ಕಾಪು: ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕರಾವಳಿ ಜಿಲ್ಲೆಗಳನ್ನು ಕೊಲೆಗಡುಕರ ಜಿಲ್ಲೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿ ಕರಾವಳಿ ಜನತೆಗೆ ಅವಮಾನ ಮಾಡಿರುತ್ತಾರೆ. ಕರಾವಳಿ ಜಿಲ್ಲೆಗಳನ್ನು ಎಲ್ಲ ವಿಚಾರಗಳಲ್ಲಿ ದೇಶಕ್ಕೆ ಮಾದರಿ ಎನ್ನುತ್ತಾರೆ. ಸರಕಾರದ ಹೆಚ್ಚಿನ ಯೋಜನೆಗಳನ್ನು ಜಾರಿಗೆ ತರುವಾಗ ಬುಧ್ಧಿವಂತರ ಜಿಲ್ಲೆ ಎಂದು ಮೊದಲು ಕರಾವಳಿ ಜಿಲ್ಲೆಯಲ್ಲಿ ಜ್ಯಾರಿಗೆ ತಂದು ಸಾಧಕ ಬಾಧಕ ನೋಡಿ ಆಮೇಲೆ ಇತರ ಕಡೆ ಅನುಷ್ಠಾನಕ್ಕೆ ತರುತ್ತಾರೆ. ಜಾತಿಯ ಅಮಲಿನಲ್ಲಿಲ್ಲದೆ, ಹಣದ ಆಮಿಷಕ್ಕೆ ಒಳಗಾಗದೆ ಸಿಧ್ದಾಂತದ ಮೇಲೆ ಇಲ್ಲಿ ಚುನಾವಣೆ ನಡೆಯುತ್ತದೆ. ಕಳೆದ ಬಾರಿ ಕಾಂಗ್ರೆಸನ್ನು ಕರಾವಳಿಯಿಂದ ಕಿತ್ತು ಬಿಸಾಡಲಾಗಿದ್ದು ಕೇವಲ ಒಂದು ಸೀಟಿಗೆ ತ್ರಪ್ತಿಪಟ್ಟಿದ್ದು ಈ ಬಾರಿ ಅದೂ ಕೈ ತಪ್ಪುವ ಹೆದರಿಕೆಯಿಂದ ಬಾಯಿಗೆ ಬಂದಂತೆ ಮಾತನಾಡಿ ಕರಾವಳಿಗೆ ಅವಮಾನ ಮಾಡಿರುವ ಬಿಕೆ ಹರಿಪ್ರಸಾದ್ ರವರು ಕೂಡಲೇ ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ನಿಮಗೆ ಚುನಾವಣೆಯಲ್ಲಿ ಕೆಲಸ ಮಾಡಲು ನಿಮ್ಮ ಪಕ್ಷದವರೂ ಸಿಗಲಿಕ್ಕಿಲ್ಲ ಎಂದು ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಆಗ್ರಹಿಸಿದ್ದಾರೆ.
ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರಕಾರ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ನಡೆಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಉಡುಪಿ ನಗರದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯ ಪೂರ್ವಭಾವಿಯಾಗಿ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಹಿಂದೆ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲದ ಪರಿಸ್ಥಿತಿ ಇತ್ತು. ಈಗ ಪ್ರತಿ ಕ್ಷೇತ್ರಕ್ಕೆ 10ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಇದು ಪಕ್ಷದ ಸದೃಢತೆ ಮತ್ತು ಬೆಳವಣಿಗೆಗೆ ಸ್ಪಷ್ಟ ಉದಾಹರಣೆ ಎಂದು ಅಭಿಪ್ರಾಯಪಟ್ಟರು.
ಹಿಂದೆ ಪಕ್ಷಕ್ಕೆ ಜನರು ಪೂರ್ಣ ಬಹುಮತ ಕೊಟ್ಟಿರಲಿಲ್ಲ. ಈ ಬಾರಿ ಸಂಪೂರ್ಣ ಬಹುಮತ ಪಡೆಯಲು ರಥಯಾತ್ರೆ ನೆರವಾಗಲಿದೆ ಎಂದು ನುಡಿದರು.
ಕೇಂದ್ರದಲ್ಲಿ ವಿಶ್ವನಾಯಕ ಮೋದಿಜಿ ಮತ್ತಿತರ ನಾಯಕರ ನೇತೃತ್ವ, ರಾಜ್ಯದಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಳಿನ್ಕುಮಾರ್ ಕಟೀಲ್ ಅವರ ಮೂಲಕ ಬಿಜೆಪಿ ನೇತೃತ್ವವನ್ನು ಜನತೆ ಗಮನಿಸಿದ್ದಾರೆ ಎಂದು ತಿಳಿಸಿದರು.
ವಿಜಯ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಮತ್ತು ರಾಜ್ಯದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಲಿದ್ದೇವೆ. ಕಾಂಗ್ರೆಸ್ಸಿನ ಭ್ರಷ್ಟಾಚಾರದ ಜನರ ಮುಂದಿಡುವುದು ಬಿಜೆಪಿ ಗೆಲುವಿಗೆ ನೆರವಾಗಲಿದೆ ಎಂದರು.
ತಿಹಾರ್ ಜೈಲಿಗೆ ಹೋಗಿ ಬಂದ ಡಿ.ಕೆ. ಶಿವಕುಮಾರ್, ರೀಡೂ ಮೂಲಕ ಸಿದ್ದರಾಮಯ್ಯರ ಭ್ರಷ್ಟ ಆಡಳಿತ ಸೇರಿದಂತೆ ಕಾಂಗ್ರೆಸ್ ವೈಫಲ್ಯವನ್ನು ಜನರಿಗೆ ತಿಳಿಸಲಿದ್ದೇವೆ ಎಂದು ಅವರು ತಿಳಿಸಿದರು.
ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಖಾತೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಹಾಗೂ ಉ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ವಿಜಯ ಸಂಕಲ್ಪ ಯಾತ್ರೆ ರಾಜ್ಯ ಸಹ ಸಂಚಾಲಕರಾದ ದತ್ತಾತ್ರಿ ಎಸ್. ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಮುಂತಾದವರು ಉಪಸ್ಥಿತರಿದ್ದರು.
ಕಾಪು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಬೈಕ್ ರ್ಯಾಲಿ ಹಾಗೂ ಜಿಲ್ಲೆಯ ವಿವಿಧೆಡೆ ನಡೆದ ರೋಡ್ ಶೋನಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಪಕ್ಷದ ಹಿರಿಯ ಮುಖಂಡ ಕೀರ್ತಿಶೇಷ ಡಾ! ವಿ.ಎಸ್ .ಆಚಾರ್ಯ ಅವರ ಪ್ರತಿಮೆಗೆ ಪಕ್ಷದ ಮುಖಂಡರು ಮಾಲಾರ್ಪಣೆ ಮಾಡಿದರು.
ಬೆಂಗಳೂರು: ನಮ್ಮ ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಇದೆ. ನಿರೀಕ್ಷೆಗೂ ಮೀರಿದ ಬೆಂಬಲ ರಥ ಯಾತ್ರೆಗೆ ಸಿಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಮತ್ತು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು! ಶೋಭಾ ಕರಂದ್ಲಾಜೆ ಅವರು ತಿಳಿಸಿದರು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ನವರು ಯಾತ್ರೆ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯು ನಡ್ಡಾ, ರಾಜನಾಥ ಸಿಂಗ್, ಅಮಿತ್ ಶಾ ಅವರು ಉದ್ಘಾಟಿಸಿದ ರಥ ಯಾತ್ರೆಗೆ ಅದ್ಭುತ ಜನಬೆಂಬಲ ಸಿಗುತ್ತಿದೆ ಎಂದು ತಿಳಿಸಿದರು.
ನರೇಂದ್ರ ಮೋದಿಯವರು ಆರ್ಥಿಕ ರಾಜಧಾನಿ ಬೆಂಗಳೂರು-ಸಾಂಸ್ಕತಿಕ ರಾಜಧಾನಿ ಮೈಸೂರಿನ ಅಭಿವೃದ್ಧಿಯ ಕನಸು ನನಸಿಗೆ 10 ಪಥಗಳ ಹೈವೇ ಉದ್ಘಾಟಿಸಲಿದ್ದಾರೆ. 9,500 ಕೋಟಿ ವೆಚ್ಚದಲ್ಲಿ ಇದನ್ನು ನಿರ್ಮಿಸಲಾಗಿದೆ ಎಂದರು.
ಪೂರಕವಾದ ಟ್ರಾಫಿಕ್ ಸಮಸ್ಯೆ ಅಲ್ಲಿತ್ತು. ಅದನ್ನು ನಿವಾರಿಸಲು ಹೈಸ್ಪೀಡ್ ರೈಲು ಸಂಚಾರ ಆರಂಭ, ರೈಲ್ವೆ ಲೈನ್, ಸ್ಟೇಷನ್ಗಳ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು-ಮೈಸೂರು ಹೈವೇ ದಶಕಗಳ ಕನಸು. ಹಿಂದೆ ಪ್ರಧಾನಿಯಾಗಿದ್ದ ದೇವೇಗೌಡರು ಇಂಥ ಕನಸು ಕಂಡಿದ್ದರು. ಆದರೆ, ನೈಸ್ ರಸ್ತೆಯು ಯಶವಂತಪುರ, ಬಿಡದಿಯಿಂದ ಮುಂದೆ ಹೋಗಲೇ ಇಲ್ಲ. ಆಗಲೇ ರಸ್ತೆ ನಿರ್ಮಾಣ ಆಗಿದ್ದರೆ ಮೈಸೂರು ಮತ್ತು ರಸ್ತೆ ಹಾದುಹೋಗುವ ಪ್ರದೇಶಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತಿದ್ದವು. ಪ್ರಧಾನಿಯವರು 2018ರಲ್ಲಿ ಮೈಸೂರಿಗೆ ಬಂದಾಗ ದಶಪಥ ರಸ್ತೆ ಘೋಷಿಸಿದ್ದರು. ಮರುದಿನವೇ ಕ್ಯಾಬಿನೆಟ್ ಸಬ್ ಕಮಿಟಿಯೂ ಇದಕ್ಕೆ ಅನುಮೋದನೆ ಕೊಟ್ಟಿತು ಎಂದು ತಿಳಿಸಿದರು.
2018 ಮಾರ್ಚ್ನಲ್ಲಿ ಇದಕ್ಕೆ ಶಿಲಾನ್ಯಾಸ ನೆರವೇರಿತು. ಡಿ.ವಿ. ಸದಾನಂದ ಗೌಡರು ಇದರಲ್ಲಿ ಭಾಗವಹಿಸಿದ್ದರು. ಇವತ್ತು ಅದೇ ಪ್ರಧಾನಿಯವರು ಈ ಐತಿಹಾಸಿಕ ಯೋಜನೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಹಿಂದೆ ಕಲ್ಲು ಹಾಕುವುದು, ಶಿಲಾನ್ಯಾಸ ಮಾಡಿದ ಶಿಲೆಗಳೇ ಮಾಯ ಆಗುತ್ತಿದ್ದವು ಎಂದು ತಿಳಿಸಿದರು.
ರೂ.4,428 ಕೋಟಿ ಮೊತ್ತದಲ್ಲಿ ಮೊದಲ ಹಂತ ನಿರ್ಮಾಣವಾಗಿದೆ. ರೂ.4,500 ಕೋಟಿಯಲ್ಲಿ ಎರಡನೇ ಹಂತ ನಿರ್ಮಾಣಗೊಂಡಿದೆ. ಮೊದಲಿಗೆ ದ್ವಿಪಥ ರಸ್ತೆ ಇತ್ತು. ಸಂಚಾರದ ಸಮಸ್ಯೆ ತೀವ್ರವಿತ್ತು. ಈಗ ಒಂದೂವರೆ ಗಂಟೆಯಲ್ಲಿ ಶ್ರೀರಂಗಪಟ್ಟಣ, ಮೈಸೂರಿಗೆ ತಲುಪಲು ಸಾಧ್ಯವಿದೆ ಎಂದು ವಿವರ ನೀಡಿದರು.
ನರೇಂದ್ರ ಮೋದಿಯವರು ಜನಪ್ರತಿನಿಧಿಯನ್ನು ಗಮನಿಸಿ ಯೋಜನೆ ನೀಡಿಲ್ಲ. ಬೆಂಗಳೂರು-ಮೈಸೂರು ನಡುವೆ ನಮ್ಮ ಶಾಸಕರು ಇಲ್ಲದೇ ಇರಬಹುದು. ಆದರೆ, ಮೋದಿಯವರು ಒಂದೇ ಒಂದು ನಮ್ಮ ಸಂಸದರಿಲ್ಲದ ಕೇರಳಕ್ಕೆ ಯೋಜನೆ ಕೊಟ್ಟ ಮಾದರಿಯಲ್ಲೇ ಅದೇ ಮಾದರಿಯ ಯೋಜನೆಯನ್ನು ಕರ್ನಾಟಕ, ಉತ್ತರ ಪ್ರದೇಶಕ್ಕೆ ಕೊಟ್ಟಿದ್ದಾರೆ. ದೇಶದ ಜೊತೆಗಿರುವ ಎಲ್ಲ ಕೊಂಡಿಗಳಾದ ರಾಜ್ಯಗಳು ಸಶಕ್ತಿಯುತ ಅಭಿವೃದ್ಧಿಯಿಂದ ಕೂಡಿರಲಿ ಎಂಬ ಆಶಯ ಪ್ರಧಾನಿಯವರದು ಎಂದು ವಿಶ್ಲೇಷಿಸಿದರು.
ಸುಮಾರು 6,500 ಜನರಿಗೆ ಈ ರಸ್ತೆ ಉದ್ಯೋಗ ಕೊಟ್ಟಿದೆ. ಈ ಹೈವೇಯ ಎರಡೂ ಬದಿಗಳಲ್ಲಿ ಕೈಗಾರಿಕಾ ಕಾರಿಡಾರ್ ಅಥವಾ ಮಳಿಗೆಗಳು, ಹೋಟೆಲ್ಗಳ ಮೂಲಕ ಉದ್ಯೋಗ ಲಭಿಸುತ್ತವೆ ಎಂದು ಆಶಯ ವ್ಯಕ್ತಪಡಿಸಿದರು. ಪ್ರವಾಸೋದ್ಯಮದಲ್ಲಿ ಉತ್ತುಂಗ ಸ್ಥಿತಿಗೆ ಮೈಸೂರನ್ನು ಒಯ್ಯಲು ಸಾಧ್ಯವಿದೆ ಎಂದರು.
ದಸರಾ ವೀಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ ಎಂದು ನುಡಿದರು. ಪ್ರಧಾನಿಯವರಿಗೆ ಅಭಿನಂದನೆಗಳು ಎಂದು ತಿಳಿಸಿದರು.
ರಾಜ್ಯದ ಹೈವೇಗಳು, ರೈಲ್ವೆ ನಿಲ್ದಾಣಗಳಿಗೆ ಹಣ ಕೊಡುತ್ತಿದ್ದಾರೆ. ವಿಮಾನ ನಿಲ್ದಾಣಗಳ ನಿರ್ಮಾಣ ಆಗುತ್ತಿದೆ. ಕುಡಿಯುವ ನೀರು, ವಿದ್ಯುತ್ ಸೇರಿ ಎಲ್ಲ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡುತ್ತಿದ್ದಾರೆ ಎಂದು ಸಂತಸ ಸೂಚಿಸಿದರು. ದೇಶದಲ್ಲಿ ನಂಬಬಹುದಾದ ನೇತೃತ್ವ ನರೇಂದ್ರ ಮೋದಿಯವರಲ್ಲಿ ಇದೆ. ಯಾರೂ ಪಕ್ಷ ಬಿಡುವುದಿಲ್ಲ. ಕೇಂದ್ರ- ಹಲವಾರು ರಾಜ್ಯಗಳಲ್ಲಿ ಅಸ್ತಿತ್ವವೇ ಇಲ್ಲದ ಇನ್ನೊಂದು ಪಕ್ಷಕ್ಕೆ ಯಾರೂ ಹೋಗುವುದಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಪುಟ್ಟಣ್ಣ ಪಕ್ಷ ತೊರೆಯುತ್ತಿರುವ ಕುರಿತ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಕೈಗೆಟುಕದ ದ್ರಾಕ್ಷಿ ಹುಳಿ ಎಂಬ ಮಾತನ್ನು ನೆನಪಿಸಿದರು. ಅವರೇನೋ ನಿರೀಕ್ಷೆ ಇಟ್ಟು ಬಂದಿರುತ್ತಾರೆ. ಬಿಜೆಪಿಯಲ್ಲಿ ಅವರು ಎಂಎಲ್ಸಿಯೂ ಆಗಿದ್ದಾರೆ. ಅದನ್ನು ಅವರು ಮರೆಯಬಾರದು. ಅವರು ಇನ್ಯಾವುದೋ ಲಾಭಕ್ಕಾಗಿ ಪಕ್ಷ ಬಿಟ್ಟಿರಬಹುದು ಎಂದರು. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ದೇಶದಲ್ಲಿ ಒಂದಾದ ನಂತರ ಒಂದು ರಾಜ್ಯದಲ್ಲಿ ಗೆಲುವು ಸಾಧಿಸುತ್ತಿದೆ. ಒಂದು ಅಭೂತಪೂರ್ವ ವಿಜಯ ಕಳೆದ ವರ್ಷ ಇದೇ ವೇಳೆಗೆ ಸಿಕ್ಕಿತ್ತು. ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ 2ನೇ ಬಾರಿ ಸರಕಾರ ರಚನೆ ಅವಕಾಶ ಯೋಗಿಯವರಿಗೆ ಸಿಕ್ಕಿತ್ತು. ಮೊನ್ನೆ ಗುಜರಾತ್ ನಲ್ಲಿ ನಡೆದ ಚುನಾವಣೆಯಲ್ಲಿ ಹಿಂದೆ ಮೋದಿಯವರೇ ಸಿಎಂ ಆಗಿದ್ದಾಗ ಸಿಗದ ದೊಡ್ಡ ಯಶಸ್ಸು ಅವರು ಪ್ರಧಾನಿ ಆದಾಗ ಗುಜರಾತಿನ ಜನರು ಮೊನ್ನೆ ಕೊಟ್ಟರು ಎಂದರು. ಗುಜರಾತ್ನಲ್ಲಿ ಮೋದಿಯವರೇ ನಾಯಕ. 3 ಈಶಾನ್ಯ ರಾಜ್ಯಗಳಲ್ಲಿ ಹಿಂದೆ ಕೇಂದ್ರ ನಾಯಕರು ತೆರಳಿದರೆ ಭಾರತದ ವಿರುದ್ಧ ಘೋಷಣೆ ಕೂಗುತ್ತಿದ್ದರು. 2014ರ ಮೊದಲು ಈ ರಾಜ್ಯಗಳ ಸ್ಥಿತಿ ಅತ್ಯಂತ ಕೆಟ್ಟದಾಗಿತ್ತು. ಭಯೋತ್ಪಾದಕತೆ, ಒಳ ನುಸುಳುವಿಕೆ, ಬಡತನ ಅಲ್ಲಿತ್ತು. ಅಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ ಸೇರಿ ಮೂಲ ಸೌಕರ್ಯದ ಕಡೆ ಗಮನ ಕೊಟ್ಟಿರಲಿಲ್ಲ. ಈಗ ಈಶಾನ್ಯ ರಾಜ್ಯಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಅವು ಹೈವೇಗಳು, ರೈಲು ಸಾಕಾರವಾದ ರಾಜ್ಯವಾಗಿವೆ. ವಿಮಾನ ನಿಲ್ದಾಣಗಳೂ ನಿರ್ಮಾಣವಾಗುತ್ತಿದೆ. ಮೊನ್ನೆ ನಡೆದ ಚುನಾವಣೆಯಲ್ಲಿ 3 ರಾಜ್ಯಗಳಲ್ಲೂ ಜನತೆ ನಮ್ಮನ್ನು ಗೆಲ್ಲಿಸಿದ್ದಾರೆ ಎಂದು ವಿವರಿಸಿದರು.
ನಾಗಾಲ್ಯಾಂಡ್, ತ್ರಿಪುರ, ಮೇಘಾಲಯದಲ್ಲಿ ಕ್ರಿಶ್ಚಿಯನ್ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವತ್ತು ಅಲ್ಲಿನ ಜನ ಬಿಜೆಪಿ ಮತ್ತು ಭಾರತದ ಜೊತೆ ಜೋಡಣೆ ಆಗಿದ್ದಾರೆ. ಇದಕ್ಕೆ ಮೋದಿಯವರು ಮತ್ತವರ ಅಭಿವೃದ್ಧಿ ಕಾರ್ಯಗಳು ಕಾರಣ ಎಂದು ತಿಳಿಸಿದರು.
ಚುನಾವಣಾ ನಿರ್ವಹಣಾ ಸಮಿತಿ ಮತ್ತು ಚುನಾವಣಾ ಪ್ರಚಾರ ಸಮಿತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾರವರ ಮಾರ್ಗದರ್ಶನದಡಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಯವರ ನೇತೃತ್ವದ ತಂಡ ಕರ್ನಾಟಕದ ಚುನಾವಣಾ ಪ್ರಚಾರ ಕಾರ್ಯವನ್ನು ನಿರ್ವಹಿಸಲಿದೆ ಎಂದರು.
ಚುನಾವಣಾ ನಿರ್ವಹಣಾ ಸಮಿತಿಯು ಅತ್ಯಂತ ಪ್ರಮುಖವಾಗಿ ಮಾಧ್ಯಮ, ಸಾಮಾಜಿಕ ಜಾಲತಾಣ, ಪ್ರಚಾರ, ಪ್ರಸಾರ, ಪ್ರವಾಸ, ಅತಿಥಿ ಕಾರ್ಯಕರ್ತರು, ಕೇಂದ್ರದ ನಾಯಕರ ಪ್ರವಾಸ ಸೇರಿ ಚುನಾವಣೆಯ ಸುಮಾರು 32 ವಿಭಾಗಗಳ ನಿರ್ವಹಣೆ ಮಾಡಲಿದೆ. ಕೇವಲ ಎರಡರಿಂದ ಎರಡೂವರೆ ತಿಂಗಳಲ್ಲಿ ಚುನಾವಣೆ ಮುಗಿಸಲಿದೆ. ಈ ಜವಾಬ್ದಾರಿ ಕೊಟ್ಟ ಕೇಂದ್ರ ನಾಯಕರು ಮತ್ತು ರಾಜ್ಯಾಧ್ಯಕ್ಷರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ್, ಸಿದ್ದರಾಜು, ಮಹೇಶ್ ಟೆಂಗಿನಕಾಯಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಉಡುಪಿ: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ 15ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ಹಾಗೂ ನೇಮೋತ್ಸವದ ಅಂಗವಾಗಿ ಗರೋಡಿಯ ಪದಾಧಿಕಾರಿ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಗರೋಡಿಯ ಆಡಳಿತ ಸಮಿತಿಯ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಯವರ ಅಧ್ಯಕ್ಷತೆಯಲ್ಲಿ ಗರೋಡಿಯ ಪ್ರಾಂಗಣದಲ್ಲಿ ಜರಗಿತು.
ಬಿಲ್ಲವರ ಸಮಾಜ ಸೇವಾ ಸಂಘ(ರಿ.) ಮಲ್ಪೆ ಇದರ ಶತಮಾನೋತ್ಸವ ವರ್ಷದ ಆಡಳಿತ ಸಮಿತಿಯ ಅಧ್ಯಕ್ಷ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ, ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಪ್ರಭಾರ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿ(ರಿ.), ಕಿದಿಯೂರು ಇದರ ಅಧ್ಯಕ್ಷ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ(ರಿ.) ಆದಿವುಡುಪಿ ಇದರ ವಿಶ್ವಸ್ಥ ಹರೀಶ್ ಎಮ್.ಕೆ., ಕಲ್ಮಾಡಿ ಇವರನ್ನು ಗರೋಡಿಯ ಆಡಳಿತ ಸಮಿತಿಯ ವತಿಯಿಂದ ಶಾಲು ಹೊದೆಸಿ, ಶ್ರೀ ಬ್ರಹ್ಮ ಬೈದೇರುಗಳ ಗಂಧ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗರೋಡಿಯ ಸನ್ನುದ್ದಾರ ರಾಮಚಂದ್ರ ಕಿದಿಯೂರು, ಕೊಡವೂರು ಮಹತೋಭಾರ ಶ್ರೀ ಶಂಕರ ನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಗರೋಡಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷ ಶಶಿಧರ್ ಎಮ್. ವಡಭಾಂಡೇಶ್ವರ, ಗರೋಡಿ ಮನೆ ನಾರಾಯಣ ಪೂಜಾರಿ, ನಾಲ್ಕರೆ ಗುರಿಕಾರ ವಿಠ್ಠಲ ಪೂಜಾರಿ, ಗರೋಡಿಯ ಅರ್ಚಕ ರಾಘವ ಪೂಜಾರಿ ಮತ್ತು ಆಡಳಿತ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ಗರೋಡಿ ಮನೆಯವರು, ಕೂಡುಕಟ್ಟಿನ ಗುರಿಕಾರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಗರೋಡಿಯ ಆಡಳಿತ ಸಮಿತಿಯ ಕೋಶಾಧಿಕಾರಿ ಬಾಲಕೃಷ್ಣ ಕೊಡವೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸಾವಿರಾರು ಮಂದಿ ಭಕ್ತಾದಿಗಳು ಅನ್ನ ಪ್ರಸಾದವನ್ನು ಸ್ವೀಕರಿಸಿದರು.
ಉಡುಪಿ: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಮಾ.12ರಂದು ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ-ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಸಂಘಟಿತ ಪ್ರಯತ್ನದ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟೇಶ್ವರದ ಕುರುಕ್ಷೇತ್ರ ಮೈದಾನಕ್ಕೆ ಬೇಟಿ ನೀಡಿ ಮಹಿಳಾ ಸಮಾವೇಶದ ಸಕಲ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿಯವರ ನೇತೃತ್ವದಲ್ಲಿ ಎಲ್ಲ ಮಂಡಲವಾರು ಮತ್ತಿತರ ಸಭೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು ಬೃಹತ್ ಸಂಖ್ಯೆಯಲ್ಲಿ ನಾರೀಶಕ್ತಿಯ ಅನಾವರಣವಾಗಲಿದೆ ಎಂದರು.
ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ಉದ್ಘಾಟಿಸಲಿರುವ ಜಿಲ್ಲಾ ಮಹಿಳಾ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಳವಿಕಾ ಅವಿನಾಶ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಈಗಾಗಲೇ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಯುವ ಸಮಾವೇಶ ಯಶಸ್ವಿಯಾಗಿ ನಡೆದಿದೆ. ಮಾ.14ರಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಸಿ. ಎಸ್.ಟಿ. ಸಮಾವೇಶ; ಮಾ.18ರಂದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರೈತ ಸಮಾವೇಶ ಹಾಗೂ ಮಾ.22ರಂದು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಕೋಟೇಶ್ವರ ಮಹಾ ಶಕ್ತಿಕೇಂದ್ರದ ಕಾರ್ಯದರ್ಶಿ ನಾಗರಾಜ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶವು ಮಾ.12 ರವಿವಾರ ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.
ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಬೃಹತ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಳವಿಕಾ ಅವಿನಾಶ್ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠಗಳ ಸಹಿತ ಜಿಲ್ಲೆಯ ಎಲ್ಲ ಆರು ಮಂಡಲಗಳ ವ್ಯಾಪ್ತಿಯ ಮಹಿಳಾ ಮೋರ್ಚಾ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಜಿಲ್ಲಾ ಮಹಿಳಾ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಉಡುಪಿ: ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ರವರು ಮಾ.19ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಮಾ.19 ರವಿವಾರ ಮಧ್ಯಾಹ್ನ 2.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿರುವ ಪ್ರಬುದ್ಧರ ಗೋಷ್ಠಿಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಒಂಭತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ ಕೇಂದ್ರ ಸರಕಾರದ ಶಿಕ್ಷಣ ಮತ್ತು ಕೌಶಲ್ಯ ಇಲಾಖೆ ಸುಮಾರು 26 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.
ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಕೇಂದ್ರೀಯ ವಿದ್ಯಾಲಯ ಚಾಲನೆಯಲ್ಲಿತ್ತು. ಉಡುಪಿ ಜಿಲ್ಲೆಯಲ್ಲಿನ ಕೇಂದ್ರೀಯ ವಿದ್ಯಾಲಯ ಮತ್ತು ಸಿಬ್ಬಂದಿ ವಸತಿ ಕಟ್ಟಡಗಳ ಅವಶ್ಯಕತೆ ಬಗ್ಗೆ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರಲ್ಲಿ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆ ಸುಮಾರು 26 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಒಂದರಿಂದ ಹತ್ತನೆಯ ತರಗತಿಗಳಿಗೆ ತಲಾ ಎರಡು ವಿಭಾಗಗಳುಳ್ಳ ತರಗತಿ ಕೊಠಡಿಗಳು ಮತ್ತು ಒಂಬತ್ತು ಸಿಬ್ಬಂದಿ ವಸತಿಗಳ ಕಟ್ಟಡದ ನಿರ್ಮಾಣಕ್ಕೆ ಈಗಾಗಲೇ ಟೆಂಡರ ಅನುಮೋದನೆಯಾಗಿದ್ದು, ಅತೀ ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭವಾಗಲಿದೆಯೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕೇಂದ್ರೀಯ ವಿದ್ಯಾಲಯದ ಹೊಸ ಕಟ್ಟಡ ಈ ಭಾಗದ ವಿದ್ಯಾರ್ಥಿಗಳಿಗೆ ಸದುಪಯೋಗವಾಗಲಿದೆ. ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡಿದ ನೆಚ್ಚಿನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮತ್ತು ಕೇಂದ್ರದ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಧರ್ಮೇಂದ್ರ ಪ್ರಧಾನ್ ರವರಿಗೆ ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಸಂಸದೆ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿನಂದನೆ ತಿಳಿಸಿದ್ದಾರೆ.
ಉಡುಪಿ: ವಿಜಯ ಸಂಕಲ್ಪ ಯಾತ್ರೆ, ಪ್ರಗತಿ ರಥ ಯಾತ್ರೆ ಹಾಗೂ ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಜಿಲ್ಲಾ ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಮಟ್ಟದ *ಯುವ ಸಮಾವೇಶ ಫೆ.27ರಂದು* ಕಾರ್ಕಳದಿಂದ 12,000ಕ್ಕೂ ಮಿಕ್ಕಿ ಬೈಕ್ಗಳ ಜಾಥಾ ಮೂಲಕ ಚಾಲನೆಗೊಂಡು ಅಜೆಕಾರಿನಲ್ಲಿ ಯಶಸ್ವಿಯಾಗಿ ನಡೆದಿದೆ.
*ಮಾ.12ರಂದು* ಕುಂದಾಪುರದ ನೆಹರೂ ಮೈದಾನದಲ್ಲಿ *ಜಿಲ್ಲಾ ಮಹಿಳಾ ಸಮಾವೇಶ* ವನ್ನು ಬೆಳಿಗ್ಗೆ 10.00 ಗಂಟೆಗೆ ಅದ್ದೂರಿಯಾಗಿ ನಡೆಸಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
*ಮಾ.15ರಂದು* ಬೆಳಿಗ್ಗೆ 10.00 ಗಂಟೆಗೆ ಬ್ರಹ್ಮಾವರದಲ್ಲಿ *ಜಿಲ್ಲಾ ಹಿಂದುಳಿದ ವರ್ಗಗಳ ಸಮಾವೇಶ* ಹಾಗೂ
*ಮಾ.19ರಂದು* ಕಾಪು ವಿಧಾನಸಭಾ ಕ್ಷೇತ್ರದಲ್ಲಿ *ಜಿಲ್ಲಾ ರೈತ ಸಮಾವೇಶ* ನಡೆಯಲಿದೆ ಎಂದು ಅವರು ತಿಳಿಸಿದರು.
ಬಿಜೆಪಿ *’ವಿಜಯ ಸಂಕಲ್ಪ ಯಾತ್ರೆ’ *ಮಾ.13ರಿಂದ 15ರ ವರೆಗೆ* ಉಡುಪಿ ಜಿಲ್ಲೆಯಾದ್ಯಂತ ಈ ಕೆಳಗಿನಂತೆ ನೆರವೇರಲಿದೆ:
*ಮಾ.13*, ಮಧ್ಯಾಹ್ನ 3.30ಕ್ಕೆ *ಕಾರ್ಕಳ* ವಿಧಾನಸಭಾ ಕ್ಷೇತ್ರಕ್ಕೆ ಆಗಮನ, ಹೆಬ್ರಿಯಲ್ಲಿ ರೋಡ್ ಶೋ. ಸಂಜೆ 5.30ಕ್ಕೆ ಸಾರ್ವಜನಿಕ ಸಭೆ.
*ಮಾ.14*, ಬೆಳಿಗ್ಗೆ 9.00ಕ್ಕೆ *ಕಾಪು* ವಿಧಾನಸಭಾ ಕ್ಷೇತ್ರದ ಪೆರ್ಡೂರು-ಪಾಡಿಗಾರದಲ್ಲಿ ಸ್ವಾಗತ, ಸುಮಾರು 2,000 ಬೈಕ್ ಗಳ ಜಾಥಾ.
*ಮಾ.14*, ಮಧ್ಯಾಹ್ನ 11.00ಕ್ಕೆ *ಉಡುಪಿ* ವಿಧಾನಸಭಾ ಕ್ಷೇತ್ರದ ಪರ್ಕಳಕ್ಕೆ ಆಗಮನ, ಸುಮಾರು 2,000 ಬೈಕ್ ಗಳ ಜಾಥಾ.
*ಮಾ.14* ರ ಸಂಜೆ *ಕುಂದಾಪುರ* ವಿಧಾನಸಭಾ ಕ್ಷೇತ್ರದ ಬಾರ್ಕೂರು ಬಳಿ ಸ್ವಾಗತ, ಸಂಜೆ 5.30ಕ್ಕೆ ಸಾರ್ವಜನಿಕ ಸಭೆ.
*ಮಾ.15* ರ ಬೆಳಿಗ್ಗೆ 9.00ಕ್ಕೆ *ಬೈಂದೂರು* ವಿಧಾನಸಭಾ ಕ್ಷೇತ್ರಕ್ಕೆ ಆಗಮನ, ಸಿದ್ದಾಪುರದಲ್ಲಿ ಸಾರ್ವಜನಿಕ ಸಭೆ, ಪತ್ರಿಕಾ ಗೋಷ್ಠಿ. ಬಳಿಕ ಶೃಂಗೇರಿಗೆ ತೆರಳಲಿದೆ ಎಂದು ಅವರು ತಿಳಿಸಿದರು.
*’ಪ್ರಗತಿ ರಥ’* ಯಾತ್ರೆಯನ್ನು ಕರ್ನಾಟಕ ರಾಜ್ಯ ಬಿಜೆಪಿ ವತಿಯಿಂದ ವಿವಿಧ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಆಯೋಜಿಸಲಾಗಿದೆ.
ಪ್ರಮುಖವಾಗಿ ಎಲ್.ಇ.ಡಿ ವಾಹನಗಳ ಮುಖಾಂತರ ಪ್ರಚಾರ ಮಾಡುವ ‘ಪ್ರಗತಿ ರಥ’ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಪ್ರಗತಿಗಾಗಿ ಮಾಡಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸಲಿದೆ.
* ಎಲ್ಲಾ 224 ಕ್ಷೇತ್ರಗಳ 58,000ಕ್ಕೂ ಹೆಚ್ಚಿನ ಬೂತ್ಗಳಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ವೀಡಿಯೊ ಪರದೆಗಳಲ್ಲಿ ಪ್ರದರ್ಶಿಸಲಾಗುವುದು.
* ಈ ರಥದಲ್ಲಿ ಎಲ್.ಇ.ಡಿ ಪರದೆ, ಮೈಕ್ ಸ್ಪೀಕರ್, ಇಂಟರ್ ನೆಟ್, ಲೈವ್ ಸ್ಟ್ರೀಮಿಂಗ್ (Live Streaming), GPS tracking ವ್ಯವಸ್ಥೆಗೊಳಿಸಲಾಗಿದೆ.
* ವಾಹನದಲ್ಲಿ ಮೈಕ್ ಮತ್ತು ಸ್ಪೀಕರ್ಗಳ ವ್ಯವಸ್ಥೆ ಇರುವುದರಿಂದ ಪ್ರತಿ ಬೂತ್ನಲ್ಲಿ ವೀಡಿಯೋ ವೀಕ್ಷಿಸುವ ಜನರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸಲಾಗುತ್ತದೆ. ಮೂಲಕ ಬಿಜೆಪಿ ಸರ್ಕಾರಗಳ ಸಮಾಜ ಕಲ್ಯಾಣ
* ರಥವು ಬಿಜೆಪಿ ಬ್ರಾಂಡಿಂಗ್ನಿಂದ ಶೃಂಗಾರಗೊಂಡಿರುತ್ತದೆ. ಸರ್ಕಾರದ ಸಾಧನೆಗಳನ್ನು ಅದರಲ್ಲಿ ಅಳವಡಿಸಲಾಗುತ್ತದೆ. ರಥದ ಸಂಚಾರವೇ ಒಂದು ಸಂಚಲನ ಉಂಟು ಮಾಡುವಂತಿರುತ್ತದೆ.
* ‘ಪ್ರಗತಿ ರಥವು’ 2 ಲಕ್ಷ ಕಿ.ಮೀ ಗಳಿಗೂ ಹೆಚ್ಚು ದೂರವನ್ನು ಕ್ರಮಿಸುತ್ತದೆ. 135 ರಥಗಳು, 224 ವಿಧಾನಸಭಾ ಕ್ಷೇತ್ರಗಳು, 58,000 ಬೂತ್ಗಳಲ್ಲಿ ಸಂಚಾರ.
*ಚುನಾವಣಾ ಪ್ರಣಾಳಿಕೆಗೆ ಸಲಹೆ*:
ವಿಧಾನಸಭಾ ಚುನಾವಣಾ ಪ್ರಣಾಳಿಕೆಗೆ ಸಾರ್ವಜನಿಕರಿಂದ ಸಲಹೆ ಪಡೆಯುವ ಅಭಿಯಾನವೂ ಜಿಲ್ಲೆಯಾದ್ಯಂತ ನಡೆಯಲಿದ್ದು, ಪ್ರತೀ ಮಂಡಲ ಮಟ್ಟದಲ್ಲಿ ಈ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಕುಯಿಲಾಡಿ ತಿಳಿಸಿದರು.
* ಪ್ರಗತಿ ರಥದಲ್ಲಿಯೂ ಸಲಹಾ ಪೆಟ್ಟಿಗೆಯನ್ನು ಅಳವಡಿಸಲಾಗುತ್ತದೆ. ಪ್ರತೀ ಬೂತ್ನಿಂದಲೂ ಸಲಹೆಗಳನ್ನು ಸ್ವೀಕರಿಸಲಾಗುತ್ತದೆ. ಸಲಹಾ ಪತ್ರದಲ್ಲಿ ಬರೆದು ಸಲಹಾ ಪೆಟ್ಟಿಗೆಯಲ್ಲಿ ಹಾಕಬಹುದು.
* QR Code ರಥದಲ್ಲಿ ಅಳವಡಿಸಲಾಗುತ್ತದೆ. ಅದನ್ನು ತಮ್ಮ ಮೊಬೈಲ್ನಲ್ಲಿ Scan ಮಾಡಿಕೊಂಡು ಅದರ ಮೂಲಕವೂ ಸಲಹೆಗಳನ್ನು ನೀಡುವ ವ್ಯವಸ್ಥೆಗೊಳಿಸಲಾಗಿದೆ.
* ಈ ರೀತಿಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಿಂದ ಸುಮಾರು 10,000 ಸಲಹೆಗಳನ್ನು ಪಡೆಯುವ ಗುರಿ ಹೊಂದಿದ್ದೇವೆ. ಇದರಿಂದಾಗಿ ಇಡೀ ರಾಜ್ಯದಲ್ಲಿ 22,40,000 ಸಲಹೆ ಪಡೆಯಲು ಯೋಜನೆ ಸಿದ್ಧವಾಗಿದೆ.
* ಎಲ್ಲಾ ವ್ಯವಸ್ಥೆಗಳು ಒಳಗೊಂಡ ಈ ಪ್ರಗತಿ ರಥವು ಫೆ.27ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆಗೊಂಡು ಉಡುಪಿ ಜಿಲ್ಲೆಯಾದ್ಯಂತ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕಾರ್ಯ ಪ್ರಾರಂಭಿಸಿದೆ ಎಂದರು.
ವಿಶೇಷವಾಗಿ ಪ್ರಗತಿ ರಥದಲ್ಲಿ ಪ್ರದರ್ಶನಗೊಳ್ಳುವ ವೀಡಿಯೋದಲ್ಲಿ ಸರ್ಕಾರದ ಈ ಕೆಳಗಿನ ಸಾಧನೆಗಳನ್ನು ತಿಳಿಸುವ ಪ್ರಯತ್ನ ಮಾಡಲಾಗುತ್ತದೆ:
1. ಜಲ ಜೀವನ್ ಮಿಷನ್ ನೀರಿನ ಸೌಲಭ್ಯ ಒದಗಿಸಿದೆ. ಯೋಜನೆಯು ರಾಜ್ಯದ 36,83,129 ಮನೆಗಳಿಗೆ ನೇರವಾಗಿ ಕುಡಿಯುವ
2. ಸೌಭಾಗ್ಯ ಯೋಜನೆಯಡಿ ರಾಜ್ಯದ 1.2 ಲಕ್ಷ ಮನೆಗಳಿಗೆ ಶಾಶ್ವತ ವಿದ್ಯುತ್ ವ್ಯವಸ್ಥೆಯನ್ನು ನೀಡಿದೆ.
3. ಡಬಲ್ ಇಂಜಿನ್ ಸರ್ಕಾರದಿಂದ ಮಧ್ಯ ಕರ್ನಾಟಕ ರೈತರ ನೀರಿನ ಬವಣೆ ನೀಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿ ಈ ವರ್ಷದ ಬಜೆಟ್ನಲ್ಲಿ 5,300 ಕೋಟಿ ರೂಪಾಯಿ ಹಂಚಿಕೆ ಮಾಡಿದೆ. ಕಾಂಗ್ರೇಸ್ ಸರ್ಕಾರದ ವಿಳಂಬ ಧೋರಣೆಯಿಂದ ನೆನೆಗುದಿಗೆ ಬಿದ್ದದ್ದ ಈ ಯೋಜನೆ ಇನ್ನು ಕೆಲವೇ ದಿಗನಳಲ್ಲಿ ಸಾಕಾರಗೊಳ್ಳಲಿದೆ.
4. ಉತ್ತರ ಕನಾಟಕ ಜನರ ಬಹುದಿನಗಳ ಬೇಡಿಕೆ ಕಳಸಾ-ಬಂಡೂರಿ ನೀರಾವರಿ ಯೋಜನೆಗೆ 2023ರ ಬಜೆಟ್ನಲ್ಲಿ 1 ಸಾವಿರ ಕೋಟಿ ರೂಪಾಯಿ ಹಂಚಿಕೆ ಮಾಡಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು.
5. ರಾಜ್ಯದ 4,000 ಕೆರೆಗಳು ಪುನಶ್ಚೇತನ.
6. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮುತುವರ್ಜಿಯಿಂದ 199 ಕಿ.ಮೀ ಉದ್ದದ ರೈಲ್ವೆ ಲೈನ್ ಕಾಮಗಾರಿ ವೇಗ ದುಪ್ಪಟ್ಟಾಗಿದೆ. ಹಾಗೂ ಬೆಳಗಾವಿ-ಕಿತ್ತೂರು- ಧಾರವಾಡ ರೈಲ್ವೇ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳುತ್ತದೆ.
7. ಬೆಂಗಳೂರು-ಮೈಸೂರು ‘ವಂದೇ ಭಾರತ್’ ರೈಲಿನಿಂದ ಪ್ರಯಾಣದ ಸಮಯ ತಗ್ಗಿದೆ. ರೈಲಿನ ವೇಗ ಹೆಚ್ಚಿದೆ.
8. ಬೆಂಗಳೂರು ಉಪನಗರ ರೈಲ್ವೆ ಯೋಜನೆ 40 ವರ್ಷಗಳ ಕಾಂಗ್ರೇಸ್ ಪಕ್ಷದ ನಿರ್ಲಕ್ಷ್ಯವನ್ನು ಕೊನೆಗೊಳಿಸಿ ಪ್ರಧಾನ ಮಂತ್ರಿಗಳು 15,767 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕೈಗೊಂಡಿದ್ದಾರೆ. 40 ತಿಂಗಳಲ್ಲೇ ಯೋಜನೆ ಪೂರ್ಣಗೊಳ್ಳಲಿದೆ.
9. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಈ ಸಾಲಿನ ಬಜೆಟ್ನಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಂದರೆ 7,561 ಕೋಟಿ ರೂಪಾಯಿಗಳನ್ನು ರಾಜ್ಯದ ರೈಲ್ವೆ ಯೋಜನೆಗಳಿಗೆ ಹಂಚಿಕೆ ಮಾಡಿದೆ. ಇದು ಯು.ಪಿ.ಎ ಸರ್ಕಾರ ನೀಡಿದ ಮೊತ್ತಕ್ಕಿಂತ 9 ಪಟ್ಟು ಹೆಚ್ಚು. ಪ್ರಸ್ತುತ ರಾಜ್ಯದಲ್ಲಿ 9 ಹೊಸ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲಾಗಿದೆ.
10. ಬಿಜೆಪಿ ಸರ್ಕಾರದ ನವ ಕರ್ನಾಟಕ ನಿರ್ಮಾಣದ ಗುರಿಗೆ ಕೊಪ್ಪಳದ ಟಾಯ್ ಕ್ಲಸ್ಟರ್ ಸಾಕ್ಷಿ. ಇದರಿಂದಾಗಿ 25,000 ನೇರ ಉದ್ಯೋಗ ಹಾಗೂ 1,00,000 ಪರೋಕ್ಷ ಉದ್ಯೋಗ ಸೃಷ್ಠಿಯಾಗಲಿದೆ.
11. ಡಬಲ್ ಇಂಜಿನ್ ಸರ್ಕಾರವು ಕಳೆದ 8 ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 1.16 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ 4,000 ಕಿ.ಮೀ. ಗೂ ಹೆಚ್ಚು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿದೆ. ಮುಂದಿನ ತಿಂಗಳು ಲೋಕಾರ್ಪಣೆಗೊಳ್ಳಲು ಸಿದ್ದಗೊಂಡಿರುವ ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಹೆದ್ದಾರಿ ಕಾಮಗಾರಿಯ ವೇಗಕ್ಕೆ ಉದಾಹರಣೆ.
12. ಪ್ರಧಾನಿಯವರಿಂದ ಉದ್ಘಾಟನೆಗೊಂಡಿರುವ ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ಒಟ್ಟು 8 ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಹೀಗಾಗಿ ಕರ್ನಾಟಕವು ಅತ್ಯುತ್ತಮ ಸಂಪರ್ಕ ಹೊಂದಿರುವ ರಾಜ್ಯ ಎನ್ನುವ ಹೆಗ್ಗಳಿಕೆ ಗಳಿಸಿದೆ.
13. ಉತ್ತರ ಕನ್ನಡ ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ‘ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
14. ಬಿಜೆಪಿ ಸರ್ಕಾರವು ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿಯನ್ನು ನಿಗದಿತ ಸಮಯಕ್ಕೆ ಪೂರೈಸಿದೆ.
ರೂ.16,328 ಕೋಟಿ ಮೊತ್ತದ 3ನೇ ಹಂತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.
15. ರಾಜ್ಯದಲ್ಲಿರುವ ಲಂಬಾಣಿ ತಾಂಡಾಗಳಿಗೆ ಮತ್ತು ಕುರುಬರ ಹಟ್ಟಿಗಳಿಗೆ ಬಿಜೆಪಿ ಸರ್ಕಾರವು ಕಂದಾಯ ಹಳ್ಳಿಯ ಸ್ಥಾನಮಾನ ನೀಡಿದೆ. ಇದರಿಂದ ಈ ಹಳ್ಳಿಯಲ್ಲಿ ವಾಸಿಸುವ ಜನತೆಗೆ ಸರ್ಕಾರದ ಎಲ್ಲಾ ಪ್ರಯೋಜನಗಳನ್ನು ಪಡೆಯಲು ಅನುಕೂಲವಾಗಿದೆ. ಹಕ್ಕು ಪತ್ರಗಳನ್ನು ವಿತರಿಸಿರುವುದು ವಿಶ್ವದಾಖಲೆಯಾಗಿದೆ.
ಇನ್ನೂ ಹತ್ತು ಹಲವು ಯೋಜನೆಗಳಿಂದ ಸರ್ಕಾರವು ನಾಡಿನ ಕೋಟ್ಯಾಂತರ ಜನರಿಗೆ ಯೋಜನೆಗಳನ್ನು ತಲುಪಿಸಿದೆ. ಇದೇ ಹಾದಿಯಲ್ಲಿ ಮುಂದುವರಿದು ನಾಡಿನ ಜನರ ಜೀವನವನ್ನು ಉತ್ತಮಗೊಳಿಸಲು ಪ್ರಮಾಣಿಕ ಪ್ರಯತ್ನ ಮಾಡಲಿದೆ.
ಎಲ್ಲಾ ವಿಷಯಗಳ ನಾಡಿನ ಜನತೆಗೆ ತಲುಪಿಸಲೆಂದೇ ‘ಪ್ರಗತಿ ರಥ’ ಯಾತ್ರೆಯನ್ನು ಪ್ರಾರಂಭಿಸಲಾಗಿದೆ. ಇದರಿಂದ ನಾಡಿನ ಮೂಲೆ ಮೂಲೆಗೆ ಅಭಿವೃದ್ಧಿಯ ಮಾಹಿತಿ ತಲುಪಲಿದೆ.
ರಾಜ್ಯ ಹಾಗೂ ಪ್ರತಿ ಜಿಲ್ಲೆಗೆ ಸಂಚಾಲಕರು ಮತ್ತು ಇಬ್ಬರು ಸಹ ಸಂಚಾಲಕರನ್ನು ನೇಮಿಸಲಾಗಿದೆ. ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಾಗಿ ಸಂಚಾಲಕ ಮತ್ತು ಸಹ ಸಂಚಾಲಕರನ್ನು ನೇಮಕ ಮಾಡಲಾಗಿದೆ.
ಈ ತಂಡವು ರಾಜ್ಯದಾದ್ಯಂತ ‘ಪ್ರಗತಿ ರಥ’ದ ಸುಗಮ ಯಾತ್ರೆ ಕಾರ್ಯವನ್ನು ಯಶಸ್ವಿಗೊಳಿಸಲಿದೆ ಎಂದರು.
ಮಾ.10ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಟಪಾಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಫಲಾನುಭವಿಗಳ ಜಿಲ್ಲಾ ಮಟ್ಟದ ಬೃಹತ್ ಸಮಾವೇಶವು ರಾಜ್ಯ ಸರಕಾರದ ವತಿಯಿಂದ ನಡೆಯಲಿದೆ ಎಂದು ಅವರು ತಿಳಿಸಿದರು.
ವಿಧಾನಸಭಾ ಚುನಾವಣಾ ಪೂರ್ವ ಸಿದ್ಧತೆಗಳ ಎಲ್ಲ ಕಾರ್ಯ ಚಟುವಟಿಕೆಗಳು ಉಡುಪಿ ಜಿಲ್ಲೆಯಾದ್ಯಂತ ಬಿಜೆಪಿ ಪರ ಪೂರಕ ವಾತಾವರಣವನ್ನು ಇನ್ನಷ್ಟು ಸದೃಢಗೊಳಿಸುವ ಮೂಲಕ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ದೊಡ್ಡ ಅಂತರದ ಗೆಲುವಿಗೆ ಪುಷ್ಠಿ ನೀಡಲಿದೆ ಎಂದು ಕುಯಿಲಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಪ್ರಗತಿ ರಥ ಯಾತ್ರೆಯ ಜಿಲ್ಲಾ ಸಂಚಾಲಕ ಶರತ್ ಶೆಟ್ಟಿ ಉಪ್ಪುಂದ ಹಾಗೂ ಚುನಾವಣಾ ಪ್ರಣಾಳಿಕೆ ಸಲಹಾ ಸಮಿತಿಯ ಜಿಲ್ಲಾ ಸಂಚಾಲಕ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಕಾಪು: ಬೊಮ್ಮರಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಇಂದು ನಡೆಯಿತು. ಬೂತ್ ವಿಜಯ ಅಭಿಯಾನ ಹಾಗೂ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ವರದಿ ಪಡೆದು ಮುಂದೆ ಮಾಡಬೇಕಾದ ಕಾರ್ಯಚಟುವಟಿಕೆಗಳ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಿರಿಯಡ್ಕ ಪಂಚಾಯತ್ ವ್ಯಾಪ್ತಿಯಲ್ಲಿ ತಮ್ಮ ಅವಧಿಯಲ್ಲಿ ಆದ ಸುಮಾರು 19 ಕೋಟಿಯಷ್ಟು ಕಾಮಗಾರಿಗಳ ವಿವರ ನೀಡಿ ಮುಂದೆಯೂ ಗ್ರಾಮದ ಅಭಿವೃದ್ಧಿಗೆ ಬಿಜೆಪಿ ಯನ್ನು ಗೆಲ್ಲಿಸಲು ಕರೆ ನೀಡಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಚುನಾವಣಾ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಲು ಮನೆ ಮನೆ ಭೇಟಿ ಸಂದರ್ಭದಲ್ಲಿ ನೀಡಬೇಕಾದ ಮಾಹಿತಿ ಬಗ್ಗೆ ಮಾಹಿತಿ ನೀಡಿದರು. ಕಾಪು ಚುನಾವಣಾ ಫ್ರಭಾರಿಗಳಾದ ಸುಲೋಚನಾ ಭಟ್ ಮಾತನಾಡಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬಿದರು. ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಶಕ್ತಿಕೇಂದ್ರ ಪ್ರಮುಖರಾದ ವಿನಯ್ ಪೂಜಾರಿ ಹಾಗೂ ದಯಾನಂದ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ , ಜಿಲ್ಲಾ ಕಾರ್ಯದರ್ಶಿ ಸುನೀತಾ ನಾಯ್ಕ್, ಮಂಡಲ ಉಪಾಧ್ಯಕ್ಷರಾದ ಸಂಧ್ಯಾ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.