‘ವಂದೇ ಮಾತರಂ’ಗೆ ಅಪಮಾನ; ವಾಲ್ಮೀಕಿ ನಿಗಮ ಹಗರಣದ ಆರೋಪಿಗೆ ಮತ್ತೆ ಮಂತ್ರಿಗಿರಿ ಲಜ್ಜೆಗೇಡಿತನ : ಪ್ರೊ. ಎಂ. ನಾಗರಾಜ್

​ಉಡುಪಿ: ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ ಅಧಿವೇಶನದಲ್ಲಿ ಕಲಾಪಗಳು ಸುಗಮವಾಗಿ ನಡೆಯದಂತೆ ಅಡ್ಡಿಪಡಿಸುವುದೇ ಕಾಂಗ್ರೆಸ್‌ನ ಮುಖ್ಯ ಅಜೆಂಡಾವಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್ ತೀವ್ರವಾಗಿ ವಾಗ್ದಾಳಿ ನಡೆಸಿದರು.

​ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

​ಕಲಾಪ ಹಳ್ಳಹಿಡಿಸಿದ ವಿಪಕ್ಷ:

ಜುಲೈ 20ರಿಂದ ಆಗಸ್ಟ್ 18ರ ವರೆಗೆ ನಡೆದ ಸಂಸತ್ ಅಧಿವೇಶನದ ಕಾರ್ಯವೈಖರಿ ಅತ್ಯಂತ ಶೋಚನೀಯವಾಗಿತ್ತು. ವಿರೋಧ ಪಕ್ಷಗಳ ಅನಗತ್ಯ ಗದ್ದಲ ಮತ್ತು ಅಸಹಕಾರದಿಂದಾಗಿ ರಾಜ್ಯಸಭೆಯಲ್ಲಿ ಕೇವಲ ಶೇ.39 ಹಾಗೂ ಲೋಕಸಭೆಯಲ್ಲಿ ಕೇವಲ ಶೇ.19ರಷ್ಟು ಮಾತ್ರ ಕಲಾಪ ನಡೆದಿದೆ. ಸದನದಲ್ಲಿ ಜನಪರ ಚರ್ಚೆಗಳು ನಡೆಯಬಾರದು ಎಂಬುದು ಕಾಂಗ್ರೆಸ್‌ನ ವಿಕೃತ ಮನಸ್ಥಿತಿಯನ್ನು ಸ್ಪಷ್ಟವಾಗಿ ಬಿಂಬಿಸುತ್ತದೆ ಎಂದು ಅವರು ದೂರಿದರು.

​‘ವಂದೇ ಮಾತರಂ’ಗೆ ಕಾಂಗ್ರೆಸ್ ಅಪಮಾನ:

ಕಾಂಗ್ರೆಸ್ ಪಕ್ಷವು ರಾಷ್ಟ್ರಗೀತೆ ‘ವಂದೇ ಮಾತರಂ’ಗೂ ಸೂಕ್ತ ಗೌರವ ನೀಡುತ್ತಿಲ್ಲ. ಕೇವಲ ಎರಡು ಸಾಲುಗಳನ್ನು ಮಾತ್ರ ಹಾಡಬೇಕೆಂದು ನಿರ್ಣಯ ಕೈಗೊಳ್ಳುವ ಮೂಲಕ ದೇಶಭಕ್ತರ ತ್ಯಾಗ-ಬಲಿದಾನದ ಪ್ರತೀಕವಾದ ಗೀತೆಗೆ ಅಪಮಾನವೆಸಗಿದೆ. ದೇಶದ ಗೌರವಕ್ಕೆ ಧಕ್ಕೆ ತರುವ ಕಾಂಗ್ರೆಸ್‌ನ ಈ ನೀತಿಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.

​ವಾಲ್ಮೀಕಿ ನಿಗಮ ಲೂಟಿಕೋರನಿಗೆ ಮಂತ್ರಿಗಿರಿ:

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಬಿ.ನಾಗೇಂದ್ರ ಅವರು ನೇರವಾಗಿ ಲೂಟಿ ಮಾಡಿರುವ ಆರೋಪವಿದ್ದರೂ, ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಕಾಂಗ್ರೆಸ್ ಸರ್ಕಾರದ ಲಜ್ಜೆಗೇಡಿತನಕ್ಕೆ ಸಾಕ್ಷಿ. ಭ್ರಷ್ಟರಿಗೆ ಮಣೆ ಹಾಕುತ್ತಿರುವ ಸರ್ಕಾರದ ಈ ನಿಲುವಿನ ವಿರುದ್ಧ ಬಿಜೆಪಿ ಬೀದಿಗಿಳಿದು ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

​ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’:

ಪ್ರಧಾನಿ ನರೇಂದ್ರ ಮೋದಿ ಅವರ ಯಾವುದೇ ಕಪ್ಪುಚುಕ್ಕೆ ಇಲ್ಲದ ನಿರಂತರ 25 ವರ್ಷಗಳ ನಿಸ್ವಾರ್ಥ ಆಡಳಿತ ಹಾಗೂ ಜನಸೇವೆಯ ಸಾಧನೆಯನ್ನು ದೇಶದ ಯುವ ಸಮೂಹಕ್ಕೆ ತಲುಪಿಸುವ ಉದ್ದೇಶದಿಂದ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಆಚರಿಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರುಗಳಾದ ಕೆ.ಉದಯ ಕುಮಾರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ವಕ್ತಾರರಾದ ದಿವಾಕರ ಶೆಟ್ಟಿ ಕಲ್ಯಾ, ಮಧುಕರ ಮುದ್ರಾಡಿ, ಮಾಧ್ಯಮ ಸಂಚಾಲಕ ಶಶಾಂಕ್ ಶಿವತ್ತಾಯ, ಪ್ರಮುಖರಾದ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ




ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ  ಲಕ್ಷ್ಮೀ ಮಂಜುನಾಥ್ ಮಲ್ಪೆ ಕೊಳ ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಅನೇಕ ಧಾರ್ಮಿಕ, ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಜೊತೆಗೆ ಪಕ್ಷದ ಕ್ರಿಯಾಶೀಲ ಕಾರ್ಯಕರ್ತೆಯಾಗಿ ಮಹಿಳಾ ಮೋರ್ಚಾದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ಮಂಜುನಾಥ್ ಕೊಳ ಅವರ ಅಗಲುವಿಕೆ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಪತಿ ಬಿಜೆಪಿ ಮುಖಂಡ ಮಂಜುನಾಥ್ ಸಾಲ್ಯಾನ್ ಕೊಳ ಹಾಗೂ ಪುತ್ರರು, ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿ.ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಹಿತ ಪಕ್ಷದ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪ್ರಗತಿ ಪರ ಕೃಷಿಕ, ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ


ಶಿರ್ವ ಹಿಂದೂ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕ್ಯಾಂಟೀನ್ ಯೋಜನೆಗೆ ಮಹತ್ತರ ಕೊಡುಗೆ ನೀಡಿದ ಕೊಡುಗೈ ದಾನಿ, ಶಿರ್ವ ಪರಿಸರದ ಸಾಮಾಜಿಕ ಅಗತ್ಯತೆಗಳಾದ ಶಿರ್ವ ಬಸ್ ತಂಗುದಾಣ ನಿರ್ಮಾಣ, ಶಿರ್ವ ಹೈಮಾಸ್ಟ್ ದೀಪ ಮುಂತಾದ ಮಹತ್ತರ ಯೋಜನೆಗಳಿಗೆ ಸಹಾಯ ಹಸ್ತ ಚಾಚಿರುವ ಜೊತೆಗೆ ಹಲವಾರು ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಿರಿಯ ಪ್ರಗತಿ ಪರ ಕೃಷಿಕ, ಉದ್ಯಮಿ ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ(90 ವರ್ಷ) ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಘ-ಸಂಸ್ಥೆಗಳ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯ ಸಹಿತ ಜನಪರ ಕಾಳಜಿ ಹೊಂದಿದ್ದ ಪ್ರಗತಿ ಪರ ಕೃಷಿಕ ಅಟ್ಟಿoಜೆ ಶಂಭು ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಪತ್ನಿ ಮತ್ತು ಮಕ್ಕಳಿಗೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ರಾಷ್ಟ್ರೀಯ ಭದ್ರತೆಗೆ ಅಪಾಯ




ಉಡುಪಿ: ರಾಜ್ಯ ಸರಕಾರ ಹೊರಡಿಸಿರುವ ‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ಅಧಿಸೂಚನೆ ಸಂವಿಧಾನದ ಚೌಕಟ್ಟಿಗೆ ವಿರುದ್ಧವಾಗಿದ್ದು, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಭಾರತದ ಸಂವಿಧಾನ ದೇಶದ ಎಲ್ಲಾ ನಾಗರಿಕರಿಗೆ ಒಂದೇ ಪೌರತ್ವದ ತತ್ವ ಕಲ್ಪಿಸಿದ್ದು, ರಾಜ್ಯ ಸರಕಾರ ‘ಶಾಶ್ವತ ನಿವಾಸ ಪ್ರಮಾಣಪತ್ರ’ ನೀಡುವ ಮೂಲಕ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿದೆ ಎಂದು ಅವರು ಆರೋಪಿಸಿದರು.

ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗ ರಚಿಸುವುದು ಸಂವಿಧಾನದ 14ನೇ ವಿಧಿಯ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ. ಇಂಥ ವರ್ಗೀಕರಣ ಯಾವುದೇ ಕಾನೂನುಬದ್ಧ ಉದ್ದೇಶ ಹೊಂದಿಲ್ಲ ಎಂದು ಕುತ್ಯಾರು ಹೇಳಿದರು.

ರಾಷ್ಟ್ರೀಯ ಭದ್ರತೆಯ ದೃಷ್ಠಿಯಿಂದಲೂ ಈ ಅಧಿಸೂಚನೆ ಆತಂಕಕಾರಿ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ರಾಜ್ಯ ಸರಕಾರ ‘ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ’ ನೀಡುವ ಮೂಲಕ ಮತದಾರರಲ್ಲದವರಿಗೂ ಪೌರತ್ವ ನೀಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. ಇದು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ರಾಜಕಾರಣದ ಉದ್ದೇಶದಿಂದ ಈ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಟೀಕಿಸಿದರು.

ಈ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರರಾದ ದಿವಾಕರ ಶೆಟ್ಟಿ ಕಲ್ಯಾ, ಮಧುಕರ ಮುದ್ರಾಡಿ ಉಪಸ್ಥಿತರಿದ್ದರು.

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ


ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ

ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಅಧ್ಯಕ್ಷತೆಯಲ್ಲಿ ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ, ಜಿಲ್ಲಾ ಎಸ್.ಟಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಸಭಾಧ್ಯಕ್ಷತೆ ವಹಿಸಿದ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಾತನಾಡಿ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷರಿಗೆ ವಂದನೆ ತಿಳಿಸಿದರು. ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಎಸ್.ಟಿ. ಮೋರ್ಚಾದ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಕೋರಿದರು.

ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್ ನೂಜಿನ ಬೈಲ್ ಸಹಿತ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಸ್ವಾಗತಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಪೆರ್ಡೂರು ವಂದಿಸಿದರು.

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ


ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ

ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಅಧ್ಯಕ್ಷತೆಯಲ್ಲಿ ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ, ಜಿಲ್ಲಾ ಎಸ್.ಟಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಸಭಾಧ್ಯಕ್ಷತೆ ವಹಿಸಿದ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಾತನಾಡಿ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷರಿಗೆ ವಂದನೆ ತಿಳಿಸಿದರು. ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಎಸ್.ಟಿ. ಮೋರ್ಚಾದ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಕೋರಿದರು.

ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್ ನೂಜಿನ ಬೈಲ್ ಸಹಿತ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಸ್ವಾಗತಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಪೆರ್ಡೂರು ವಂದಿಸಿದರು.

ಎಲ್ಲ ವರ್ಗಗಳನ್ನು ತಲುಪಿದ ಬಿಜೆಪಿ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ : ಕುತ್ಯಾರು ನವೀನ್ ಶೆಟ್ಟಿ


ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಪದಾಧಿಕಾರಿಗಳ ಪದಗ್ರಹಣ

ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿ ದೇಶದ ಎಲ್ಲಾ ವರ್ಗಗಳ ಜನತೆಯನ್ನು ತಲುಪುವ ಮೂಲಕ ಇಂದು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ಯಾಗಿ ಜನಸೇವೆಗೈಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಅಧ್ಯಕ್ಷತೆಯಲ್ಲಿ ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ, ಜಿಲ್ಲಾ ಎಸ್.ಟಿ. ಮೋರ್ಚಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರವನ್ನು ವಿತರಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಸಭಾಧ್ಯಕ್ಷತೆ ವಹಿಸಿದ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಾತನಾಡಿ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ ಜಿಲ್ಲಾಧ್ಯಕ್ಷರಿಗೆ ವಂದನೆ ತಿಳಿಸಿದರು. ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಎಸ್.ಟಿ. ಮೋರ್ಚಾದ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಕೋರಿದರು.

ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ನಾಯ್ಕ್ ನೂಜಿನ ಬೈಲ್ ಸಹಿತ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಸ್ವಾಗತಿಸಿದರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಭಾಷ್ ನಾಯ್ಕ್ ಪೆರ್ಡೂರು ವಂದಿಸಿದರು.

ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಪೂರಕ: ಕುತ್ಯಾರು ನವೀನ್ ಶೆಟ್ಟಿ




ಉಡುಪಿ: ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಪೂರಕವಾದ ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತೀಯ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ ಲಭಿಸಿದೆ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೇ ನಿತ್ಯ ನಿರಂತರವಾಗಿರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಂದರ್, ಆರೋಗ್ಯ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಭಟ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಯೋಗ ಶಿಕ್ಷಕಿ ಮಮತಾ ಶೆಟ್ಟಿಗಾರ್ ಮಾರ್ಗದರ್ಶನದಲ್ಲಿ ಒಂದು ಗಂಟೆ ಕಾಲ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಸಹ ಶಿಕ್ಷಕ ಗಣೇಶ್ ಆಚಾರ್ಯ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

‘ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ’ : ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು




ಅಧಿಕ ಮಾಸದ ಪ್ರಯುಕ್ತ ಭಜನಾ ಪರಿಷತ್ ಉಡುಪಿ ತಾಲೂಕು ವತಿಯಿಂದ ರಾಜಾoಗಣದಲ್ಲಿ ನಡೆದ ‘ಭಜನಾಮೃತ’.

ಪುಣ್ಯಪ್ರದವಾದ ಭಜನೆಯನ್ನು ದೇವರ ಸ್ಮರಣೆಯ ನೆಲೆಯಲ್ಲಿ ಮಾಡಬೇಕೇ ಹೊರತು ಟೈಂಪಾಸ್‌ಗಲ್ಲ. ಕಲಿಯುಗದಲ್ಲಿ ಭಜನೆಯಿಂದ ಭಗವಂತ ಸಂತೃಪ್ತನಾಗಲು ಸಾಧ್ಯ ಎಂದು ಪರ್ಯಾಯ ಶ್ರೀ ಶಿರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಅವರು ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಶಿರೂರು ಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅಧಿಕ ಮಾಸದ ಅಂಗವಾಗಿ 33 ಭಜನಾ ಕೃತಿಗಳ ಸಾಮೂಹಿಕ ಗೀತ ಗಾಯನ ‘ಭಜನಾಮೃತ’ವನ್ನು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉದ್ಘಾಟಿಸಿ ಆಶೀರ್ವಚನ ನೀಡಿದರು.

ದೇವರ ಸನ್ನಿಧಾನದಲ್ಲಿ ದೇವರಿಗೆ ಪ್ರಿಯವಾದ ಕೆಲಸ ಮಾಡುವುದು ದೇವರಿಗೆ ತೃಪ್ತಿ ನೀಡುತ್ತದೆ. ಅಧಿಕ ಮಾಸದಲ್ಲಿ ಮಾಡುವ ಭಜನೆಯಿಂದ ಅಧಿಕ ಫಲ ದೊರೆಯಲು ಸಾಧ್ಯ ಎಂದರು.

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ಭಜನಾ ಪರಿಷತ್ ದ.ಕ. ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ.ಅಳಿಯೂರು, ವಲಯ ಸಂಯೋಜಕರಾದ ಗಣೇಶ್ ಕುಮಾ‌ರ್ ಸಂಪಿಗೆನಗರ, ರೂಪಾಶ್ರೀ ಸಹಿತ ನೂರಾರು ಸಂಖ್ಯೆಯಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

ಪರಿಷತ್ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾ‌ರ್, ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯಂ ನೇತೃತ್ವದಲ್ಲಿ 33 ಭಜನಾ ಕೃತಿಗಳ ಸಾಮೂಹಿಕ ಗೀತಗಾಯನ ‘ಭಜನಾಮೃತ’ ನೆರವೇರಿತು.

ಉಡುಪಿ ತಾಲೂಕು ಭಜನಾ ಪರಿಷತ್ ಪ್ರಧಾನ ಕಾಯದರ್ಶಿ ಶಿವಕುಮಾ‌ರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ






ಬಿಜೆಪಿ ಕೇವಲ ಪ್ರಚಾರಕ್ಕಾಗಿ ಅಥವಾ ವರದಿಗಾಗಿ ಕಾರ್ಯಕ್ರಮ ಮಾಡುವುದಿಲ್ಲ. ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷದ ತತ್ವ ಸಿದ್ಧಾಂತಗಳಡಿ ಶೃದ್ದೆ ಮತ್ತು ಬದ್ಧತೆಯಿಂದ ಅಭಿಯಾನಗಳನ್ನು ಯಶಸ್ವಿಗೊಳಿಸುತ್ತದೆ. ವಿರಮಿಸದೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನದ ಅಂಗವಾಗಿ ಜಿಲ್ಲಾ ಬಿಜೆಪಿ ನೇತೃತ್ವ ಹಾಗೂ ಜಿಲ್ಲಾ ರೈತ ಮೋರ್ಚಾ ಸಹಯೋಗದಲ್ಲಿ ನೀಲಾವರ ಗೋಶಾಲೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಅಭಿಯಾನಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಹೊಸ ತಂಡ ರಚನೆಯಾಗಿದೆ. ಟೀಕೆಗಳಿಗೆ ಉತ್ತಮ ಕೆಲಸದ ಮೂಲಕ ಉತ್ತರ ನೀಡೋಣ. ಸಂಪರ್ಕ, ಪ್ರವಾಸ ಮತ್ತು ಸಭೆಗಳಿಗೆ ಒತ್ತು ನೀಡಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ನಡೆಯಬೇಕು. ಎಲ್ಲರೂ ಒಟ್ಟಾಗಿ ಒಂದಾಗಿ ಪಕ್ಷದ ಸಂಕಲ್ಪ, ಉದ್ದೇಶವನ್ನು ಕಣ್ಣ ಮುಂದೆ ಇಟ್ಟುಕೊಂಡು ಜಿಲ್ಲೆಯಲ್ಲಿ ಬಿಜೆಪಿಯನ್ನು ಇನ್ನಷ್ಟು ಸದೃಢಗೊಳಿಸೋಣ. ಸಂಘಟಿತ ಪರಿಶ್ರಮದ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸೋಣ ಎಂದರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ 2014ರ ಮೊದಲು ದೇಶದಲ್ಲಿ ಯಾವ ರೀತಿಯ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಇತ್ತು ಎಂಬ ಅರಿವು ಎಲ್ಲರಿಗೂ ಇದೆ. ಆ ಬಳಿಕ ಜನತೆಯ ಆಶಾಕಿರಣವಾಗಿ ಮೂಡಿಬಂದ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸವಾಲುಗಳನ್ನು ಸ್ವೀಕರಿಸಿ, ಐತಿಹಾಸಿಕ ಸಾಧನೆಗಳ ಜೊತೆಗೆ ಆರ್ಥಿಕತೆಯಲ್ಲಿ ದೇಶವನ್ನು 3ನೇ ಸ್ಥಾನದತ್ತ ಕೊಂಡೊಯ್ದು ಪ್ರಸಕ್ತ ಜೂ.10ರಂದು ದೇಶದ ಸುದೀರ್ಘ ಅವಧಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿರುವುದು ಹೆಮ್ಮೆಯ ವಿಚಾರ. ಈ ಸಂಭ್ರಮಾಚರಣೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕರೆಯಂತೆ ನಡೆಯುತ್ತಿರುವ ಅರ್ಥಪೂರ್ಣ ಅಭಿಯಾನವನ್ನು ಎಲ್ಲರೂ ಬದ್ಧತೆಯಿಂದ ತೊಡಗಿಸಿಕೊಂಡು ಯಶಸ್ವಿಗೊಳಿಸೋಣ. ಒಗ್ಗಟ್ಟು ಮತ್ತು ಸಂಘಟಿತ ಪ್ರಯತ್ನದ ಮೂಲಕಯಾವುದೇ ಸವಾಲುಗಳನ್ನು ಮೆಟ್ಟಿ ನಿಂತು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಮಗದೊಮ್ಮೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸೋಣ ಎಂದರು.

ಗೋಪೂಜೆಯೊಂದಿಗೆ ಔಷಧೀಯ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ’ ಹಾಗೂ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಗ್ರಾಮಾಂತರ ಮಂಡಲ ವ್ಯಾಪ್ತಿಯ 12 ಮಂದಿ ಕೃಷಿಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ ಕುಲಾಲ್, ಅಭಿಯಾನದ ಜಿಲ್ಲಾ ಸಂಚಾಲಕ ಮಹಾವೀರ ಹೆಗ್ಡೆ, ಸಹ ಸಂಚಾಲಕರಾದ ಶಿವಕುಮಾರ್ ಅಂಬಲಪಾಡಿ, ಅನಿತಾ ಶ್ರೀಧರ್ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಹಾಗೂ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಕಮಲಾಕ್ಷ ಹೆಬ್ಬಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು.

ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮೋಹನ್ ಚಂದ್ರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿ, ಪುಷ್ಪರಾಜ್ ಶೆಟ್ಟಿ ವಂದಿಸಿದರು.

Design a site like this with WordPress.com
Get started