ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ

News by: ಜನತಾಲೋಕವಾಣಿನ್ಯೂಸ್



ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ.

ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ.

ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯೊಂದಿಗೆ ಕಾರ್ಯಕ್ರಮ ಸಮಾಪನಗೊಳ್ಳಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ‌ಬಿಜೆಪಿ ತಿರುಗೇಟು

News by: ಜನತಾಲೋಕವಾಣಿನ್ಯೂಸ್

ಬೆಂಗಳೂರು: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿ, ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರತ್ಯುತ್ತರ ನೀಡಿದೆ.

ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆ ಹೇಳಿಕೊಳ್ಳುವ ಸಿದ್ದರಾಮಯ್ಯನವರೇ, ಏರ್ಪೋಟ್’ಗೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ತೀರ್ಮಾನ ಮಾಡಿದ್ದು ಬಿಜೆಪಿ ಸರ್ಕಾರ. ಯಡಿಯೂರಪ್ಪನವರ ನೇತೃತ್ವದ‌ ಬಿಜೆಪಿ ಸರ್ಕಾರ ಫೆಬ್ರವರಿ 27, 2009 ರಲ್ಲಿಯೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅಲ್ಲದೇ 2011 ಮಾರ್ಚ್ 4 ರಂದು ಸದನದಲ್ಲಿ ಘೋಷಣೆ ಮಾಡಿ, ಮಾರ್ಚ್ 7 ರಂದು ರಾಜ್ಯ ಸಚಿವ ಸಂಪುಟದಲ್ಲಿ ಆದೇಶ ಮಾಡಿತ್ತು.

ಆದರೆ, ಕೆಂಪೇಗೌಡರ ಹೆಸರನ್ನು ಏರ್ಪೋಟ್’ಗೆ ಇಡಬೇಕೊ? ಬೇಡವೊ ಎಂದು ತೀರ್ಮಾನ ಮಾಡಲು ಅಂದಿನ ಯುಪಿ ಸರ್ಕಾರ 4 ವರ್ಷ ತೆಗೆದುಕೊಂಡಿತ್ತು.

ಇದೀಗ ಟಿವಿ ಕ್ಯಾಮರಾ ಮುಂದೆ ಬಂದು ಒಳ್ಳೆಯದಕ್ಕೆಲ್ಲಾ ನಾನೇ ಕಾರಣ ಎನ್ನುವ ಸಿದ್ದರಾಮಯ್ಯರೇ, ಬಿಜೆಪಿ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ನಾಲ್ಕು ವರ್ಷ ನಿಮ್ಮ ಯುಪಿಎ ಸರ್ಕಾರ ಕಾಯಿಸಿದ್ದು ಯಾಕೆ ?
ರಾಜ್ಯದ ಜನತೆಗೆ ಉತ್ತರ ಹೇಳಿ. ಉತ್ತರ ಇದೆಯೆ ಸುಳ್ಳುರಾಮಯ್ಯ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್

ಉಡುಪಿ: ಅಶ್ಲೀಲ ಮಾನಸಿಕತೆಯ ಸತೀಶ್ ಜಾರಕಿಹೊಳಿ ಹೇಳಿಕೆಯು ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿಯನ್ನು ತಿಳಿಸುತ್ತದೆ. ಅಂದು ನೆಹರೂ ತನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಹಿಂದುಗಳ ಭಾವನೆಗೆ ಧಕ್ಕೆ ಉಂಟುಮಾಡುತ್ತಾ ಬಂದಿದೆ. ಕಾಶ್ಮೀರ, ರಾಮಸೇತು, ರಾಮ ಮಂದಿರ ವಿಚಾರಗಳಲ್ಲೂ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ದ ದೂರು ದಾಖಲಿಸಲಾಗುವುದು. ಹಿಂದೂ ಪದ ಅಶ್ಲೀಲ ಅರ್ಥವನ್ನು ಸೂಚಿಸುತ್ತದೆ ಎಂದಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಪಕ್ಷ ದೇಶದ ಹಿಂದೂಗಳ ಕ್ಷಮೆ ಕೋರಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದರು.



ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರ ಹಿಂದೂ ವಿರೋಧಿ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬುಧವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಬೈಬಲ್ ನೆರೆಹೊರೆಯವರನ್ನು ಪ್ರೀತಿಸಿ ಎಂದು ಹೇಳಿದರೆ, ಹಿಂದೂ ನೆರೆಮನೆಯವರಲ್ಲಿ ನಿನ್ನನ್ನು ಕಾಣು ಎನ್ನುತ್ತದೆ. ಇಂತಹ ಶ್ರೇಷ್ಠ ಸನಾತನ ಧರ್ಮ ಹಿಂದು. ಭಾರತ 105 ಕೋಟಿ ಹಿಂದೂಗಳಿಗೆ ಸತೀಶ್ ಜಾರಕಿಹೊಳಿ ಅವಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನದಿಂದ ಸತೀಶ್ ಜಾರಕಿಹೊಳಿಯನ್ನು ತಕ್ಷಣ ವಜಾ ಮಾಡಬೇಕೆಂದು ಆಗ್ರಹಿಸಿದರು.

ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ 400 ಲೋಕಸಭಾ ಸದಸ್ಯರು ಕಾಂಗ್ರೆಸ್ ಪಕ್ಷದವರಿದ್ದರು. ಆದರೆ ಇಂದಿನ ಕಾಂಗ್ರೆಸ್ ನ ದುಸ್ಥಿತಿಯನ್ನು ದೇಶದ ಜನರೇ ಗಮನಿಸಿದ್ದಾರೆ. ಇದಕ್ಕೆ ಕಾರಣ ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಗಳು. ಕಾಂಗ್ರೆಸ್ ಗೆ ಮುಸ್ಲಿಂ ಮತವನ್ನು ಟೀಕೆ ಮಾಡುವ ಧೈರ್ಯವಿದೆಯಾ..? ಟೀಕೆ ಮಾಡಿದರೇ ಅವರು ನಿಮ್ಮ ಕತ್ತನ್ನು ಕತ್ತರಿಸುತ್ತಾರೆ ಎಂಬ ಭಯ ನಿಮಗಿದೆ. ಕಾಂಗ್ರೆಸ್ ವರಿಷ್ಠರು ಎನಿಸಿಕೊಂಡವರೆಲ್ಲಾ ಮೋಹನ್ ದಾಸ್ ಕರಮಚಂದ್ ಗಾಂಧಿಯವರ ಕುಟುಂಬಸ್ಥರಲ್ಲ. ಎಲ್ಲರೂ ನಕಲಿ ಗಾಂಧಿಗಳು ಎಂದು ಕಿಡಿಕಾರಿದರು.

ಪ್ರತಿ ಬಾರಿ ಹಿಂದೂ ಧರ್ಮಕ್ಕೆ ಮಾಡುವ ಅವಮಾನವನ್ನು ಹಿಂದೂ ಸಹಿಸಲಾರ. ಸತೀಶ್ ಜಾರಕಿಹೊಳಿಯ ಹೇಳಿಕೆಗೆ ಕಾಂಗ್ರೆಸ್ ನೈತಿಕ ಹೊಣೆಯನ್ನು ಹೊತ್ತು, ಸಮಸ್ತ ಹಿಂದುಗಳ ಕ್ಷಮೆಯಾಚಿಸಬೇಕು. ಈ ಹೇಳಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ತಾರ್ಕಿಕ ಅಂತ್ಯವಾಗುವವರೆಗೂ ಹೋರಾಟ ಮಾಡುತ್ತೇವೆ ಎಂದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸತೀಶ್ ಜಾರಕಿಹೊಳಿಯ ಅಶ್ಲೀಲ ಮನಸ್ಥಿತಿಯನ್ನು ಖಂಡಿಸಿದರು.

ಹಿಂದೂ ವಿರೋಧಿ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಯತ್ನಿಸುತ್ತಿರುವ ಸತೀಶ್ ಜಾರಕಿಹೊಳಿ ಯವರನ್ನು ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಾಜಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ರಾಜ್ಯ ಎಸ್.ಸಿ. ಮೋರ್ಚಾ ಪ್ರ.ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಮಾಜಿ ನಗರಸಭೆ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಪ್ರಮುಖರಾದ ಸತ್ಯಾನಂದ ನಾಯಕ್, ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಜಗದೀಶ್ ಆಚಾರ್ಯ ಹಾಗೂ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ನಗರಸಭೆ ಸದಸ್ಯರು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ

NEWS By: ಜನತಾಲೋಕವಾಣಿನ್ಯೂಸ್



ಉಡುಪಿ: ಭಾರತೀಯ ಜನತಾ ಪಾರ್ಟಿಗೆ ಜನತೆ ದೇಶ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಜನತೆಯ ನಿರೀಕ್ಷೆ ಈಡೇರಿಸುವಂತಹ ಪಕ್ಷ ಬಿಜೆಪಿ ಎಂಬ ವಿಶ್ವಾಸ ಜನತೆಯಲ್ಲಿದೆ. ಬಿಜೆಪಿ ಸರಕಾರದ ಆಡಳಿತಕ್ಕೆ ಬಂದಾಗ ಎಲ್ಲೆಡೆ ಅಭಿವೃದ್ಧಿಯ ಪರ್ವಕಾಲವನ್ನು ಜನತೆ ಕಂಡಿದ್ದಾರೆ. ಈ ನೆಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು.

ಅವರು ನ.5ರಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ನೇತೃತ್ವದ ಸರಕಾರದ ಅಭಿವೃದ್ಧಿ ಪರ ಉತ್ತಮ ಆಡಳಿತ ಮುಂದುವರಿದರೆ ತಮಗೆ ಭವಿಷ್ಯವಿಲ್ಲ ಎಂಬುದನ್ನು ಅರಿತ ವಿರೋಧ ಪಕ್ಷಗಳು ಹತಾಶೆಯಿಂದ ವಿವಿಧ ರೀತಿಯ ಟೀಕೆಗಳನ್ನು ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಬಹಳ ಎಚ್ಚರಿಕೆಯಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸರಕಾರದ ಜನಪರ ಯೋಜನೆಗಳನ್ನು ಜನತೆಗೆ ತಲುಪಿಸುವ ಮೂಲಕ ಮುಂದಿನ ಚುನಾವಣೆಗಳನ್ನು ಯಶಸ್ವಿಯಾಗಿ ಗೆಲ್ಲುವ ಹೊಣೆಗಾರಿಕೆಯೊಂದಿಗೆ ಕಾರ್ಯಪ್ರವೃತ್ತರಾಗಬೇಕಿದೆ ಎಂದರು.

ಜಿಲ್ಲಾ ಮಟ್ಟದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವುದರ ಮೂಲಕ ಯಾವುದೇ ಸಂದರ್ಭದಲ್ಲಿ ಚುನಾವಣೆಯನ್ನು ಎದುರಿಸಿ ವಿಜಯದತ್ತ ಹೆಜ್ಜೆ ಹಾಕುವ ಸಂಘಟನಾ ಶಕ್ತಿ ಇರುವ ಪಕ್ಷ ಬಿಜೆಪಿ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳ ಪ್ರಚಾರದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಉದಾತ್ತ ಯೋಜನೆಗಳನ್ನು ನೀಡಿದೆ ಎಂಬ ಭಾವನೆ ಜನತೆಯಲ್ಲಿ ಮೂಡಲು ಸಾಧ್ಯ. ಇಂತಹ ಜನ ವಿಶ್ವಾಸವನ್ನು ಪಡೆದುಕೊಂಡಾಗ ಬಿಜೆಪಿ ಗೆಲುವು ಶತಸಿದ್ಧ. ವಿರೋಧಿಗಳ ಅಪಪ್ರಚಾರದ ಹೊರತಾಗಿಯೂ ಬಿಜೆಪಿ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ನಿಶ್ಚಳ ಬಹುಮತದೊಂದಿಗೆ ಉತ್ತಮ ಆಡಳಿತವನ್ನು ನೀಡಲಿದೆ ಎಂದು ಅಂಗಾರ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಸ್ತಾವಿಕವಾಗಿ ಮಾತನಾಡಿ, ರಾಜ್ಯ ಬಿಜೆಪಿ ನೀಡಿರುವ ಪಕ್ಷದ ಎಲ್ಲಾ ಸಂಘಟನಾತ್ಮಕ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ‘ಬೂತ್ ಸಶಸ್ತೀಕರಣ’ ಹಾಗೂ ‘ಸೇವಾ ಪಾಕ್ಷಿಕ’ ಅಭಿಯಾನ ಜಿಲ್ಲೆಯಲ್ಲಿ ಪರಿಣಾಮಕಾರಿ ಯಶಸ್ಸನ್ನು ಕಂಡಿದೆ. ದೇಶದಲ್ಲೇ ವಿನೂತನ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲ ಮಂಡಲಗಳ ವ್ಯಾಪ್ತಿಯಲ್ಲಿ ಶಕ್ತಿ ಕೇಂದ್ರಗಳ ಸಭೆಯನ್ನು ಆಯೋಜಿಸಲಾಗುತ್ತಿದೆ. ಜಿಲ್ಲಾ ಪದಾಧಿಕಾರಿಗಳು ಜಿಲ್ಲಾ ವ್ಯಾಪ್ತಿಯ ಎಲ್ಲಾ 1,111 ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಫಲಾನುಭವಿಗಳ ಸಭೆಗಳನ್ನು ನಡೆಸಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಹಲವಾರು ಜನಪರ ಯೋಜನೆಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷದ ಕೆಲಸ ಕಾರ್ಯಗಳಿಗೆ ವೇಗ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಲು ಕೈಜೋಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಕರ್ನಾಟಕ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಹಾಗೂ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಇನ್ನಿತರ ಅಪೇಕ್ಷಿತರು ಉಪಸ್ಥಿತರಿದ್ದರು.

ಪಕ್ಷದ ಅಗಲಿದ ಚೇತನಗಳಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸಂತಾಪ ಸೂಚಿಸಿದರು.

ಜಿಲ್ಲಾ ಉಪಾಧ್ಯಕ್ಷರುಗಳಾದ ಪೆರ್ಣಂಕಿಲ ಶ್ರೀಶ ನಾಯಕ್ ಸ್ವಾಗತಿಸಿ, ಗೀತಾಂಜಲಿ ಎಮ್. ಸುವರ್ಣ ವಂದಿಸಿ, ಕಿಶೋರ್ ಕುಮಾರ್ ಕುಂದಾಪುರ ಕಾರ್ಯಕ್ರಮ ನಿರೂಪಿಸಿದರು.

ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ

News By: ಜನತಾಲೋಕವಾಣಿನ್ಯೂಸ್



ಉಡುಪಿ: ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ದನಗಳ್ಳರನ್ನು ಬಿಜೆಪಿ ಶಾಸಕ ಲಾಲಾಜಿ ಮೆಂಡನ್ ರಕ್ಷಿಸಿದ್ದಾರೆ; ಶಾಸಕರೇ ಪೊಲೀಸ್ ಠಾಣೆಗೆ ಕರೆ ಮಾಡಿ ದನಗಳನ್ನು ಬಿಡುಗಡೆಗೊಳಿಸಿದ್ದಾರೆ ಎಂಬ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಆರೋಪಕ್ಕೆ ಕುಯಿಲಾಡಿ ತಿರುಗೇಟು ನೀಡಿದರು.

ಚುನಾವಣೆ ಸನಿಹವಾಗುತ್ತಿರುವುದರಿಂದ ಯಾವುದೇ ವಿಷಯಗಳಿಲ್ಲದೆ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡುವುದೇ ಸೊರಕೆಯವರ ನಿತ್ಯ ಕಾಯಕವಾಗಿದೆ. ಗಲ್ಲಿ ಗಲ್ಲಿಯಲ್ಲಿ ನಿಂತು ಆರೋಪ ಮಾಡುತ್ತಾರೆ. ಕಾಪು ಪುರಸಭೆಯಲ್ಲಿ ಎಸ್‍ಡಿಪಿಐ ಮೂರು ಸ್ಥಾನ ಗೆದ್ದಿರುವುದು ಸೊರಕೆ ನಿದ್ದೆಗೆಡಿಸಿದೆ. ಬಿಜೆಪಿ ಎಸ್‍ಡಿಪಿಐ ಜೊತೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದಿರುವ ಸೊರಕೆ ಹೇಳಿಕೆ ಹಾಸ್ಯಾಸ್ಪದ. ವಾಸ್ತವದಲ್ಲಿ ಎಸ್‍ಡಿಪಿಐ ಸಿಎಎ ವಿರುದ್ಧ ನಡೆಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸೊರಕೆ ಹಾಗೂ ಎಸ್‍ಡಿಪಿಐ ನಡುವಿನ ಗಾಢ ಸಂಬಂಧವೇನು ಎಂಬುದನ್ನು ಉಡುಪಿ ಜಿಲ್ಲೆಯ ಜನತೆ ಚೆನ್ನಾಗಿಯೇ ಅರಿತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

ಕೇವಲ ರಾಜಕೀಯಕ್ಕೋಸ್ಕರವೇ ರಾಜಕೀಯ ಮಾಡಬೇಡಿ. ತಾನು ಕಾಪು ಕ್ಷೇತ್ರದಲ್ಲಿ ಗೆಲ್ಲುವುದಿಲ್ಲ ಎಂದು ಸೊರಕೆಗೆ ಖಾತರಿಯಾಗಿದೆ. ಲಾಲಾಜಿ ಮೆಂಡನ್ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ ಅನ್ನುವುದಕ್ಕೆ ಸೊರಕೆ ಬಳಿ ದಾಖಲೆ ಇದೆಯೆ? ಪೊಲೀಸರ ಹೆಸರಲ್ಲಿ ಬೇಕಾದರೂ ಸೊರಕೆಯವರು ಫೋನ್ ಮಾಡಿಸುತ್ತಾರೆ. ಬಜರಂಗದಳ ಕಾರ್ಯಕರ್ತ ಅಂತ ಕಾಂಗ್ರೆಸ್ ನವರಿಂದಲೂ ಫೋನ್ ಮಾಡಿಸುತ್ತಾರೆ. ಅದಕ್ಕೆ ನಮ್ಮ ಬಳಿ ದಾಖಲೆಯೂ ಇದೆ. ಸೊರಕೆ ಸತ್ಯವಂತರಾಗಿದ್ದರೆ ಪುತ್ತೂರಿನಿಂದ ಕಾಪುವಿಗೆ ಬರಬೇಕಾಗಿರಲಿಲ್ಲ. ಹಿಂದುಗಳ ಓಟಿನ ಆಸೆಗೆ ನಾಟಕೀಯವಾಗಿ ಎಸ್‌ಡಿಪಿಐಯನ್ನು ದೂರುತ್ತಿದ್ದಾರೆ. ಹಿಜಾಬ್ ವಿಚಾರದಲ್ಲಿ ನೀವು ಯಾವ ನಿಲುವು ತೆಗೆದುಕೊಂಡಿದ್ದೀರಿ? ಹಿಜಾಬ್ ಬಗ್ಗೆ ಉಡುಪಿ ಕಾಂಗ್ರೆಸ್ಸಿಗೆ ಕನಿಷ್ಠ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುಯಿಲಾಡಿ ತಿಳಿಸಿದರು.

ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ*

ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ದನಗಳ್ಳರನ್ನು ಬಿಜೆಪಿ ಶಾಸಕ ಲಾಲಾಜಿ ಮೆಂಡನ್ ರಕ್ಷಿಸಿದ್ದಾರೆ; ಶಾಸಕರೇ ಪೊಲೀಸ್ ಠಾಣೆಗೆ ಕರೆ ಮಾಡಿ ದನಗಳನ್ನು ಬಿಡುಗಡೆಗೊಳಿಸಿದ್ದಾರೆ ಎಂಬ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಆರೋಪಕ್ಕೆ ಕುಯಿಲಾಡಿ ತಿರುಗೇಟು ನೀಡಿದರು.

ಚುನಾವಣೆ ಸನಿಹವಾಗುತ್ತಿರುವುದರಿಂದ ಯಾವುದೇ ವಿಷಯಗಳಿಲ್ಲದೆ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡುವುದೇ ಸೊರಕೆಯವರ ನಿತ್ಯ ಕಾಯಕವಾಗಿದೆ. ಗಲ್ಲಿ ಗಲ್ಲಿಯಲ್ಲಿ ನಿಂತು ಆರೋಪ ಮಾಡುತ್ತಾರೆ. ಕಾಪು ಪುರಸಭೆಯಲ್ಲಿ ಎಸ್‍ಡಿಪಿಐ ಮೂರು ಸ್ಥಾನ ಗೆದ್ದಿರುವುದು ಸೊರಕೆ ನಿದ್ದೆಗೆಡಿಸಿದೆ. ಬಿಜೆಪಿ ಎಸ್‍ಡಿಪಿಐ ಜೊತೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದಿರುವ ಸೊರಕೆ ಹೇಳಿಕೆ ಹಾಸ್ಯಾಸ್ಪದ. ವಾಸ್ತವದಲ್ಲಿ ಎಸ್‍ಡಿಪಿಐ ಸಿಎಎ ವಿರುದ್ಧ ನಡೆಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸೊರಕೆ ಹಾಗೂ ಎಸ್‍ಡಿಪಿಐ ನಡುವಿನ ಗಾಢ ಸಂಬಂಧವೇನು ಎಂಬುದನ್ನು ಉಡುಪಿ ಜಿಲ್ಲೆಯ ಜನತೆ ಚೆನ್ನಾಗಿಯೇ ಅರಿತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.

ಕೇವಲ ರಾಜಕೀಯಕ್ಕೋಸ್ಕರವೇ ರಾಜಕೀಯ ಮಾಡಬೇಡಿ. ತಾನು ಕಾಪು ಕ್ಷೇತ್ರದಲ್ಲಿ ಗೆಲ್ಲುವುದಿಲ್ಲ ಎಂದು ಸೊರಕೆಗೆ ಖಾತರಿಯಾಗಿದೆ. ಲಾಲಾಜಿ ಮೆಂಡನ್ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ ಅನ್ನುವುದಕ್ಕೆ ಸೊರಕೆ ಬಳಿ ದಾಖಲೆ ಇದೆಯೆ? ಪೊಲೀಸರ ಹೆಸರಲ್ಲಿ ಬೇಕಾದರೂ ಸೊರಕೆಯವರು ಫೋನ್ ಮಾಡಿಸುತ್ತಾರೆ. ಬಜರಂಗದಳ ಕಾರ್ಯಕರ್ತ ಅಂತ ಕಾಂಗ್ರೆಸ್ ನವರಿಂದಲೂ ಫೋನ್ ಮಾಡಿಸುತ್ತಾರೆ. ಅದಕ್ಕೆ ನಮ್ಮ ಬಳಿ ದಾಖಲೆಯೂ ಇದೆ. ಸೊರಕೆ ಸತ್ಯವಂತರಾಗಿದ್ದರೆ ಪುತ್ತೂರಿನಿಂದ ಕಾಪುವಿಗೆ ಬರಬೇಕಾಗಿರಲಿಲ್ಲ. ಹಿಂದುಗಳ ಓಟಿನ ಆಸೆಗೆ ನಾಟಕೀಯವಾಗಿ ಎಸ್‌ಡಿಪಿಐಯನ್ನು ದೂರುತ್ತಿದ್ದಾರೆ. ಹಿಜಾಬ್ ವಿಚಾರದಲ್ಲಿ ನೀವು ಯಾವ ನಿಲುವು ತೆಗೆದುಕೊಂಡಿದ್ದೀರಿ? ಹಿಜಾಬ್ ಬಗ್ಗೆ ಉಡುಪಿ ಕಾಂಗ್ರೆಸ್ಸಿಗೆ ಕನಿಷ್ಠ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುಯಿಲಾಡಿ ತಿಳಿಸಿದರು.

ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್

News By: ಜನತಾಲೋಕವಾಣಿನ್ಯೂಸ್



ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು.

ಹಾಸನದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಸೆಂಬ್ಲಿ ಚುನಾವಣೆ ಬಳಿಕ ಸಿದ್ರಾಮಣ್ಣನ ಕುಟುಂಬ, ಬಂಡೆಯ ಕುಟುಂಬ ಮತ್ತು ಗೌಡರ ಕುಟುಂಬ ಸೇರಿ 3 ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎಂದು ತಿಳಿಸಿದರು.

ಹಾಸನದ ಗೌಡರು ದೆಹಲಿ ಆಳಿದರು, ರಾಜ್ಯವನ್ನೂ ಆಳಿದರು; ಆದರೆ ಏನು ಮಾಡೋಣ ಕೆಂಪೇಗೌಡರನ್ನು ಮರೆತರು. ಬಿಜೆಪಿ, ಕೆಂಪೇಗೌಡರ ವಿಗ್ರಹವನ್ನು ಸ್ಥಾಪಿಸಿ ಅವರಿಗೆ ಗೌರವ ಕೊಡುವ ಕಾರ್ಯ ಮಾಡುತ್ತಿದೆ ಎಂದು ವಿವರಿಸಿದರು.

ಹಾಸನದಲ್ಲಿ ಕುಟುಂಬವಾದಿಗಳಿರಬೇಕೇ ಅಥವಾ ರಾಷ್ಟ್ರೀಯವಾದಿಗಳಿರಬೇಕೇ ಎಂಬ ಚರ್ಚೆಗಳು ಆರಂಭವಾಗಿವೆ. ಕುಟುಂಬ ರಾಜಕಾರಣ ಮಾಡುತ್ತ, ಕುಟುಂಬ ಬೆಳೆಸುತ್ತ, ಕುಟುಂಬದ ಎಲ್ಲರಿಗೆ ಅವಕಾಶ ಕೊಡುತ್ತ ಹಾಗೂ ಕೌಟುಂಬಿಕ ಸ್ಥಾನಮಾನದತ್ತ ಗಮನ ಕೊಡುವ ಪಾರ್ಟಿ ಇಲ್ಲಿದೆ. ಇವತ್ತು ಕಾಂಗ್ರೆಸ್‍ನ ಹಲವು ಪ್ರಮುಖರು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಹಲವು ಪ್ರಮುಖರು, ಜೆಡಿಎಸ್‍ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆಯೊಳಗೆ ಅವರೆಲ್ಲರೂ ಬಿಜೆಪಿ ಸೇರಲಿದ್ದಾರೆ ಹಾಗೂ ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ ಎಂದು ವಿವರಿಸಿದರು.
ಜನನಾಯಕರಾದ ಬಿ.ಎಸ್. ಯಡಿಯೂರಪ್ಪ, ಖಳ ನಾಯಕರಾದ ಸಿದ್ರಾಮಣ್ಣ ಮತ್ತು ಕಣ್ಣೀರ ನಾಯಕ ಕುಮಾರಸ್ವಾಮಿ ಪೈಕಿ ಯಾರು ನಿಮಗೆ ಬೇಕು ಎಂದು ಜನರನ್ನು ಪ್ರಶ್ನಿಸಿದರು. ಒಂದು ಕಾಲಘಟ್ಟದಲ್ಲಿ ಈ ಜಿಲ್ಲೆಯಲ್ಲಿ ನಮ್ಮ ಪಕ್ಷವು ಬಿ.ಬಿ.ಶಿವಪ್ಪ ಅವರ ನೇತೃತ್ವದಲ್ಲಿ 4 ಸ್ಥಾನಗಳನ್ನು ಪಡೆದಿತ್ತು. ಮುಂದಿನ ಚುನಾವಣೆಯಲ್ಲಿ 5ಕ್ಕಿಂತ ಹೆಚ್ಚು ಸ್ಥಾನ ಪಡೆದು ಜನತಾದಳ ಮುಕ್ತ ಜಿಲ್ಲೆಯಾಗಿ ಪರಿವರ್ತಿಸುವ ವಿಶ್ವಾಸವಿದೆ ಎಂದರು.

ಕುಟುಂಬವಾದ, ಪರಿವಾರವಾದ ಹಾಗೂ ಏಕವ್ಯಕ್ತಿಯ ರಾಜಕಾರಣ ಮುಗಿದು ಹೋಗಿದೆ. ಈ ದೇಶದಲ್ಲಿ ಇನ್ನು ರಾಷ್ಟ್ರೀಯವಾದದ ರಾಜಕಾರಣಕ್ಕೆ ಅವಕಾಶ ಸಿಗಲಿದೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಅಭಿವೃದ್ಧಿಶೀಲ ದೇಶವಾಗಿ ಭಾರತವನ್ನು ಪರಿವರ್ತಿಸಲಾಗುತ್ತಿದೆ. ಈ ದೇಶದಲ್ಲಿ ಪರಿವರ್ತನೆ ಆರಂಭವಾಗಿದೆ; ಜಗತ್ತಿನ ಎಲ್ಲ ದೇಶದವರೂ ನಮ್ಮತ್ತ ನೋಡುತ್ತಿದ್ದಾರೆ ಎಂದು ತಿಳಿಸಿದರು.

60 ವರ್ಷಗಳ ಕಾಲ ದೇಶದ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷವು ಈ ದೇಶವನ್ನು ಸಾಲಗಾರರ ರಾಷ್ಟ್ರವಾಗಿ ಮಾಡಿ ತಲೆ ತಗ್ಗಿಸುವ ದೇಶವಾಗಿ ಪರಿವರ್ತಿಸಿತ್ತು. ಪರಿವಾರವಾದ, ಭ್ರಷ್ಟಾಚಾರ, ದೇಶ ವಿಭಜನೆ ಮತ್ತು ಭಯೋತ್ಪಾದನೆಯು ಕಾಂಗ್ರೆಸ್ ಪಕ್ಷದ ಕೊಡುಗೆಗಳು ಎಂದು ಅವರು ಟೀಕಿಸಿದರು.

ಭಾರತವನ್ನು ಅಮೇರಿಕದ ಅಧ್ಯಕ್ಷರು ಮೆಚ್ಚಿಕೊಳ್ಳುತ್ತಾರೆ. ಶ್ರೀಲಂಕಾಕ್ಕೆ ನೆರವಿತ್ತ ದೇಶ ಭಾರತ. ಜಗತ್ತನ್ನು ಒಂದು ಮಾಡಿ ಯುದ್ಧ ನಿಲ್ಲಿಸುವ ತಾಕತ್ತಿರುವ ದೇಶವಾಗಿ ಭಾರತ ಹೊರಹೊಮ್ಮಿದೆ; ಅಂಥ ಶ್ರೇಷ್ಠ ನಾಯಕತ್ವ ನರೇಂದ್ರ ಮೋದಿ ಅವರದು ಎಂದು ವಿವರಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಜಮ್ಮು ಕಾಶ್ಮೀರ, ಹುಬ್ಬಳ್ಳಿಯಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗದ ಪರಿಸ್ಥಿತಿ ಇತ್ತು. ಈಗ ಪರಿವರ್ತನೆ ಆಗಿದೆ. ತಿರಂಗ ಧ್ವಜಕ್ಕೆ ಜಗತ್ತಿನೆಲ್ಲೆಡೆ ಗೌರವ ಸಿಗುತ್ತಿದೆ ಎಂದು ತಿಳಿಸಿದರು. ವಿಶ್ವಗುರು ಭಾರತ ನಿರ್ಮಾಣವಾಗುತ್ತಿದೆ ಎಂದರು.
ಮುಂದಿನ ಚುನಾವಣೆ ಬಳಿಕ ಸಿದ್ರಾಮಣ್ಣ ಒಳಗಿರ್ತಾರೋ ಹೊರಗಿರ್ತಾರೋ ಗೊತ್ತಿಲ್ಲ. ಒಳಗಿದ್ದರೂ ಎಲ್ಲಿರ್ತಾರೋ ತಿಳಿದಿಲ್ಲ ಎಂದ ಅವರು, ವಿಭಜನಾವಾದ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಟೀಕಿಸಿದರು. ಬಿಜೆಪಿ, ಭಾರತ್ ಜೋಡೋ ಮಾಡಿದ ಪಕ್ಷ ಎಂದು ತಿಳಿಸಿದರು.

ಗರೀಬಿ ಹಠಾವೋ ಘೋಷಣೆಯಡಿ ಗಾಂಧಿ- ಖರ್ಗೆ- ಸಿದ್ರಾಮಣ್ಣ- ಡಿಕೆಶಿ ಕುಟುಂಬಗಳ ಗರೀಬಿ ದೂರವಾಯಿತು. ಜನ್ ಧನ್ ಸೇರಿದಂತೆ ಹಲವು ಜನಪರ ಯೋಜನೆಗಳ ಮೂಲಕ ನೈಜ ಗರೀಬಿ ಹಠಾವೋ ಮಾಡಿದವರಿದ್ದರೆ ಅದು ಮೋದಿಜಿ ಎಂದು ವಿವರ ನೀಡಿದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಮ್ ಗೌಡ, ಜಿಲ್ಲಾ ಅಧ್ಯಕ್ಷ ಹೆಚ್.ಕೆ. ಸುರೇಶ್, ನಗರಸಭಾ ಅಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ಮತ್ತು ಮಂಡಲ ಮುಖಂಡರು ಉಪಸ್ಥಿತರಿದ್ದರು.

ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್


News By: ಜನತಾಲೋಕವಾಣಿನ್ಯೂಸ್

ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ, ನ.3: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ‘ಫಲಾನುಭವಿಗಳ ಸಮಾವೇಶ’ದಲ್ಲಿ 25 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಹೇಳಿದರು.

ಅವರು ಗುರುವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಈ ಎರಡೂ ಕಾರ್ಯಕ್ರಮಗಳಲ್ಲೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಬೂತ್ ಮಟ್ಟದಲ್ಲೂ ಸಭೆ ನಡೆಸಲಾಗಿದ್ದು ಎಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು.

ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

NEWS BY: ಜನತಾಲೋಕವಾಣಿನ್ಯೂಸ್

ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಬಸ್ ನಿಲ್ದಾಣದ ಬಳಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬದ್ಧತೆಯಿಂದ ಶ್ರಮವಹಿಸಿ, ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್ ಹೇಳಿದರು.

ಅವರು ನ.3ರಂದು ಬಿಜೆಪಿ ಕಾಪು ಮಂಡಲ ಕಚೇರಿಯಲ್ಲಿ ನಡೆದ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾರ್ಗದರ್ಶನದಲ್ಲಿ ವಿವಿಧ ಜವಾಬ್ದಾರಿಗಳ ನಿರ್ವಹಣೆಯ ಹೊಣೆಯನ್ನು ನಿಗದಿತ ತಂಡಗಳಿಗೆ ವಹಿಸಲಾಗಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಅತ್ಯಂತ ಕ್ರಿಯಾಶೀಲತೆಯಿಂದ ಕರ್ತವ್ಯದಲ್ಲಿ ತೊಡಗಿಸಿಕೊಂಡು ಜನಸಂಕಲ್ಪ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾಪು ಮಂಡಲ ಪ್ರಧಾನ‌ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ ಹಾಗೂ ಕಾಪು ಮಂಡಲ ಪದಾಧಿಕಾರಿಗಳು ಮತ್ತು ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Design a site like this with WordPress.com
Get started