ಬೆಂಗಳೂರು ಜನತೆಯಿಂದ  ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ : ಸಂಧ್ಯಾ ರಮೇಶ್

ಉಡುಪಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯನಗರ ಕ್ಷೇತ್ರದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡು ಜನತೆಯಿಂದ ತಿರಸ್ಕೃತರಾದ ಸೌಮ್ಯ ರೆಡ್ಡಿ ಅವರಿಂದ ಉಡುಪಿಯ ಜನತೆಗೆ ಕೋಮು ಸಾಮರಸ್ಯ ಮತ್ತು ಅಭಿವೃದ್ಧಿಯ ಕುರಿತು ಬಿಟ್ಟಿ ಉಪದೇಶ ಅಗತ್ಯವಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್   ವ್ಯಂಗ್ಯವಾಡಿದ್ದಾರೆ. ಉಚಿತ ಗ್ಯಾರಂಟಿ ಭರವಸೆಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಉಡುಪಿ ಜಿಲ್ಲೆಯ ಪ್ರಜ್ಞಾವಂತ ಮತದಾರರುContinue reading “ಬೆಂಗಳೂರು ಜನತೆಯಿಂದ  ತಿರಸ್ಕೃತ ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ : ಸಂಧ್ಯಾ ರಮೇಶ್”

ಪ್ರೀತಮ್ ನಾಯಕ್ ಅವರಿಗೆ ‘ಕನ್ನಡ ಸಿರಿ’ ಪ್ರಶಸ್ತಿ

ಉಡುಪಿ: ಕನ್ನಡ ಮತ್ತು ತುಳು ನಾಟಕ ರಂಗದಲ್ಲಿ ಅಭಿನಯಿಸಿ, ಬಳಿಕ ತುಳು, ಕನ್ನಡ ಚಲನ ಚಿತ್ರಗಳ ಅಭಿನಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಸಮೀಪದ ನಿಂಜೂರಿನ ಪ್ರೀತಮ್ ನಾಯಕ್ ಅವರಿಗೆ ಮುಂಬೈಯ ಕಲಾ ಜಗತ್ತು ಸಂಸ್ಥೆಯ ವತಿಯಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಆಡಿಟೋರಿಯಂನಲ್ಲಿ ಕಲಾ ಜಗತ್ತು ಮುಂಬೈ ಇದರ ಅಧ್ಯಕ್ಷ ತೋನ್ಸೆ ವಿಜಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಕನ್ನಡ ಸಿರಿ’ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಲಾ ಜಗತ್ತುContinue reading “ಪ್ರೀತಮ್ ನಾಯಕ್ ಅವರಿಗೆ ‘ಕನ್ನಡ ಸಿರಿ’ ಪ್ರಶಸ್ತಿ”

ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ ಪ್ರಸಾದ್ ಕಾಂಚನ್ ಶ್ರೀ ಕೃಷ್ಣನ ಕೃಪೆಗೆ  ಪಾತ್ರರಾಗಲಿ : ದಿನೇಶ್ ಅಮೀನ್

ಉಡುಪಿ: ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಪ್ರಸಾದ್ ಕಾಂಚನ್ ಉಡುಪಿ ಶಾಸಕರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಾಲಿಗೆ ಶ್ರೀ ಕೃಷ್ಣನ ಕೃಪೆ ಇದೆ ಎಂಬ ಬಾಲಿಶ ಹೇಳಿಕೆ ನೀಡುವ ಬದಲು 2024ರ ಉಡುಪಿ ಪರ್ಯಾಯೋತ್ಸವದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ ಘೋಷಣೆ ಮಾಡಿದ್ದ 10 ಕೋಟಿ ರೂಪಾಯಿ ಅನುದಾನವನ್ನು ತಮ್ಮದೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಮೂಲಕ ಬಿಡುಗಡೆಗೊಳಿಸಿ ಶ್ರೀ ಕೃಷ್ಣ ಕೃಪೆಗೆ ಪಾತ್ರರಾಗಲಿ ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷContinue reading “ಕಳೆದ ಪರ್ಯಾಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಿಸಿದ್ದ 10 ಕೋಟಿ ರೂ. ಅನುದಾನ ಬಿಡುಗಡೆಗೆ ಪ್ರಯತ್ನಿಸಿ ಪ್ರಸಾದ್ ಕಾಂಚನ್ ಶ್ರೀ ಕೃಷ್ಣನ ಕೃಪೆಗೆ  ಪಾತ್ರರಾಗಲಿ : ದಿನೇಶ್ ಅಮೀನ್”

ಸ್ವಾರ್ಥಕ್ಕಾಗಿ ಇಂದಿರಾ ಗಾಂಧಿಯಿಂದ ಸಂವಿಧಾನದ ದುರುಪಯೋಗ : ಕೋಟ

ಉಡುಪಿ: ತುರ್ತು ಪರಿಸ್ಥಿತಿಯಲ್ಲಿ ಉಡುಪಿ ಚಿತ್ತರಂಜನ್ ಸರ್ಕಲ್ ಬಳಿ ‘ಭೋಲೋ ಭಾರತ್ ಮಾತಾಕಿ ಜೈ’ ಅಂದಿದ್ದಕ್ಕೆ ಡಾ! ವಿ.ಎಸ್. ಆಚಾರ್ಯ ಅವರನ್ನು ಜೈಲಿಗೆ ಹಾಕಲಾಗಿತ್ತು. ಅವರ ಪತ್ನಿ ಗರ್ಭಿಣಿ ಆಗಿದ್ದರೂ ಅವರ ಜೊತೆ ಮಾತನಾಡಲು ಬಿಟ್ಟಿರಲಿಲ್ಲ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ‘ಸಂವಿಧಾನ ಹತ್ಯಾ ದಿನ’ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 50 ವರ್ಷದ ಕೆಳಗೆ ಜೂ.25ರಂದು ಇಂದಿರಾ ಗಾಂಧಿContinue reading “ಸ್ವಾರ್ಥಕ್ಕಾಗಿ ಇಂದಿರಾ ಗಾಂಧಿಯಿಂದ ಸಂವಿಧಾನದ ದುರುಪಯೋಗ : ಕೋಟ”

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಉಡುಪಿ: ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳನ್ನು ಪುನರಾರಂಭಿಸುವ ಜೊತೆಗೆ ಹಳೆಯ ಬಸ್ ಗಳನ್ನು ಬದಲಾಯಿಸಿ, ಹೆಚ್ಚುವರಿ ಬಸ್ ಗಳ ಸೇವೆಯನ್ನು ಒದಗಿಸುವಂತೆ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ಮೋರ್ಚಾ ಅಧ್ಯಕ್ಷ ಶ್ರೀವತ್ಸ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು. ಆದರೆ ಪ್ರಸ್ತುತ 13 ನರ್ಮ್ ಬಸ್ಸುಗಳContinue reading “ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ”

ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಬೃಹತ್ ಧರಣಿ ಸತ್ಯಾಗ್ರಹ

ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷರ ಕರೆಯಂತೆ ರಾಜ್ಯ ಕಾಂಗ್ರೆಸ್ ಸರಕಾರದಿಂದ ಜನತೆ ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಶಾಸಕರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ಎದುರು ನಡೆದ ಧರಣಿ ಸತ್ಯಾಗ್ರಹದಲ್ಲಿ 9/11 ನಿವೇಶನಗಳ ಸಮಸ್ಯೆಗಳ ಪರಿಹಾರಕ್ಕೆ ಅಗ್ರಹಿಸಿ,Continue reading “ರಾಜ್ಯ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಬೃಹತ್ ಧರಣಿ ಸತ್ಯಾಗ್ರಹ”

ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜ್ ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಪೆ ಆರಕ್ಷಕ ಠಾಣೆಯ ಠಾಣಾಧಿಕಾರಿ ಗಂಗಪ್ಪ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿContinue reading “ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ”

ಅತಿ ಉಪಯುಕ್ತ ಮಾಹಿತಿ🎥

ವಿಪರೀತ ಜನಸಂದಣಿಯಲ್ಲಿ ಕಾಲ್ತುಳಿತ ಉಂಟಾದಲ್ಲಿ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದರ ಬಗ್ಗೆ ಪೋಲೀಸ್ ಇಲಾಖೆಯಿಂದ ಪ್ರಾತ್ಯಕ್ಷಿಕೆ

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ

ಉಡುಪಿ: ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸಂಸದರ ಕಛೇರಿಯಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಸಂಸದ ಕೋಟ ಅವರು ಕುತ್ಯಾರು ನವೀನ್ ಶೆಟ್ಟಿ ಅವರನ್ನು ಶಾಲು ಹೊದೆಸಿ ಗೌರವಿಸಿದರು. ಪಕ್ಷ ಪ್ರಮುಖರಾದ ರವಿ ಅಮೀನ್ ಬನ್ನಂಜೆ, ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ಪ್ರಸಾದ್ ಬಿಲ್ಲವ ಕುಂದಾಪುರ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಸತೀಶ್ ಪೂಜಾರಿ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

ಅಭಿವೃದ್ಧಿಯ ಬದ್ಧತೆಗೆ ಮೋದಿ ಆಡಳಿತದ 11 ವರ್ಷಗಳೇ ಸಾಕ್ಷಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು  ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಅವರು ‘ವಿಕಸಿತ ಭಾರತದ ಅಮೃತ ಕಾಲ’ – ‘ಸೇವೆ, ಸುಶಾಸನ, ಬಡವರ ಕಲ್ಯಾಣ’ದ ‘ಮೋದಿ ಸರಕಾರಕ್ಕೆ 11 ವರ್ಷ’ ಸಂಭ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಭಿವೃದ್ಧಿ ಜತೆಗೆContinue reading “ಅಭಿವೃದ್ಧಿಯ ಬದ್ಧತೆಗೆ ಮೋದಿ ಆಡಳಿತದ 11 ವರ್ಷಗಳೇ ಸಾಕ್ಷಿ: ಕಿಶೋರ್ ಕುಮಾರ್ ಕುಂದಾಪುರ”

Design a site like this with WordPress.com
Get started