜೊತೆಗೆ ಪಕ್ಷಕ್ಕಾಗಿ ಶ್ರಮಿಸಿರುವ ಕುಟುಂಬದ ಹಿನ್ನೆಲೆಯ ಸಣ್ಣ ಸಮುದಾಯದಿಂದ ಮುನ್ನೆಲೆಗೆ ಬಂದಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಪಕ್ಷದContinue reading “ಕಿಶೋರ್ ಕುಮಾರ್ ಪುತ್ತೂರು ಗೆಲುವು ನಿಶ್ಚಿತ : ಕಿಶೋರ್ ಕುಮಾರ್ ಕುಂದಾಪುರ”

ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ

‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದ ಪೂರ್ವಭಾವಿ ಭಜನಾ ತರಬೇತಿಯ ಉದ್ಘಾಟನೆ ನವ ವಿಧ ಭಕ್ತಿಯಲ್ಲಿ ವಿಶಿಷ್ಟ ಸ್ಥಾನವನ್ನು ಹೊಂದಿರುವ ಭಜನೆ ಭಗವಂತನನ್ನು ಒಲಿಸುವ ಸುಲಭ ಸಾಧನ. ದಾಸವರೇಣ್ಯರು ನಡೆದಾಡಿದ ಪುಣ್ಯಭೂಮಿ, ಪೊಡವಿಗೊಡೆಯ ಶ್ರೀ ಕೃಷ್ಣನ ನೆಲೆವೀಡು ಉಡುಪಿಯ ರಾಜಾoಗಣದಲ್ಲಿ ನ.10ರಂದು ಮಧ್ಯಾಹ್ನ ಗಂಟೆ 2.30ಕ್ಕೆ ನಡೆಯುವ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ದ ಭಜನಾ ತರಂಗ ಸಹಸ್ರ ಸಹಸ್ರ ಕಂಠಗಳೊಂದಿಗೆ ಎಲ್ಲೆಡೆ ಮಾರ್ಧನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದContinue reading “ನ.10ರ ‘ಸಹಸ್ರ ಕಂಠ ಬೃಹತ್ ಗೋಷ್ಠಿ ಗಾಯನ’ ಎಲ್ಲೆಡೆ ಮಾರ್ದನಿಸಿ ಭಜನಾ ಕ್ರಾಂತಿಗೆ ನಾಂದಿ ಹಾಡಲಿ: ನಾಗರಾಜ ಆಚಾರ್ಯ”

ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಾಗಿ

ಉಡುಪಿ: ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಅ.15ರಂದು ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವನ್ನು ಉದ್ದೇಶಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿContinue reading “ಬಿಜೆಪಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಾಗಿ”

ನಾಳೆ ಅ.15ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಡುಪಿಗೆ – ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ : ಕಿಶೋರ್ ಕುಮಾರ್ ಕುಂದಾಪುರ

ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆಯ ಬಿಜೆಪಿContinue reading “ನಾಳೆ ಅ.15ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಡುಪಿಗೆ – ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ : ಕಿಶೋರ್ ಕುಮಾರ್ ಕುಂದಾಪುರ”

ಶ್ರೀ ಕ್ಷೇತ್ರ ಶೀರೂರು ಮೂಲ ಮಠದಲ್ಲಿ ನಡಯಲಿರುವ ಶ್ರೀರಾಮ ತಾರಕ ಮಹಾಮಂಡಲ ಪೂಜೆಯ ಹಿರಿಯಡ್ಕ ವಲಯದ   ಸಭೆ‌

ಉಡುಪಿ: ಶೀರೂರು ಮೂಲ ಮಠ ಹಿರಿಯಡ್ಕದಲ್ಲಿ ಡಿ. 14 ಮತ್ತು 15 ರಂದು ನಡೆಯಲಿರುವ ಶ್ರೀರಾಮ ತಾರಕ ಮಹಾ ಮಂಡಲ ಪೂಜೆ, ಶ್ರೀರಾಮ ತಾರಕ ಯಾಗ, ಮನ್ಯುಸ್ತುತಿ ಯಾಗ, ವಾಯುಸ್ತುತಿ ಯಾಗ ಹಾಗೂ ದತ್ತಾತ್ರೇಯ ಯಾಗ ಪ್ರಯುಕ್ತ ಪೂರ್ವಭಾವಿ ಸಭೆ ಹಿರಿಯಡ್ಕ ಸುರಭಿ ಸಭಾಭವನಲ್ಲಿ ನಡೆಯಿತು.‌ ಸಭೆಯಲ್ಲಿ ಯಾಗದ ಉದ್ದೇಶ ಹಾಗೂ ಶೀರೂರು ಮಠದಲ್ಲಿ ಮಾಡುವ ಸಂಕಲ್ಪದ ಉದ್ದೇಶ ಶೀರೂರಿಗೂ ಅಯೋಧ್ಯೆಗೂ ಇರುವ ಸಂಬಂಧಗಳ ಬಗ್ಗೆ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಭಟ್ ವಿವರಿಸಿದರು. ಸಂಚಾಲಕರಾದ ಶ್ರೀಕಾಂತContinue reading “ಶ್ರೀ ಕ್ಷೇತ್ರ ಶೀರೂರು ಮೂಲ ಮಠದಲ್ಲಿ ನಡಯಲಿರುವ ಶ್ರೀರಾಮ ತಾರಕ ಮಹಾಮಂಡಲ ಪೂಜೆಯ ಹಿರಿಯಡ್ಕ ವಲಯದ   ಸಭೆ‌”

Design a site like this with WordPress.com
Get started