ಉಡುಪಿ: ‘ವ್ಯಕ್ತಿಗಿಂತ ಪಕ್ಷ ಮೇಲು, ಪಕ್ಷಕ್ಕಿಂತ ದೇಶ ಮೇಲು’ ಎಂಬ ಉದಾತ್ತ ಚಿಂತನೆಯುಳ್ಳ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ಆಧಾರಿತ ರಾಜಕೀಯ ಪಕ್ಷ. ಓರ್ವ ಸಾಮಾನ್ಯ ಕಾರ್ಯಕರ್ತನೂ ಪಕ್ಷ ನಿಷ್ಠೆ ಹಾಗೂ ಬದ್ಧತೆಯಿಂದ ಹಂತ ಹಂತವಾಗಿ ಎತ್ತರಕ್ಕೇರುವ ಅವಕಾಶಗಳು ಪಕ್ಷದ ಚೌಕಟ್ಟಿನಲ್ಲಿದೆ. ಈ ನಿಟ್ಟಿನಲ್ಲಿ ಕೆಲವು ಪ್ರಚಲಿತ ವಿದ್ಯಮಾನಗಳಲ್ಲಿ ನಡೆಯುತ್ತಿರುವ ನಮ್ಮ ಪಕ್ಷದ ಶಾಸಕರ ಅವಹೇಳನವನ್ನು ಸಹಿಸಲಾಗದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಶಾಸಕರುಗಳ ಬಗ್ಗೆ ಪಕ್ಷ ಹಾಗೂContinue reading “ಪಕ್ಷದ ಶಾಸಕರ ಅವಹೇಳನ ಸಹಿಸಲಾಗದು – ಜನ ಸಾಮಾನ್ಯರ ಸಮಸ್ಯೆಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸ್ಪಂದಿಸಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”
Author Archives: ಜನತಾಲೋಕವಾಣಿ.com
ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಡೆ ಅಭಿನಂದನೀಯ: ಕುತ್ಯಾರು ನವೀನ್ ಶೆಟ್ಟಿ
ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ಮತ್ತು ಇಂಧನ ದರಗಳು ವಿಪರೀತ ಏರದಂತೆ ತಡೆಯಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದಲ್ಲಿ ಭಾರಿ ಕಡಿತವನ್ನು ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆ ಪ್ರಶಂಸನೀಯ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. ದೂರದರ್ಶಿತ್ವದ ಚಿಂತನೆಯಿಂದ ಇಂಧನ ದರ ಇಳಿಕೆ ಮೂಲಕ ಜನ ಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಇಂಧನ ಖಾತೆ ಸಚಿವರಿಗೆContinue reading “ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ನಡೆ ಅಭಿನಂದನೀಯ: ಕುತ್ಯಾರು ನವೀನ್ ಶೆಟ್ಟಿ”
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ
ಉಡುಪಿ: ಪರಿಶಿಷ್ಟ ಪಂಗಡದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಸಹಿತ ಎಸ್.ಟಿ. ಸಮುದಾಯಕ್ಕೆ ಸರಕಾರದಿಂದ ದೊರಕಬಹುದಾದ ಸೌಲಭ್ಯಗಳನ್ನು ಪರಿಚಯಿಸುವ ಜೊತೆಗೆ ಮರಾಠ ಸಮುದಾಯಕ್ಕೆ ಸೇರಿದ ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ಜೀವನಾದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ನೇತೃತ್ವದಲ್ಲಿ ಮಾ.15 ರವಿವಾರ ಸಂಜೆ ಗಂಟೆ 4.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಶಿವಾಜಿ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆContinue reading “ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ”
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉಡುಪಿ: ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ನೀತಾ ಪ್ರಭು ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಂಜಿಬೆಟ್ಟು ಮಾಂಡವಿ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಡಾ! ರಾಜಲಕ್ಷ್ಮಿ ಅವರು ಗಣ್ಯರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಶಕುಂತಲಾ ಶೆಟ್ಟಿ – ಹೈನುಗಾರಿಕೆ, ವಿಮಲ – ಸಂಜೀವಿನಿ ಗ್ರೂಪ್, ಅನುಷಾ – ವಕೀಲರು, ಸುಶೀಲ ಸಾಲಿಯಾನ್ – ಮಹಿಳಾ ಹೋಮ್Continue reading “ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ”
ಸಾಲದ ಹೊರೆಯೊಂದಿಗೆ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ರಾಜ್ಯ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೇರಿಸಿರುವ ಜೊತೆಗೆ ಈಗಾಗಲೇ ವಿಧಿಸಿರುವ ದುಬಾರಿ ತೆರಿಗೆಗಳ ಮೂಲಕ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಅಧಿಕಾರಕ್ಕಾಗಿ ಜಾರಿಗೊಳಿಸಿದ್ದ ಗ್ಯಾರಂಟಿಗಳ ನಿರ್ವಹಣೆಗೆ ಪರದಾಡುತ್ತಿರುವ ರಾಜ್ಯ ಸರಕಾರ ಯುವ ನಿಧಿ ಗ್ಯಾರಂಟಿಗೆ ಎಳ್ಳು ನೀರು ಬಿಟ್ಟಂತಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಯಾವುದೇ ದೃಢ ಯೋಜನೆಗಳನ್ನು ರೂಪಿಸಿಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಚಿತ ಯೋಜನೆಗಳಲ್ಲಿContinue reading “ಸಾಲದ ಹೊರೆಯೊಂದಿಗೆ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ರಾಜ್ಯ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ”
ಸಿದ್ದರಾಮಯ್ಯ ಸರಕಾರದ ‘ಸಾಲ ಗ್ಯಾರಂಟಿ’ ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್
17 ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ಎಲ್ಲೋ ಸಾಲ ಮಾಡಿಯಾದ್ರೂ ಅಧಿಕಾರಕ್ಕೆ ಅಂಟಿಕೊಳ್ಳುವ ಕಸರತ್ತು ಮಾಡಿದಂತೆ ತೋರುತ್ತಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ರಾಜ್ಯದ ಒಟ್ಟು ಸಾಲ ರೂ.8,24,389 ಕೋಟಿಗೆ ಏರಿದೆ. ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ ಮಾತ್ರ. ಈ ಸಾಲಿನ ಬಹಿರಂಗ ಮಾರುಕಟ್ಟೆ ಸಾಲದ ಗಾತ್ರವೇ ರೂ.1,22,340 ಕೋಟಿ. ರಾಜ್ಯವನ್ನು ಎತ್ತ ತೆಗೆದುಕೊಂಡು ಹೋಗುತ್ತಿದ್ದೀರಿ ಸ್ವಾಮಿ? ಕೇಂದ್ರದ ಬಜೆಟ್ ಬಂದ ಕೂಡಲೇ ಕರ್ನಾಟಕಕ್ಕೆ ಅನ್ಯಾಯ ಎಂದುContinue reading “ಸಿದ್ದರಾಮಯ್ಯ ಸರಕಾರದ ‘ಸಾಲ ಗ್ಯಾರಂಟಿ’ ಬಜೆಟ್ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್”
ರಾಷ್ಟೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ನಿರ್ಮಾಣದ ಅವಧಿಯೊಳಗೆ ಅಗಲ ಕಿರಿದಾದ ಸರ್ವಿಸ್ ರಸ್ತೆ, ಸಂಪರ್ಕ ರಸ್ತೆ ಹಾಗೂ ಇತರ ಪೂರಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸಲು ತುರ್ತಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಲು ಯೋಜನಾ ನಿರ್ದೇಶಕರು ಮತ್ತು ಅನುಷ್ಠಾನ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ಇವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಉಡುಪಿ, ಫೆ.17 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಯೋಜನಾ ನಿರ್ದೇಶಕ ಮತ್ತು ಅನುಷ್ಠಾನ ಅಧಿಕಾರಿ, ಮಂಗಳೂರು ಅಬ್ದುಲ್ ಜಾವೆದ್ ಆಜ್ಮಿ ಹಾಗೂ ಇತರ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ಕಾಮಗಾರಿಯ ಸ್ಥಳಕ್ಕೆ ಫೆ.16ರಂದು ಸಂಜೆ ಬೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಭಾಸ್ಕರ ಶೆಟ್ಟಿ ಕಡೆಕಾರು ಅವರContinue reading “ರಾಷ್ಟೀಯ ಹೆದ್ದಾರಿ 66 ಅಂಬಲಪಾಡಿ ಜಂಕ್ಷನ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ನಿರ್ಮಾಣದ ಅವಧಿಯೊಳಗೆ ಅಗಲ ಕಿರಿದಾದ ಸರ್ವಿಸ್ ರಸ್ತೆ, ಸಂಪರ್ಕ ರಸ್ತೆ ಹಾಗೂ ಇತರ ಪೂರಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸಲು ತುರ್ತಾಗಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳಲು ಯೋಜನಾ ನಿರ್ದೇಶಕರು ಮತ್ತು ಅನುಷ್ಠಾನ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ಇವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ”
ಹಿಂದೂ ಸಂಗಮ ಆಯೋಜನಾ ಸಮಿತಿ ಅಂಬಲಪಾಡಿ ವಸತಿ : ಹಿಂದೂ ಸಂಗಮ, ಶೋಭಾಯಾತ್ರೆ
ಉಡುಪಿ:ಫೆ.15 ರವಿವಾರ ಸಂಜೆ ಅಂಬಲಪಾಡಿ ದೇವಸ್ಥಾನದ ಬಳಿ ನೂರಾರು ಹಿಂದೂ ಭಾಂದವರ ಸಮಾಗಮದೊಂದಿಗೆ ನಡೆದ ಬೃಹತ್ ಶೋಭಾಯಾತ್ರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಚಾಲನೆ ನೀಡಿದರು. ಶೋಭಾಯಾತ್ರೆಯು ಅಂಬಲಪಾಡಿ ಮಹಾಕಾಳಿ ಮಾರ್ಗ, ಬೀಡು ಮಾರ್ಗ, ಆನಂದ ರಾವ್ ಮಾರ್ಗವಾಗಿ ಮುಖ್ಯ ರಸ್ತೆ ಮೂಲಕ ಸಾಗಿ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಸಮಾಪನಗೊಂಡಿತು. ಅಂಬಲಪಾಡಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆದ ಹಿಂದೂ ಸಂಗಮದ ಸಾರ್ವಜನಿಕ ಸಭೆಯContinue reading “ಹಿಂದೂ ಸಂಗಮ ಆಯೋಜನಾ ಸಮಿತಿ ಅಂಬಲಪಾಡಿ ವಸತಿ : ಹಿಂದೂ ಸಂಗಮ, ಶೋಭಾಯಾತ್ರೆ”
ರಾ.ಹೆ. 66 ಅಂಬಲಪಾಡಿ ಪ್ರಗತಿ ಪರಿಶೀಲನೆ, ಸರ್ವಿಸ್ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ
ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ವಿವಿಧ ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಭೂಸ್ವಾದೀನ ಮಾಡಿರುವ ದಾಖಲೆಗಳ ಸಹಿತ ಅಧಿಕಾರಿಗಳೊಂದಿಗೆ ನಿಗದಿತ ಕಾಲ ಮಿತಿಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಮಾರ್ಕಿಂಗ್ ಮಾಡುವ ಮೂಲಕ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ರಾ.ಹೆ.66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಗೆ ಭೂಸ್ವಾದೀನ ಮಾಡಿರುವ ಸ್ಥಳದಲ್ಲಿContinue reading “ರಾ.ಹೆ. 66 ಅಂಬಲಪಾಡಿ ಪ್ರಗತಿ ಪರಿಶೀಲನೆ, ಸರ್ವಿಸ್ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ”
ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಕೇಂದ್ರ ಬಜೆಟ್ 2026ರ ಕುರಿತು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದContinue reading “ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್”