ಗ್ಯಾರಂಟಿ ನೆಪದಲ್ಲಿ ಬೆಲೆ ಏರಿಕೆಯ ಬರೆ ಎಳೆದ ಕಾಂಗ್ರೆಸ್ ಗೆ ಕಾಮಗಾರಿಯ ಮುಕ್ತಾಯ ಹಂತದಲ್ಲಿ ಪ್ರಹಸನ ನಡೆಸುವ ಯಾವುದೇ ನೈತಿಕತೆ ಇಲ್ಲ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಗ್ಯಾರಂಟಿಗಳ ಆಸೆ ತೋರಿಸಿ ಅಗತ್ಯ ವಸ್ತುಗಳ ಬೆಲೆಯನ್ನು ಯದ್ವಾತದ್ವಾ ಏರಿಸಿ ಜನಸಾಮಾನ್ಯರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಗೆ ಅಂತಿಮ ಹಂತ ತಲುಪಿರುವ ಇಂದ್ರಾಳಿ ರೈಲ್ವೇ ಬ್ರಿಡ್ಜ್ ನಿರ್ಮಾಣ ಕಾಮಗಾರಿಯನ್ನು ಅಣಕಿಸಿ ಏಪ್ರಿಲ್ ಫೂಲ್ ದಿನವನ್ನು ಆಚರಿಸುವ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕ್ರಿಯಾಶೀಲ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದ್ರಾಳಿ ರೈಲ್ವೆ ಬ್ರಿಡ್ಜ್ ನಿರ್ಮಾಣ ಸಹಿತ ಉಡುಪಿ ಜಿಲ್ಲೆಯಾದ್ಯoತ ನಡೆಯುತ್ತಿರುವContinue reading “ಗ್ಯಾರಂಟಿ ನೆಪದಲ್ಲಿ ಬೆಲೆ ಏರಿಕೆಯ ಬರೆ ಎಳೆದ ಕಾಂಗ್ರೆಸ್ ಗೆ ಕಾಮಗಾರಿಯ ಮುಕ್ತಾಯ ಹಂತದಲ್ಲಿ ಪ್ರಹಸನ ನಡೆಸುವ ಯಾವುದೇ ನೈತಿಕತೆ ಇಲ್ಲ : ಕಿಶೋರ್ ಕುಮಾರ್ ಕುಂದಾಪುರ”

ಕಾಂಗ್ರೆಸ್ ಪ್ರತಿಭಟನೆ ಜನರನ್ನು ಏಪ್ರಿಲ್ ಫೂಲ್ ಮಾಡುವ ದೊಂಬರಾಟ – ಶ್ರೀಕಾಂತ ನಾಯಕ್

ಉಡುಪಿ:ನಿನ್ನೆಯಷ್ಟೇ ಕಾಂಗ್ರೆಸ್ ಪುಢಾರಿಗಳ ಒಕ್ಕೂಟ ಇಂದ್ರಾಳಿ ಸೇತುವೆ ಬಗ್ಗೆ ಪ್ರತಿಭಟನಾ ದೊಂಬರಾಟ ನಡೆಸಿದ್ದನ್ನು ಕಂಡಿದ್ದೇವೆ. ನಿನ್ನೆಯ ದಿನದ ಮಂಗಳವಾರ, ನಮ್ಮಲ್ಲಿರುವ ಪಧ್ಧತಿ, ನಂಬಿಕೆಯಂತೆ ಯಂತೆ ಕೂದಲು ಕತ್ತರಿಸುವುದು ನಿಷಿಧ್ಧ ಮತ್ತು ಅಶುಭ. ಅದರಲ್ಲೂ ತಲೆಯನ್ನೇ ಬೋಳಿಸಿ ಭಂಡತನ ಮೆರೆದ ಇವರಿಗೆ ಏನು ಹೇಳಬೇಕೋ ತಿಳಿಯದು. ಅದಿರಲಿ ಅಲ್ಲಿ ಸೇತುವೆ ಶೀಘ್ರದಲ್ಲಿ ಆಗಬೇಕು, ವಿಳಂಬವಾದುದಕ್ಕೆ ಪ್ರತಿಯೊಬ್ಬರೂ ಅಸಮಧಾನ ವ್ಯಕ್ತಪಡಿಸೋದು ಸಹಜ. ಇದರ ಬಗ್ಗೆ ಎರಡು ಮಾತಿಲ್ಲ.‌ಇನ್ನು ಪ್ರಜಾಪ್ರಭುತ್ವ ವ್ವವಸ್ಥೆಯಲ್ಲಿ ಪ್ರತಿಭಟನೆ ಎನ್ನುವುದೂ ಸಹಜ ಪ್ರಕ್ರಿಯೆ. ಆದರೆ ಇವರು ನಿಜವಾಗಿContinue reading “ಕಾಂಗ್ರೆಸ್ ಪ್ರತಿಭಟನೆ ಜನರನ್ನು ಏಪ್ರಿಲ್ ಫೂಲ್ ಮಾಡುವ ದೊಂಬರಾಟ – ಶ್ರೀಕಾಂತ ನಾಯಕ್”

ಉಡುಪಿಯ ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣದ ಬಗ್ಗೆ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ ಯಾಕೆ ತುಟಿ ಬಿಚ್ಚುತ್ತಿಲ್ಲ? : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಢಾಲ್ಫ್ ಡಿಸೋಜ ಆಕ್ರೋಶ

ಉಡುಪಿ: ಇತ್ತೀಚಿಗೆ ನಡೆದ ಉಡುಪಿಯ ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣದ ಬಗ್ಗೆ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಢಾಲ್ಫ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನ್ನದೇ ಧರ್ಮದ ಯುವತಿಯನ್ನು ಅಪಹರಿಸಿ ಬ್ಲಾಕ್ ಮೇಲ್ ಮಾಡಿ ಲವ್ ಜಿಹಾದ್ ಮಾಡಲು ಹೊರಟಿರುವ ಅಕ್ರಮ್ ಎಂಬ ರೌಡಿ ಶೀಟರ್ ನನ್ನು ಬಂಧಿಸಲು ಮೀನ ಮೇಷ ಎಣಿಸುತ್ತಾ ಕಾಲ ಹರಣ ಮಾಡುತ್ತಿರುವ ಉಡುಪಿ ನಗರ ಪೊಲೀಸ್Continue reading “ಉಡುಪಿಯ ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣದ ಬಗ್ಗೆ ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಜತ್ತನ್ ಯಾಕೆ ತುಟಿ ಬಿಚ್ಚುತ್ತಿಲ್ಲ? : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ರುಢಾಲ್ಫ್ ಡಿಸೋಜ ಆಕ್ರೋಶ”

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಲವ್ ಜಿಹಾದ್’ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ

ಉಡುಪಿ: ಇತ್ತೀಚೆಗೆ ಉಡುಪಿಯಲ್ಲಿ ಬ್ಲಾಕ್ ಮೇಲ್ ತಂತ್ರದ ಮೂಲಕ ಹುಡುಗಿಯ ಅಪಹರಣ ನಡೆದಿರುವ ಕುರಿತು ಸ್ವತಃ ಹುಡುಗಿಯ ಹೆತ್ತವರು ಪ್ರಕರಣ ದಾಖಲಿಸಿದ್ದರೂ ಆರೋಪಿಯನ್ನು ಬಂಧಿಸಲು ಮೀನ ಮೇಷ ಎಣಿಸುತ್ತಾ ವಿಳಂಬ ಧೋರಣೆ ಅನುಸರಿಸುತ್ತಿರುವ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸರ ವರ್ತನೆಗೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಸಮಾಜದಲ್ಲಿ ಯಾವುದೇ ಹೆಣ್ಣು ಮಕ್ಕಳಿಗೆ ತೊಂದರೆ ಸಂಭವಿಸಿದಾಗ ಅದನ್ನು ಧರ್ಮಾತೀತವಾಗಿ ತೀವ್ರವಾಗಿ ಖಂಡಿಸಿರುವುದನ್ನು ಜಿಲ್ಲಾ ಅಲ್ಪಸಂಖ್ಯಾತContinue reading “ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಲವ್ ಜಿಹಾದ್’ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ”

BSW ಪದವಿ ಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಕು.ಶ್ರೀನಿಧಿ ಯವರಿಗೆ ಹುಟ್ಟೂರ ಸನ್ಮಾನ

ಕಾಪು: ಅಲೆವೂರು ರಾಮಪುರದ ಶ್ರೀಪತಿ‌ ಆಚಾರ್ಯ ಮತ್ತು ಇಂದಿರಾ ಇವರ ಪುತ್ರಿ ಕು. ಶ್ರೀನಿಧಿ ಬಿ ಎಸ್ ರವರು ಮಂಗಳೂರು ವಿಶ್ವವಿದ್ಯಾನಿಲಯದ ಬಿಎಸ್ ಡಬ್ಲ್ಯೂ ಪದವಿ ಪರೀಕ್ಷೆಯಲ್ಲಿ ಪ್ರಥಮ   ರ‍್ಯಾಂಕ್ ಪಡೆದಿದ್ದು‌ ಅವರನ್ನು ಅವರ ಸ್ವಗ್ರಹದಲ್ಲಿ ಬೂತ್ ಅಧ್ಯಕ್ಷರಾದ ನಾರಾಯಣ ಆಚಾರ್ಯ‌ ಇವರ ನೇತ್ರತ್ವದಲ್ಲಿ ಸನ್ಮಾನ ಮಾಡಿ ಗೌರವಿಸಿ  ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ‌ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ  ಶ್ರೀಕಾಂತ್ ನಾಯಕ್,ಹಿರಿಯರಾದ ಅಶೋಕ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ಅರುಣ್ ಆಚಾರ್ಯ, ಹರೀಶ್ ಶೆಟ್ಟಿಗಾರ್, ಸುಧಾಮ ರಾಮಪುರ,Continue reading “BSW ಪದವಿ ಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಕು.ಶ್ರೀನಿಧಿ ಯವರಿಗೆ ಹುಟ್ಟೂರ ಸನ್ಮಾನ”

ಮಾ.15: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ

ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15ರ ಬೆಳಿಗ್ಗೆ ಗಂಟೆ 9.30ಕ್ಕೆ ಕಾಪು ಶ್ರೀ ಹೊಸ ಮಾರಿಗುಡಿContinue reading “ಮಾ.15: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ”

ಮಾ.8 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ವಿಶ್ವ ಮಹಿಳಾ ದಿನಾಚರಣೆ’, ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಎನ್.ಸಿ.ಡಿ. ವಿಭಾಗ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಮ್.ಸಿ. ದಂತ ವೈದ್ಯಕೀಯ ವಿಭಾಗ ಮಣಿಪಾಲ ಹಾಗೂ ಅಪ್ಪು ಅಭಿಮಾನಿಗಳ ಬಳಗ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’ವು ಮಾ.8 ಶನಿವಾರ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆ 12.30ರContinue reading “ಮಾ.8 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ವಿಶ್ವ ಮಹಿಳಾ ದಿನಾಚರಣೆ’, ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’”

ಮಾ.2 : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಉಡುಪಿಗೆ

ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.2 ರವಿವಾರ ಉಡುಪಿಗೆ ಬೇಟಿ ನೀಡಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಆಗಮಿಸಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಹಣ ದುರ್ಬಳಕೆ ಮಾಡಿದ ದಲಿತ ದ್ರೋಹಿ’ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ:ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ (ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ.) ಸುಮಾರು ರೂ 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ದಲಿತ ದ್ರೋಹಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಅವರು ಸೋಮವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನಾಂದೋಲನವನ್ನುContinue reading “ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಹಣ ದುರ್ಬಳಕೆ ಮಾಡಿದ ದಲಿತ ದ್ರೋಹಿ’ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ”

ತಾಲೂಕು ಭಜನಾ ಪರಿಷತ್ತನ್ನು ವಲಯ ಮಟ್ಟದಿಂದ ಸದೃಢಗೊಳಿಸಲು ರಾಜೇಂದ್ರ ಕುಮಾರ್ ಬಸ್ರೂರು ಕರೆ

ಉಡುಪಿ : ಆತ್ಮವಿಶ್ವಾಸದ ವೃದ್ಧಿಯ ಜೊತೆಗೆ ಭಗವಂತನ ಸಾಕ್ಷಾತ್ಕಾರವನ್ನು ಕಂಡುಕೊಳ್ಳಲು ಇರುವ ಸುಲಭ ದಾರಿ ಭಜನೆ. ಇಂದು ಭಜನೆಯತ್ತ ಯುವ ಸಮುದಾಯದ ಸಹಿತ ಎಲ್ಲ ವರ್ಗದ ಜನತೆ ಆಕರ್ಷಿತರಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲ ವಲಯಗಳ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಭಜನಾ ಮಂಡಳಿಗಳನ್ನು ಸಂಘಟಿಸುವ ಮೂಲಕ ಭಜನಾ ಪರಿಷತ್ತನ್ನು ಇನ್ನಷ್ಟು ಸದೃಢವಾಗಿ ಬೆಳೆಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹೇಳಿದರು. ಅವರು ಶ್ರೀ ಕ್ಷೇ.ಧ.Continue reading “ತಾಲೂಕು ಭಜನಾ ಪರಿಷತ್ತನ್ನು ವಲಯ ಮಟ್ಟದಿಂದ ಸದೃಢಗೊಳಿಸಲು ರಾಜೇಂದ್ರ ಕುಮಾರ್ ಬಸ್ರೂರು ಕರೆ”

Design a site like this with WordPress.com
Get started