ಕಾಪು: ಉದ್ಯಾವರ ಗರಡಿ ರಸ್ತೆಯ ಸಮೀಪದ ನಮ್ಮ ಕಾರ್ಯಕರ್ತರಾಗಿರುವ ರಕ್ಷಿತ್ ಕೋಟ್ಯಾನ್ ರವರ ಮನೆಗೆ ನುಗ್ಗಿ ಧಾಂಧಲೆ ನಡೆಸಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಖಂಡನೀಯ. ಈ ಕುರಿತಂತೆ ಪೋಲೀಸರು ಮೂರು ಜನರನ್ನು ಬಂಧಿಸಿದ್ದು ಇದರ ಮಾಸ್ಟರ್ ಮೈಂಡ್ ಉದ್ಯಾವರದ ಕಾಂಗ್ರೆಸ್ ಕಾರ್ಯಕರ್ತ ಎನ್ನುವ ಬಗ್ಗೆ ಬಂಧಿತರು ಹೇಳಿಕೆ ಕೊಟ್ಟಿದ್ದು ಪೋಲೀಸರು ಈ ಕೂಡಲೇ ಅವರನ್ನು ಬಂಧಿಸಬೇಕು. ಇಂತಹ ಗೂಂಡಾಗಿರಿಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಬಹುದು ಎಂದು ಕಾಂಗ್ರೆಸ್ ಅಂದುಕೊಂಡರೆ ಅದು ಅವರ ಭ್ರಮೆ. ತಪ್ಪಿತಸ್ಥ ಯಾರೇ ಇರಲಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ತೀವ್ರವಾದ ಪ್ರತಿಭಟನೆ ನಡೆಸಬೇಕಾದೀತು ಎಂದು ಕಾಫು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
ಉಡುಪಿ: 2023-24ರ ಬೆಳೆ ವರ್ಷದಲ್ಲಿ ಬೆಳೆಯುವ ಮತ್ತು ಮುಂಗಾರು ಮಾರುಕಟ್ಟೆ ಅವಧಿಯಲ್ಲಿ ಖರೀದಿಸುವ ಎಲ್ಲ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತತ್ವದ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ಕೃಷಿ ಪ್ರಧಾನ ದೇಶ ಭಾರತದಲ್ಲಿ ಬೆಳೆಗಳ ವೈವಿಧ್ಯತೆಗೆ ಉತ್ತೇಜನ ಮತ್ತು ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಗೆ ಪ್ರೋತ್ಸಾಹ ನೀಡುವ ಜೊತೆಗೆ ಗ್ರಾಮೀಣ ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ಹಾಗೂ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯ ಶಿವಕುಮಾರ್ ಅಂಬಲಪಾಡಿ ತಿಳಿಸಿದ್ದಾರೆ.
ಕೃಷಿ ಬೆಳೆಗಳ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸುಗಳನ್ನು ಆಧರಿಸಿ ಕೇಂದ್ರ ಸರಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಹೆಚ್ಚಳ ಮಾಡಲು ತೀರ್ಮಾನಿಸಿದೆ. ದೇಶದ ಪ್ರಮುಖ ಆಹಾರ ಬೆಳೆಗಳಾದ ಭತ್ತ, ರಾಗಿ ಹಾಗೂ ದ್ವಿದಳ ಧಾನ್ಯಗಳಾದ ತೊಗರಿ, ಹೆಸರು ಕಾಳು, ಉದ್ದು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ದೇಶದಲ್ಲಿ ಆಹಾರ ಧಾನ್ಯಗಳ ಉತ್ಪಾದನಾ ಪ್ರಮಾಣ ವೃದ್ಧಿ ಮತ್ತು ದೇಶದ ಆರ್ಥಿಕತೆ ಶಕ್ತಿ ತುಂಬುವ ಜೊತೆಗೆ ರೈತರ ಸ್ವಾವಲಂಬಿ ಬದುಕಿಗೆ ಪುಷ್ಠಿ ನೀಡಲಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ಸಿಗೆ ಅಧಿಕಾರ ದೊರೆತ ಬಳಿಕ ಈ ಉಚಿತ ಗ್ಯಾರಂಟಿಗಳು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಅರೆಬೆಂದ ಗ್ಯಾರಂಟಿಗಳ ನಡುವೆ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗಳ ಜಾರಿಗೆ ದಿನಕ್ಕೊಂದು ಷರತ್ತುಗಳನ್ನು ಹಾಕುತ್ತಾ ಜನತೆಯಲ್ಲಿ ಆತಂಕ ಮತ್ತು ಗೊಂದಲವನ್ನು ಸೃಷ್ಠಿಸಿದೆ. ಸರಕಾರದ ಮೇಲೆ ವಿಶ್ವಾಸ ಕಳೆದುಕೊಂಡಿರುವ ಜನತೆ ತಾಳ್ಮೆ ಕಳೆದುಕೊಂಡು ಬೀದಿಗಿಳಿಯುವ ದಿನ ದೂರವಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸಿಗರು ತಾವೇ ಸೃಷ್ಠಿಸಿರುವ 40% ಕಮಿಷನ್ ಪ್ರಹಸನ ಮತ್ತು 15 ಲಕ್ಷ ಖಾತೆಗೆ ಹಾಕುವ ಪ್ರಹಸನವನ್ನು ಗುರಾಣಿಯನ್ನಾಗಿಸಿ ಪದೇ ಪದೇ ಅದೇ ರಾಗ ಅದೇ ಹಾಡು ಎಂಬಂತೆ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ. ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಜನತೆಯ ಮುಂದೆ ನಗೆ ಪಾಟಲಿಗೀಡಾಗುವ ಬದಲು ಕಾಂಗ್ರೆಸ್ಸಿಗರು ತಮ್ಮದೇ ಸರಕಾರದಲ್ಲಿ ಈ ಬಗ್ಗೆ ಸೂಕ್ತ ತನಿಖೆಯನ್ನು ನಡೆಸುವ ಮೂಲಕ ಪ್ರಕರಣವನ್ನು ಸಾಬೀತುಪಡಿಸುವ ಜೊತೆಗೆ ಪ್ರಧಾನಿಯವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಕೂಡಾ ರುಜುವಾತುಪಡಿಸುವ ದೈರ್ಯ ತೋರುವುದು ಉತ್ತಮ ಎಂದು ಅವರು ಆಗ್ರಹಿಸಿದ್ದಾರೆ.
‘ಫಲಿತಾಂಶಕ್ಕಾಗಿ ಎಲ್ಲವನ್ನೂ ಮಾಡಬೇಕು; ಗ್ಯಾರಂಟಿಗಳು ಚೀಪ್ ಪಾಪ್ಯುಲಾರಿಟಿ’ ಎಂದು ಸ್ವತಃ ಕಾಂಗ್ರೆಸ್ ಸರಕಾರದ ಕೃಷಿ ಸಚಿವರು ಗ್ಯಾರಂಟಿಗಳ ಬಗ್ಗೆ ಅವಮಾನಕರ ಹೇಳಿಕೆಯನ್ನು ನೀಡಿರುವುದು ಕಾಂಗ್ರೆಸ್ ನಕಲಿ ಉಚಿತ ಗ್ಯಾರಂಟಿಗಳ ಮೂಲಕ ರಾಜ್ಯದ ಜನತೆಯನ್ನು ಯಾಮಾರಿಸಿದೆ ಎಂಬುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ‘ನನಗೂ ಫ್ರೀ ನಿನಗೂ ಫ್ರೀ’ ‘ಹತ್ತು ಕೆ.ಜಿ. ಅಕ್ಕಿ ಬೇಕಾ ಬೇಡ್ವಾ’ ಎಂದು ಕಾಂಗ್ರೆಸ್ ಮುಖಂಡರು ಪುಂಖಾನುಪುಂಖವಾಗಿ ಉಚಿತ ಗ್ಯಾರಂಟಿಗಳ ಬಗ್ಗೆ ಪುಂಗಿ ಊದಿರುವುದು ಕೇವಲ ಚುನಾವಣಾ ಗಿಮಿಕ್ ಎಂಬುದು ಇದೀಗ ಸಾಬೀತಾಗಿದೆ.
ಗೃಹ ಲಕ್ಷ್ಮಿ ಗ್ಯಾರಂಟಿಯಡಿ 200 ಯುನಿಟ್ ವಿದ್ಯುತ್ ಫ್ರೀ ಎಂದಿರುವ ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗೆ ಹಲವಾರು ಷರತ್ತುಗಳನ್ನು ಹಾಕಿರುವ ಜೊತೆಗೆ ದಿಢೀರ್ ವಿದ್ಯುತ್ ದರವನ್ನು ಏರಿಸಿ ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ. ಗೃಹ ಲಕ್ಷ್ಮಿ ಗ್ಯಾರಂಟಿಯಡಿ ಮನೆಯೊಡತಿ ಯಾರು ಎಂಬ ವಿವಾದ ಸೃಷ್ಠಿಸಿದೆ. ಉಚಿತ 10 ಕೆ.ಜಿ. ಅಕ್ಕಿಯ ಗ್ಯಾರಂಟಿ ಅನುಷ್ಠಾನಕ್ಕೆ ಹೆಚ್ಚುವರಿ 5 ಕೆ.ಜಿ. ಅಕ್ಕಿಗಾಗಿ ಕೇಂದ್ರ ಸರಕಾರದ ಮೊರೆ ಹೋಗಿರುವ ಕಾಂಗ್ರೆಸ್ ಸರಕಾರ ಎಲ್ಲ ಪದವೀಧರ ನಿರುದ್ಯೋಗಿಗಳಿಗೆ ಮಾಸಾಶನ ನೀಡುವ ಮಾತನ್ನು ಮುರಿದು ಯುವ ಸಮುದಾಯಕ್ಕೆ ದ್ರೋಹ ಬಗೆದಿದೆ. ಇತ್ತ ಕಾಂಗ್ರೆಸ್ಸಿನ 5 ಉಚಿತ ಗ್ಯಾರಂಟಿಗಳೂ ಜಾರಿಯಾಗದೇ ಅತ್ತ ಅಭಿವೃದ್ಧಿ ಚಟುವಟಿಕೆಗಳೂ ನಡೆಯದೆ ರಾಜ್ಯ ದಿವಾಳಿತನದ ಅಂಚಿನತ್ತ ಸಾಗುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ಉಚಿತ ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್ ಮುಖಂಡರಲ್ಲಿ ಕಂಡು ಬಂದ ಉತ್ಸಾಹ, ಪೌರುಷ ಗ್ಯಾರಂಟಿ ಜಾರಿಯಲ್ಲಿ ಕಂಡು ಬಾರದೇ ಇರುವುದು ವಿಪರ್ಯಾಸ. ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಎಲ್ಲ 5 ಉಚಿತ ಖಚಿತ ಖಂಡಿತ ನಿಶ್ಚಿತಗಳ ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಅಬ್ಬರಿಸಿರುವ ಕಾಂಗ್ರೆಸ್ ಮುಖಂಡರು ಇದೀಗ ‘ಉಳ್ಳವರು ಫ್ರೀ ಗಳನ್ನು ತ್ಯಜಿಸಿ’ ಎಂದು ಗೋಗರೆಯುತ್ತಿರುವುದು ಕಾಂಗ್ರೆಸ್ ಸರಕಾರದ ದಯನೀಯ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.
ಅಧಿಕಾರವಿಲ್ಲದೆ ಚಡಪಡಿಸುತ್ತಿದ್ದ ಕಾಂಗ್ರೆಸಿಗರು, ಇದೀಗ ರಾಜ್ಯ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ದಿನಕ್ಕೊಂದು ವಿವಾದಕರ ದುರಹಂಕಾರದ ಹೇಳಿಕೆಗಳನ್ನು ನೀಡುತ್ತಿರುವುದು ನೋಡಿದರೆ ಮುಖ್ಯಮಂತ್ರಿಯವರಿಗೆ ಸಚಿವರ ಮೇಲೆ ಹಿಡಿತವಿದ್ದಂತೆ ಕಂಡುಬರುತ್ತಿಲ್ಲ. ಕಾಂಗ್ರೆಸ್ ಸರಕಾರದ ಎಲ್ಲ ಜನ ವಿರೋಧಿ ನೀತಿಗಳನ್ನು ಬಿಜೆಪಿ ಸಮರ್ಥವಾಗಿ ಎದುರಿಸಲಿದೆ. ಬಿಜೆಪಿಯ ಜನಪರ ಹೋರಾಟ ಮತ್ತು ಪ್ರತಿಭಟನೆಗಳನ್ನು ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ. ಬೆಲೆ ಏರಿಕೆ ಎಂದು ಬೊಬ್ಬಿರಿದು ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ಸಿಗೆ ಇದೀಗ ಅಗತ್ಯ ವಸ್ತುಗಳ ಬೆಲೆ ಇಳಿಸಲು ಸಕಾಲವಾಗಿದೆ. ರಾಜ್ಯದ ಜನತೆ ಎಲ್ಲ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಕಾಂಗ್ರೆಸಿಗರು ತಮ್ಮ ಸ್ವಾರ್ಥಕ್ಕಾಗಿ ತಾವೇ ಘೋಷಿಸಿಕೊಂಡಿರುವ ಉಚಿತಗಳ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ಇದ್ದಲ್ಲಿ ಮುಂಬರಲಿರುವ ಚುನಾವಣೆಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ದಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಕಾಂಗ್ರೆಸ್ಸಿನ ಜನವಿರೋಧಿ ನೀತಿಗಳನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
ಕೊಟ್ಟ ಮಾತು ತಪ್ಪಿರುವ ರಾಜ್ಯ ಕಾಂಗ್ರೆಸ್ ಸರಕಾರದ ಮಾನಸಿಕತೆ 15 ದಿನಗಳಲ್ಲೇ ಸಾಬೀತಾಗಿದೆ. ಗೃಹ ಲಕ್ಷ್ಮಿ, 10 ಕೆ.ಜಿ. ಅಕ್ಕಿ, ಪದವೀಧರರ ಮಾಸಾಶನ, ಬಸ್ ಪ್ರಯಾಣ ಗ್ಯಾರಂಟಿಯಲ್ಲೂ ಕಾಂಗ್ರೆಸ್ ಸರಕಾರ ಸ್ಪಷ್ಟತೆ ಇಲ್ಲದೆ ತಾರತಮ್ಯ ನೀತಿ ಅನುಸರಿಸಿ ಜನತೆಯಲ್ಲಿ ಗೊಂದಲ ಸೃಷ್ಟಿಸಿ ಮೋಸ ಎಸಗಿದೆ ಎಂದರು.
ಸಚಿವ ಎಂ.ಬಿ. ಪಾಟೀಲ್ ಬಿಜೆಪಿ ಕಾರ್ಯಕರ್ತರು ಬಾಲ ಬಿಚ್ಚಿದರೆ ಜೈಲಿಗೆ ಹಾಕುವುದಾಗಿ ದುರಹಂಕಾರದ ಮಾತನ್ನಾಡಿರುವುದು ಖಂಡನೀಯ. ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಹೆದರಲ್ಲ. ಸರಕಾರದ ಜನವಿರೋಧಿ ನೀತಿಯನ್ನು ಬಿಜೆಪಿ ಎಂದಿಗೂ ವಿರೋಧಿಸುತ್ತದೆ. ದನ ಮತ್ತು ಕೋಣದ ವ್ಯತ್ಯಾಸ ತಿಳಿಯದವರನ್ನು ಪಶು ಸಂಗೋಪನಾ ಸಚಿವರನ್ನಾಗಿ ನೇಮಕ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದರು.
ಕೇವಲ ಚುನಾವಣೆಯನ್ನು ಗೆಲ್ಲುವ ಒಂದೇ ಉದ್ದೇಶದಿಂದ ಉಚಿತ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಜನತೆಗೆ ನೀಡಿರುವ ವಾಗ್ದಾನವನ್ನು ಯಥಾವತ್ತಾಗಿ ಈಡೇರಿಸುವಲ್ಲಿ ವಿಫಲವಾಗುತ್ತಿರುವುದು ಸ್ಪಷ್ಟವಾಗುತ್ತಿದೆ. ರಾಜ್ಯದ ಜನತೆ ಕಾಂಗ್ರೆಸ್ಸಿನ ಬಣ್ಣ ಬದಲಿಸುವ ಗೋಸುಂಬೆತನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗಳ ಜಾರಿಯಲ್ಲಿ ಜನತೆಗೆ ಎಸಗಿದ ಮೋಸ ಮತ್ತು ಕಾಂಗ್ರೆಸ್ಸಿನ ಜನ ವಿರೋಧಿ ನೀತಿಯನ್ನು ಖಂಡಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಮೋರ್ಚಾಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ವಿಜಯ ಕುಮಾರ್ ಉದ್ಯಾವರ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಪ್ರಮುಖರಾದ ರಾಜೇಂದ್ರ ಪಂದುಬೆಟ್ಟು, ಅಕ್ಷಯ್ ಶೆಟ್ಟಿ, ಸದಾನಂದ ಪ್ರಭು, ದಿನಕರ ಪೂಜಾರಿ, ಆನಂದ ಸುವರ್ಣ, ರುಡಾಲ್ಫ್, ಮಾಯಾ ಕಾಮತ್, ಪೂರ್ಣಿಮಾ ರತ್ನಾಕರ್, ಅಶ್ವಿನಿ ಶೆಟ್ಟಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ, ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು 70 ಪೈಸೆ ಯಷ್ಟು ವಿದ್ಯತ್ ದರ ಏರಿಸಿ ಜನವಿರೋಧಿ ನೀತಿ ತೋರಿಸಿದ್ದಾರೆ. ಇನ್ನು ಪಶುಸಂಗೋಪನಾ ಇಲಾಖೆಯ ಸಚಿವರಾದ ವೆಂಕಟೇಶ್ ರವರು ಗೋವುಗಳನ್ನು ಯಾಕೆ ಕಡಿಯಬಾರದು ಎಂದು ಹಿಂದೂಗಳ ಭಾವನೆಗಳ ಮೇಲೆ ಚೆಲ್ಲಾಟವಾಡುವ ಮಾತನ್ನಾಡಿದ್ದಾರೆ. ಗೋವುಗಳೆಂದರೆ ಭಾರತೀಯರಿಗೆ ಪರಮ ಪವಿತ್ರವಾದದು. ಯಾವುದೇ ಕೆಲಸ ಶುಭಾರಂಭ ಮಾಡುವುದಾದರೆ ಮೊದಲು ಗೋಪೂಜೆ ಮಾಡುವರು. ಗ್ರಹಪ್ರವೇಶ ಮಾಡುವುದಾರೂ ಮೊದಲು ಗೋವನ್ನು ಪ್ರವೇಶ ಮಾಡಿಸಿ ನಂತರ ನಾವು ಪ್ರವೇಶ ಮಾಡುವೆವು. ಭಾರತೀಯರದ್ದ ಗೋವು ಆಧಾರಿತ ಕ್ರಷಿ ಜೀವನ ಪಧ್ಧತಿ ಇದ್ದುದು. ಅಂತಹ ಗೋವುಗಳನ್ನು ಕಡಿಯುವ ಮಾತನ್ನಾಡುವ ಮೂಲಕ ನಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವರು. ಈ ಕಾಯ್ದೆ ಹಿಂಪಡೆಯುವ ಪ್ರಯತ್ನ ಮಾಡಿದಲ್ಲಿ ಬಿಜೆಪಿ ಕಾರ್ಯಕರ್ತರು ನಿಮ್ಮ ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಕಪ್ಟು ಬಾವುಟ ತೋರಿಸಿ ಪ್ರತಿಭಟನೆ ಮಾಡುವೆವು. ಗ್ರಾಮ ಗ್ರಾಮಗಳಲ್ಲಿ ಜನಜಾಗ್ರತಿ ಮೂಡಿಸುವೆವು ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರದಾ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮಾತನಾಡಿ, ವ್ರಧ್ಧ ಗೋವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆಗೆ ನಿಮ್ಮ ವ್ರಧ್ಧ ತಂದೆ ತಾಯಿ ಇದ್ದರೆ ಏನು ಮಾಡುವಿರೋ ಗೋವನ್ನೂ ಅದೇ ರೀತಿಯಲ್ಲಿ ನೋಡುವ ಸಂಸ್ಕ್ರತಿ ನಮ್ಮದು ಎಂದರು. ಚಕ್ರವರ್ತಿ ಸೂಲಿಬೆಲೆಗೆ ಜೈಲು ಸೇರಬೇಕಾದೀತು ಎನ್ನುವ ಸಚಿವ ಎಮ್ ಬಿ ಪಾಟೀಲ್ ಹೇಳಿಕೆ ಖಂಡಿಸಲಾಗಿ ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ದಿನಂಪ್ರತಿ ಹೋರಾಟಕ್ಕೂ ನಾವು ಸಿಧ್ಧ ಎನ್ನುವ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, ಚಂದ್ರಶೇಖರ್ ಕೋಟ್ಯನ್, ಸುಧಾಮ ಶೆಟ್ಟಿ, ಮಂಡಲ ಪ್ರಧಾನಕಾರ್ಯದರ್ಶಿ ಗೋಪಾಲಕ್ರಷ್ಣ ರಾವ್, ಮಂಡಲ ಕಾರ್ಯದರ್ಶಿಗಳಾದ ಲತಾ ಆಚಾರ್ಯ, ಚಂದ್ರ ಮಲ್ಲಾರ್, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಎಸ್ ಸಿ ಮೋರ್ಚ ಅಧ್ಯಕ್ಷರಾದ ಎಮ್ ಜಿ ನಾಗೇಂದ್ರ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಶೈಲೇಶ್, ಪ್ರಮುಖರಾದ ಶರಣ್ ಕುಮಾರ್ ಮಟ್ಟು, ಪ್ರವೀಣ್ ಶೆಟ್ಟಿ ಇನ್ನಂಜೆ, ದಿನೇಶ್ ಕೋಟ್ಯನ್, ಜಗದೀಶ್ ಮೆಂಡನ್, ಶೈಲೇಶ್ ಶೆಟ್ಟಿ, ರಮಾ ಶೆಟ್ಟಿ, ಗೌರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ದಿನಾಂಕ 05-06-2023 ರಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ ಅಭಿವೃದ್ಧಿ ಹೊಂದುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಉದ್ಯಮಿಗಳಾದ ರಿತೇಶ್ ಶೆಟ್ಟಿ, ಜೀವನ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಳ್ಳೂರು ಜನ ಜಾಗೃತಿ ವೇದಿಕೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಭಾನುವಾರ ಕೊಳಲಗಿರಿ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ್ಪೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ಪೂಜಾರಿ ಅವರು, ಮಹಿಳೆಯರು ಕೇವಲ ತಂಬಾಕನ್ನು ಮಾತ್ರ ವಿರೋಧಿಸುವುದಲ್ಲದೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ ಮತ್ತು ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸುವಂತೆ ಜಾಗೃತಿ ಮೂಡಿಸಬೇಕು ಎಂದರು.
ನಂತರ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಧೂಮಪಾನದಿಂದಾಗುವ ದುಷ್ಪರಿಣಾಮದ ಬಗ್ಗೆ ಪ್ರಹಸನ ವೊಂದನ್ನು ಆಡಿ ಮಾಹಿತಿ ನೀಡಿದರು
ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಂ. ಡಾ.ಬಿಂದು ಭಟ್, ಶೈಲ ಶಾಮನೂರ್, ಮೇಲ್ವಿಚಾರಕರಾದ ರಮೇಶ್, ಮನೀಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ, ಸೇವಾಪ್ರತಿನಿಧಿ ಶಶಿಕಲಾ, ಮಂಜುಳಾ ನಾಗೇಂದ್ರ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಬೇಕಾಬಿಟ್ಟಿಯಾಗಿ ಘೋಷಿಸಿರುವ 5 ಉಚಿತಗಳ ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಯಥಾಪ್ರಕಾರ 5 ವರ್ಷ ಪೂರ್ತಿ ಅನುಷ್ಠಾನಗೊಳಿಸಿದರೆ 2028 ಮೇ ತಿಂಗಳಲ್ಲಿ ತಲೆ ಬೋಳಿಸಿ ಕೆಪಿಸಿಸಿ ಕಛೇರಿಯ ಮುಂದೆ ಕುಳಿತುಕೊಳ್ಳುವ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಿರಂತರ ಸುಳ್ಳು ಹೇಳಿಕೆಗಳಲ್ಲಿ ನಿರತರಾಗಿರುವ ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದಿರುವುದನ್ನು ಮೊದಲು ದಾಖಲೆ ಸಮೇತ ಸಾಬೀತುಪಡಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸವಾಲೆಸಿದಿದ್ದಾರೆ.
ಕಾಂಗ್ರೆಸ್ ಈ ಹಿಂದೆ ರಾಜಸ್ಥಾನ, ಹಿಮಾಚಲ ಪ್ರದೇಶ, ಮಣಿಪುರ ರಾಜ್ಯಗಳಲ್ಲಿ ಚುನಾವಣಾ ಸಂದರ್ಭದಲ್ಲಿ ಇದೇ ಮಾದರಿಯ ಉಚಿತ ಖಚಿತಗಳ ಘೋಷಣೆಗಳನ್ನು ಮಾಡಿ ಯಾವುದನ್ನೂ ಈಡೇರಿಸದೆ ಜನರಿಗೆ ಪಂಗನಾಮ ಹಾಕಿದೆ. ಉಚಿತ ಭಾಗ್ಯಗಳನ್ನು ನೀಡಿದ ಅನೇಕ ರಾಷ್ಟ್ರಗಳು ದಿವಾಳಿಹೊಂದಿರುವ ಉದಾಹರಣೆಗಳು ಕಣ್ಣ ಮುಂದಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಉಚಿತ ಗ್ಯಾರಂಟಿಗಳನ್ನು 5 ವರ್ಷ ಪೂರ್ತಿ ಯಥಾವತ್ತಾಗಿ ಜಾರಿಗೊಳಿಸುವ ಸಾಧ್ಯತೆ ಇಲ್ಲವಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಘೋಷಿಸಿರುವ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ವಾಗ್ದಾನ ನೀಡಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೊಟ್ಟ ಮಾತನ್ನು ತಪ್ಪಿದೆ. ಮಾತು ತಪ್ಪಿದ ಈ ಸರಕಾರ ಗ್ಯಾರಂಟಿಗಳಿಗೆ ಹೊಸ ಷರತ್ತುಗಳನ್ನು ಹಾಕುವ ಮೂಲಕ ತನ್ನ ಉಚಿತ ಖಚಿತ ಖಂಡಿತ ನಿಶ್ಚಿತಗಳ ಭರವಸೆಯನ್ನು ಮುರಿದಿದೆ. ಆದರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಗ್ಯಾರಂಟಿ ಕಾರ್ಡಿನ ಎಲ್ಲಾ 5 ಭರವಸೆಗಳನ್ನು ಈಗಾಗಲೇ ನೆರವೇರಿಸಿದ ಹಾಗೆ ಪೌರುಷ ತೋರುವುದು ನಾಚಿಕೆಗೇಡು.
* ರಾಜ್ಯ ಕಾಂಗ್ರೆಸ್ ಸರಕಾರ ಗೃಹ ಜ್ಯೋತಿಯಡಿ 200 ಯುನಿಟ್ ವಿದ್ಯುತ್ತನ್ನು ಯಥಾವತ್ತಾಗಿ ಉಚಿತವಾಗಿ ನೀಡದೇ ವಂಚಿಸಿರುವ ಜೊತೆಗೆ ಹಠಾತ್ತಾಗಿ ಪ್ರತೀ ಯುನಿಟ್ ಗೆ ರೂ.2 ರಂತೆ ವಿದ್ಯುತ್ ದರವನ್ನು ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವುದು ಹೇಡಿತನದ ಸಂಕೇತವಾಗಿದೆ.
* ಮಹಿಳೆಯರಿಗೆ ಸರಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಗ್ಯಾರಂಟಿಯಡಿ ಸರಕಾರಿ ಬಸ್ ವ್ಯವಸ್ಥೆಗಳಿಲ್ಲದ ಹಲವಾರು ಜಿಲ್ಲೆಗಳ ಮಹಿಳೆಯರು ಅವಕಾಶ ವಂಚಿತರಾಗಿದ್ದಾರೆ. ಈ ಬಗ್ಗೆ ಪರ್ಯಾಯ ವ್ಯವಸ್ಥೆ ಮಾಡದಿರುವುದು ವಿಪರ್ಯಾಸ.
* ಕಾಂಗ್ರೆಸ್ ಸರಕಾರ ಗೃಹಲಕ್ಷ್ಮಿ ಗ್ಯಾರಂಟಿಯನ್ನು ಮುಂದೂಡಿ, ಮನೆಯೊಡತಿ ವಿಚಾರದಲ್ಲಿ ಗೊಂದಲ ಸೃಷ್ಟಿಸಿ, ಆನ್ ಲೈನ್ ಅರ್ಜಿ ಎಂಬ ಸಬೂಬು ನೀಡಿ ಕಾಲಹರಣ ಮಾಡುವ ಮೂಲಕ ಜನತೆಯನ್ನು ಸತಾಯಿಸುತ್ತಿರುವುದು ವಿಷಾದನೀಯ.
* ಅನ್ನಭಾಗ್ಯ ಗ್ಯಾರಂಟಿಯನ್ನು ಮುಂದೂಡಿರುವ ರಾಜ್ಯ ಕಾಂಗ್ರೆಸ್ ಸರಕಾರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ ಪ್ರಸಕ್ತ ರಾಜ್ಯದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನೂ ಸೇರಿಸಿ, ಇನ್ನೂ ಹೆಚ್ಚುವರಿ 5 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವಂತೆ ಕೇಂದ್ರ ಸರಕಾರದ ಮೊರೆ ಹೋಗಿರುವುದು ನಾಚಿಕೆಗೇಡು. ಕಾಂಗ್ರೆಸ್ ಅಕ್ಕಿ ಹಂಚಿಕೆಯಲ್ಲಿಯೂ ಮೋಸದ ತಂತ್ರ ಅನುಸರಿಸಿದೆ.
* ಯುವನಿಧಿ ಗ್ಯಾರಂಟಿಯಡಿ ಎಲ್ಲಾ ನಿರುದ್ಯೋಗಿ ಪದವೀಧರ ಯುವಕರಿಗೆ ಮಾಸಿಕ ಮಾಶಾಸನ ನೀಡುವುದಾಗಿ ಬೊಗಳೆಬಿಟ್ಟಿರುವ ಕಾಂಗ್ರೆಸ್ ಗ್ಯಾರಂಟಿ ಜಾರಿಯ ದಿನಾಂಕವನ್ನೂ ಪ್ರಕಟಿಸದೆ, ಈ ಸೌಲಭ್ಯ ಪ್ರಸಕ್ತ ಸಾಲಿನಲ್ಲಿ ತೇರ್ಗಡೆ ಹೊಂದಿರುವ ಪದವೀಧರರಿಗೆ ಮಾತ್ರ ಅನ್ವಯ ಎನ್ನುವ ಮೂಲಕ ಯುವ ಸಮುದಾಯಕ್ಕೆ ದ್ರೋಹ ಬಗೆದಿದೆ.
ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರದ ದುರಾಸೆಯಿಂದ ಉಚಿತ ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯವನ್ನು ದಿವಾಳಿತನಕ್ಕೆ ದೂಡಲು ಹರಸಾಹಸ ಪಡುತ್ತಿರುವುದು ಸ್ಪಷ್ಟವಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಸರಕಾರ ರಾಜ್ಯದ ಜನತೆಗೆ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಆದಾಯದ ಮೂಲದ ಬಗ್ಗೆ ಶ್ವೇತ ಪತ್ರವನ್ನು ಹೊರಡಿಸುವುದು ಅತ್ಯಗತ್ಯ.
ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ 24 ಗಂಟೆಗಳೊಳಗೆ ಜಾರಿಗೊಳಿಸಲು ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳ ಈ ಎಲ್ಲಾ ಹುಳುಕುಗಳನ್ನು ಮುಚ್ಚಿಟ್ಟು ಸಾಚಾತನದ ಪೋಸ್ ನೀಡುತ್ತಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಬರೇ ಪ್ರಚಾರದ ಗೀಳಿನಿಂದ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಇತರರನ್ನು ಗೇಲಿ ಮಾಡುವ ಬದಲು ಅಷ್ಟೊಂದು ತುರ್ತು ಇದ್ದಲ್ಲಿ ತಾವೇ ತಲೆ ಬೋಳಿಸಿಕೊಳ್ಳುವುದು ಉತ್ತಮ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಿಶ್ವದ ಅನೇಕ ರಾಷ್ಟ್ರಗಳು ದಿವಾಳಿತನದ ಅಂಚಿನಲ್ಲಿ ಸಾಗುತ್ತಿರುವ ಸಂದಿಗ್ಧ ಕಾಲಘಟ್ಟದಲ್ಲಿ ಭಾರತದ ಆರ್ಥಿಕತೆ ಪ್ರಸಕ್ತ ಸಾಲಿನಲ್ಲಿ ಶೇ.7.2 ಜಿಡಿಪಿ ದರದ ನಿರೀಕ್ಷೆಯೊಂದಿಗೆ ಸದೃಢವಾಗಿದ್ದು, ವಿಶ್ವದ ಅತ್ಯಂತ ವೇಗದ ಆರ್ಥಿಕಾಭಿವೃದ್ಧಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ಕೇಂದ್ರ ಸರಕಾರದ ಸಾಂಖ್ಯಿಕ ಮತ್ತು ಯೋಜನೆಗಳ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿರುವ ದತ್ತಾಂಶಗಳಲ್ಲಿ ಈ ವಿಷಯ ಸ್ಪಷ್ಟವಾಗಿದ್ದು, ಜನರ ದೃಢವಾದ ಬೆಂಬಲ ಮತ್ತು ಅರ್ಥ ವ್ಯವಸ್ಥೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯೇ ಇದಕ್ಕೆ ಕಾರಣ ಎಂದಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದರ್ಶಿತ್ವದ ಚಿಂತನೆ ಪ್ರಶಂಸನೀಯ.
ಕಳೆದ 9 ವರ್ಷಗಳ ಜನಪರ ಆಡಳಿತದಲ್ಲಿ ನೂರಾರು ವಿನೂತನ ಯೋಜನೆಗಳ ಸಹಿತ ಕೊರೋನದಂತಹ ದಿಟ್ಟ ಸವಾಲುಗಳನ್ನು ಮೆಟ್ಟಿ ನಿಂತು, ದೇಶದ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವ ಜೊತೆಗೆ 2025ಕ್ಕೆ ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಮಹತ್ತರವಾದ ಗುರಿಯೊಂದಿಗೆ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆ ಅಭಿನಂದನೀಯ ಎಂದು ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು: ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರ ಅಭಿನಂದನಾ ಸಭೆ ಪಡುಬಿದ್ರೆ ಮಹಾಶಕ್ತಿಕೇಂದ್ರ ವತಿಯಿಂದ ಪಡುಬಿದ್ರೆ ನಯತ್ ಹೋಟೆಲ್ ನ ಸಭಾಂಗಣದಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರುಗಳಾದ ರವಿ ಶೆಟ್ಟಿ, ಗಾಯತ್ರಿ ಪ್ರಭು, ತಾಲೂಕು ಪಂಚಾಯತ್ ನಿಕಟಪೂರ್ವ ಸದಸ್ಯರುಗಳಾದ ನೀತಾ ಗುರುರಾಜ್, ಕೇಶವ ಮೊಯ್ಲಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಬಾಲಕ್ರಷ್ಣ ದೇವಾಡಿಗ ಹಿರಿಯರಾದ ಗುಣಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಮಟ್ಟದ ಎಲ್ಲ ಪದಾಧಿಕಾರಿಗಳು ಜನಪ್ರತಿನಿಧಿಗಳು, ಕಾರ್ಯಕರ್ತರು ಮತದಾರರು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಇವರ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಿತು.