ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ಚತುರ್ಥಿ ತಿಥಿ,ಮಧ್ಯಾಹ್ನ 2:35 ನಂತರ ಪಂಚಮಿ ತಿಥಿ,ಶುಕ್ರವಾರ, ಪೂರ್ವಫಾಲ್ಗುಣಿ ನಕ್ಷತ್ರಸಂಜೆ 4:02 ಉತ್ತರ ಫಾಲ್ಗುಣಿ ನಕ್ಷತ್ರ ರಾಹುಕಾಲ: ಬೆಳಗ್ಗೆ 10:54 ರಿಂದ 12:29ಗುಳಿಕಕಾಲ: ಬೆಳಗ್ಗೆ 7:44 ರಿಂದ 9:19ಯಮಗಂಡಕಾಲ: ಮಧ್ಯಾಹ್ನ 3:40 ರಿಂದ 5:15 ಮೇಷ ಬೇರೆಯವರ ಅಪಹಾಸ್ಯಕ್ಕೆ ಗುರಿಯಾಗುವ ಸಾಧ್ಯತೆಯಿದ್ದು ಗಂಭೀರ ನಡವಳಿಕೆ ಅಗತ್ಯ. ಮಾನಸಿಕ ಚಂಚಲತೆಯುಂಟಾಗಿ ದುಸ್ವಪ್ನಗಳು ಉಂಟಾಗಬಹುದು. ಮನೆಯವರ ಆರೋಗ್ಯದೆಡೆಗೆ ಹೆಚ್ಚಿನ ಗಮನ ಅಗತ್ಯ. ವೃಷಭ ಹಿರಿಯರೊಂದಿಗೆ ವಿಧೇಯತೆಯಿಂದ ನಡೆದುಕೊಳ್ಳಿ. ಸಾಮಾಜಿಕ ಕಾರ್ಯಗಳಿಂದಾಗಿContinue reading “ಜುಲೈ 24,2020;ಶುಕ್ರವಾರ: ಇಂದಿನ ರಾಶಿಭವಿಷ್ಯ”
Author Archives: ಜನತಾಲೋಕವಾಣಿ.com
ಇಂದಿನ ಔಷಧೀಯ ಸಸ್ಯದ ಪರಿಚಯ: ತಂಗಡೀಗಿಡ
ಆವರ್ತಿಕಿ, ಆವರಿಕೆ, ತಂಗಡಿಗಿಡ, ಹೊ’ನ್ನಂಬರಿ, ತಂಗಡಿಚೆಟ್ಟು, ಆ’ವರಮ್ ಪೂ, ಚರ್ಮರಂಗ, ಮಾಯಹರಿ, ಆ’ವರ್ತಿಕಾ ಎಂಬಾ ಹೆಸರುಗಳಿಂದ ಕರೆಯುತ್ತಾರೆ.ಕಾಡುಗಳಲ್ಲಿ, ಬೆಟ್ಟಗುಡ್ಡ ಪ್ರ’ದೇಶಗಳಲ್ಲಿ, ಪಾಳು ಭೂಮಿ, ರಸ್ತೆಗಳ ಪಕ್ಕ ಎಲ್ಲೆಂದರಲ್ಲಿ ಸ್ವಾಭಾವಿಕವಾಗಿ 3 ರಿಂದ 6 ಅಡಿ ಎ’ತ್ತರವಾಗಿ ಪೊದೆಯಂತೆ ಬೆಳೆಯುತ್ತದೆ. ತಂಗಡಿಯಲ್ಲಿ, ತಂಗಡಿ, ನೆ^ಲತಂಗಡಿ, ಮರತಂಗಡಿ, ಸೀ’ಮೆತಂಗಡಿ, ಕಾಡು ತಂಗಡಿ ಎಂಬ ಹತ್ತಾರು ಪ್ರಭೇದಗಳಿದ್ದುರು, ಅ’ವುಗಳಲ್ಲೂ ಔಷಧೀಯ ಗುಣಗಳಿದ್ದರು, ಔಷಧೀಯವಾಗಿ ಉಪ’ಯೋಗಿಸುವುದು ಈ ಕೆಳಗಿನ ಚಿ’ತ್ರದಲ್ಲಿರುವ ತಂಗಡಿ ಗಿಡವನ್ನೆ. ತಂಗಡಿ ಎಲ್ಲೆಂದರಲ್ಲಿ ಬೆಳೆಯುವ ಗಿ’ಡವೆಂದು ಜನರಲ್ಲಿ ತಾತ್ಸಾ’ರವಿದ್ದರೂ, ತಂಗಡಿContinue reading “ಇಂದಿನ ಔಷಧೀಯ ಸಸ್ಯದ ಪರಿಚಯ: ತಂಗಡೀಗಿಡ”
ಉಡುಪಿಯಲ್ಲಿ ಸಮುದಾಯ ಮಟ್ಟದಲ್ಲಿ ಸೋಂಕು: ಡಾ.ಶಶಿಕಿರಣ್ ಎಚ್ಚರಿಕೆ.
ಉಡುಪಿ: ಜಿಲ್ಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶೀತಜ್ವರ ರೋಗ ಲಕ್ಷಣ ಇರುವವರರಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸಮುದಾಯ ಮಟ್ಟದಲ್ಲಿ ಸೋಂಕು ಹರಡಿರುವ ಭೀತಿ ಸೃಷ್ಟಿಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಡಾ.ಟಿಎಂಎ ಪೈ ಆಸ್ಪತ್ರೆಯ ತಜ್ಞ ವೈದ್ಯ ಡಾ.ಶಶಿಕಿರಣ್ ಉಮಾಕಾಂತ್.
ಜುಲೈ 23, 2020; ಗುರುವಾರ: ಇಂದಿನ ರಾಶಿಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವರ್ಷ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ತೃತೀಯಾ ತಿಥಿ,ಸಂಜೆ 5:04 ನಂತರ ಚತುರ್ಥಿ,ಗುರುವಾರ, ಮಖ ನಕ್ಷತ್ರ,ಸಂಜೆ 5:08 ಪೂರ್ವಫಾಲ್ಗುಣಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 2:05 ರಿಂದ 3:41ಗುಳಿಕಕಾಲ: ಬೆಳಗ್ಗೆ 9:18 ರಿಂದ 10:54ಯಮಗಂಡಕಾಲ: ಬೆಳಗ್ಗೆ 6:07 ರಿಂದ 7:42 ಮೇಷ ವಾಹನ ಖರೀದಿಯ ಅವಕಾಶಗಳು ಕಂಡುಬರುತ್ತಿವೆ. ಸ್ವಉದ್ಯೋಗಗಳಲ್ಲಿ ತೊಡಗಿಕೊಳ್ಳಲು ಸಕಾಲ. ಸಣ್ಣ ವ್ಯಾಪಾರ, ಗುಡಿ ಕೈಗಾರಿಕೆಗಳಿಂದ ಲಾಭ. ದೊಡ್ಡ ಉದ್ಯಮಕ್ಕೆ ಯೋಜನೆಗಳು ಹೊಂದಾಣಿಕೆಯಾಗುವವು. ವೃಷಭ ಆದಾಯಕ್ಕೂ ಮೀರಿದ ಖರ್ಚು ತಲೆದೋರಬಹುದು. ಭೂ ಸಂಬಂಧಿContinue reading “ಜುಲೈ 23, 2020; ಗುರುವಾರ: ಇಂದಿನ ರಾಶಿಭವಿಷ್ಯ”
ಇಂದಿನ ಔಷಧೀಯ ಸಸ್ಯ ಪರಿಚಯ: ಕೋಕಿಲಾಕ್ಷ
ಕೋಕಿಲಾಕ್ಷ ಕೋಕಿಲಾಕ್ಷಿ, ಕೊಳವಳಿಕೆ, ಗೊರ್ಮಿಟಿ, ನೀರ್ ಗುಬ್ಲಿ, ಕೊಳವಂಕ, ನೀರ್ ಮುಳ್ಳಿ, ವನಶೃಂಗಾರಮು,ನೀಟಿ ಗೊಬ್ಬಿ, ಕುಲಿಖಾರ, ತಲ್ಮಖಾನ, ಉಂಡಗಮ್ ಎಂಬ ಹೆಸರುಗಳಿಂದ ಕರೆಯುತ್ತಾರೆ.ಈ ಗಿಡವು ತೇವಾಂಶ ಇರುವ ಕಡೆ ಹೆಚ್ಚಾಗಿ ಬೆಳೆಯುತ್ತೆ.ಕೆರೆ ಕುಂಟೆಗಳ ಸುತ್ತಲೂ, ನೀರು ಹರಿಯುವ ಕಾಲುವೆಗಳ ಪಕ್ಕ, ಗದ್ದೆಗಳ ಬದಿಗಳ ಮೇಲೆ 2 ರಿಂದ 3 ಅಡಿ ಬೆಳೆಯುವ ಮುಳ್ಳಿನ ಗಿಡವಾಗಿದ್ದು, ಸಮೂಲ ಸಹಿತ ಅಪಾರ ಔಷಧಿ ಗುಣಗಳನ್ನು ಹೊಂದಿದೆ.ಅನೇಕ ಪ್ರಾಂತ್ಯಗಳಲ್ಲಿ ಕೊಳವಳಿಕೆ ಗಿಡದ ಸೊಪ್ಪಿನಿಂದ ಪಲ್ಯ, ಸಾಂಬಾರ್ ಮಾಡಿ ತಿನ್ನುತ್ತಾರೆ.ಇದು ಸೇವಿಸಲು ತುಂಬಾContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಕೋಕಿಲಾಕ್ಷ”
ಬಿ.ಎಸ್. ಯಡಿಯೂರಪ್ಪರವರು ಸೂಚಿಸಿದ ಐವರು ಅಭ್ಯರ್ಥಿಗಳು MLC ಗಳಾಗಿ ಆಯ್ಕೆ
ವಿಧಾನ ಪರಿಷತ್ ಗೆ ಐವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಐವರ ಹೆಸರನ್ನು ಶಿಫಾರಸು ಮಾಡಿದ್ದು ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವಲ್ಲಿ ನೆರವಾಗಿದ್ದ ಮಾಜಿ ಸಂಸದ ಹೆಚ್. ವಿಶ್ವನಾಥ್, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರಿಗೆ ಅವಕಾಶ ಸಿಕ್ಕಿದೆ. ಅದೇ ರೀತಿ ಭಾರತಿ ಶೆಟ್ಟಿ, ಶಾಂತಾರಾಮ್ ಸಿದ್ದಿ ಮತ್ತು ತಳವಾರ್ ಸಾಬಣ್ಣ ಅವರ ಹೆಸರಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದContinue reading “ಬಿ.ಎಸ್. ಯಡಿಯೂರಪ್ಪರವರು ಸೂಚಿಸಿದ ಐವರು ಅಭ್ಯರ್ಥಿಗಳು MLC ಗಳಾಗಿ ಆಯ್ಕೆ”
18 ಕೋಟಿ ಭಾರತೀಯರಿಗೆ ಈಗಾಗಲೇ ಕೊರೋನಾ ಬಂದು ಗುಣಮುಖವಾಗಿದೆ ಇದು ಅಶ್ಚರ್ಯವೆನಿಸಿದರೂ ಸತ್ಯ..
ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 11 ಲಕ್ಷ ಗಡಿ ದಾಟಿರುವಂತೆಯೇ ಇತ್ತ ಅಧ್ಯಯನವೊಂದು ಈಗಾಗಲೇ 18 ಕೋಟಿ ಭಾರತೀಯರಲ್ಲಿ ಕೊರೋನಾ ವೈರಸ್ ಬಂದು ಹೋಗಿದೆ ಎಂಬ ಅಚ್ಚರಿ ಅಂಶವನ್ನು ಬಯಲು ಮಾಡಿದೆ. ಹೌದು. ಖ್ಯಾತ ಖಾಸಗಿ ಪರೀಕ್ಷಾ ಲ್ಯಾಬ್ ಸಂಸ್ಥೆ ಥೈರೋಕೇರ್ ಈ ಬಗ್ಗೆ ಮಾಹಿತಿ ನೀಡಿದ್ದು, ತಾನು ನಡೆಸಿದ ಅಧ್ಯಯನದಲ್ಲಿ ದೇಶದ ಸುಮಾರು 18 ಕೋಟಿ ಭಾರತೀಯರಲ್ಲಿ ಈಗಾಗಲೇ ಕೊರೋನಾ ವೈರಸ್ ಬಂದು ಹೋಗಿದೆ ಎಂದು ಹೇಳಿದೆ. ಕೊರೋನಾ ವೈರಸ್ ಸೈಲೆಂಟ್ ಆಗಿ ಎಲ್ಲರನ್ನೂContinue reading “18 ಕೋಟಿ ಭಾರತೀಯರಿಗೆ ಈಗಾಗಲೇ ಕೊರೋನಾ ಬಂದು ಗುಣಮುಖವಾಗಿದೆ ಇದು ಅಶ್ಚರ್ಯವೆನಿಸಿದರೂ ಸತ್ಯ..”
ಜುಲೈ 22,2020; ಬುಧವಾರ: ಇಂದಿಶ ರಾಶಿ ಭವಿಷ್ಯ
ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವಸಂತ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದ್ವಿತೀಯಾ ತಿಥಿ,ಬುಧವಾರ, ಆಶ್ಲೇಷ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:54 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:42 ರಿಂದ 9:18 ಮೇಷ ಉದ್ಯೋಗದ ವಿಷಯದಲ್ಲಿ ಭಾಗ್ಯೋದಯದ ವಾರ್ತೆಯನ್ನು ಕೇಳಲಿದ್ದೀರಿ. ಮಿತ್ರರ ಔದಾರ್ಯವು ದೊರಕುವುದು. ಆರ್ಥಿಕ ಅಭಿವೃದ್ಧಿ ಕಾಣುವಿರಿ. ಬಂಧುಗಳೊಂದಿಗೆ ಅತಿಯಾದ ಜಿಗುಟುತನದಿಂದಾಗಿ ವಿರಸ. ವೃಷಭ ವ್ಯವಹಾರದಲ್ಲಿ ಹೊಸ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ. ಹತ್ತಿ, ಬಟ್ಟೆ ವ್ಯಾಪಾರದಿಂದ ಅಧಿಕ ಲಾಭವನ್ನು ಹೊಂದುವಿರಿ. ಗುತ್ತಿಗೆ ಕೆಲಸContinue reading “ಜುಲೈ 22,2020; ಬುಧವಾರ: ಇಂದಿಶ ರಾಶಿ ಭವಿಷ್ಯ”
ಇಂದಿನ ಔಷಧೀಯ ಸಸ್ಯ ಪರಿಚಯ: ಹಾಲುಕುಡಿ ಬಳ್ಳಿ
ದುಗ್ಧಿಕಾ (ಹಾಲು ಬಳ್ಳಿ )ಕೆಂಪು ನೆನೆ ಅಕ್ಕಿಗಿಡ, ಬಿಳಿ ನೆನೆಅಕ್ಕಿಗಿಡ, ದೊಡ್ಡ ಹಾಲುಕುಡಿ, ಸಣ್ಣ ಹಾಲುಕುಡಿ,ಅಚ್ಚೆಗಿಡ,ರೆಡ್ಡಿವಾರು ನಾನಬಾಲ, ಪಾಲುಕಾಡ, ನಾಗಾರ್ಜುನಿ, ನಾನಪಾಲ ಪಚ್ಚಪೋಟ್ಲಾಕು, ಅಮ್ಮನ್ ಪಚ್ಚೆರಸಿ, ನೀಲಪಾಳೈ ಎಂಬ ಹೆಸರುಗಳಿಂದ ಕರೆಯುತ್ತಾರೆ. ಈ ಸಸ್ಯವು ತೋಟ, ಹೊಲ, ಸಾಗುವಳಿ ಭೂಮಿ, ರಸ್ತೆಗಳ ಪಕ್ಕ, ಪಾಳು ಭೂಮಿ, ನೀರು ಹರಿಯುವ ಕಾಲುವೆಗಳ ಪಕ್ಕ,ತೇವಾಂಶ ಹೆಚ್ಚು ಇರುವ ಕಡೆ ಕಳೆಯಂತೆ ಬೆಳೆಯುತ್ತೆ.ಇದರಲ್ಲಿ ಕೆಂಪು ಹಾಗು ಬಿಳಿಯ ಬಣ್ಣದ ಎರಡು ಪ್ರಭೇದಗಳಿದ್ದು, 1/2 -1 ಅಡಿ ನೆಲದಲ್ಲಿ ಹಬ್ಬಿ ಬೆಳೆಯುತ್ತವೆ. ದೇಹದಲ್ಲಿContinue reading “ಇಂದಿನ ಔಷಧೀಯ ಸಸ್ಯ ಪರಿಚಯ: ಹಾಲುಕುಡಿ ಬಳ್ಳಿ”
‘ಎನ್ -95 ಮಾಸ್ಕ್ ಬಳಕೆದಾರರನ್ನು ತಕ್ಷಣ ಎಚ್ಚರಿಸಿ’ – ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ
ಜನರು ಎನ್ -95 ಮಾಸ್ಕ್ಗಳನ್ನು ಬಳಸುವುದರ ವಿರುದ್ಧವಾಗಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಪತ್ರ ಬರೆದಿದ್ದು, ಇವುಗಳು ವೈರಸ್ ಹರಡುವುದನ್ನು ತಡೆಯುವುದಿಲ್ಲ ಹಾಗೂ ಅದರ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳಿಗೆ “ಹಾನಿಕಾರಕ” ಎಂದು ತಿಳಿಸಿದೆ. ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (ಡಿಜಿಎಚ್ಎಸ್) ರಾಜ್ಯಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ, ಎನ್ -95 ಮಾಸ್ಕ್ನ “ಅನುಚಿತ ಬಳಕೆ”ಯ ಬಗ್ಗೆ ಗಮನಿಸಲಾಗಿದೆ. ನಿಗದಿ ಪಡಿಸಿದ ಆರೋಗ್ಯ ಕಾರ್ಯಕರ್ತರನ್ನು ಹೊರತುಪಡಿಸಿ ಸಾರ್ವಜನಿಕರುContinue reading “‘ಎನ್ -95 ಮಾಸ್ಕ್ ಬಳಕೆದಾರರನ್ನು ತಕ್ಷಣ ಎಚ್ಚರಿಸಿ’ – ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ”