ಉಗ್ರ ಸಂಘಟನೆಗಳ ನಿಷೇಧ ಭಾರತದ ದೊಡ್ಡ‌ ಗೆಲುವು: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ

News by: ಜನತಾಲೋಕವಾಣಿನ್ಯೂಸ್

ಉಡುಪಿ: ದೇಶದ ಆಂತರಿಕ ಭದ್ರತೆ, ಶಾಂತಿ ಸುವ್ಯವಸ್ಥೆಗೆ ಕಂಟಕವಾಗಿದ್ದ ಉಗ್ರ ಸಂಘಟನೆಗಳ ನಿಷೇಧ‌ ಭಾರತದ ದೊಡ್ಡ ಗೆಲುವು ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಪರಿಚಯ ವರ್ಗದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅನೇಕ ಮುಸಲ್ಮಾನರು ಕೂಡಾ ಪಿಎಫ್ಐ ನಂತಹ ಉಗ್ರಗಾಮಿ ಸಂಘಟನೆಗಳ ದೇಶ ವಿರೋಧಿ ಸಾಮಾಜಿಕ ಪಿಡುಗನ್ನು ನಿವಾರಿಸಬೇಕೆನ್ನುವ ಆಶಯ ಹೊಂದಿದ್ದರು.‌ ಇಂದು ಇಡೀ ಸಮಾಜ ಒಂದಾಗಿದೆ ಎನ್ನುವುದಕ್ಕೆ ಇಂತಹ ನಿಷೇಧ ತಾಜಾ ಉದಾಹರಣೆ ಎಂದರು.

ಚುನಾವಣೆ ಗೆಲ್ಲುವ ಜೊತೆಗೆ ಸಾಮಾಜಿಕ ಪರಿವರ್ತನೆ ಕಾರ್ಯಕರ್ತರ ಉದ್ದೇಶವಾಗಿರಬೇಕು. 2023ರ ಚುನಾವಣೆಗೆ ಹೋಗಬೇಕೆಂದರೆ 2004ರ ಚುನಾವಣೆಯನ್ನು ನೆನಪಿಸಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯ ಸರ್ವವ್ಯಾಪಿ ಅಭಿವೃದ್ಧಿ ಹಾಗೂ ಹೊರ ದೇಶಗಳಲ್ಲಿ ಭಾರತದ ಘನತೆ, ಗೌರವ ವೃದ್ಧಿಯ ಬಗ್ಗೆ ಉತ್ತಮ ಅನಿಸಿಕೆ ವ್ಯಕ್ತವಾಗುತ್ತಿದೆ. ಸಿದ್ಧರಾಮಯ್ಯ ಮತ್ತು ಡಿಕೆಶಿ ನಡವಳಿಕೆಯಿಂದ ಅವರ ಮನಸ್ಥಿತಿ ಸಾಬೀತಾಗಿದೆ. 2023ರಲ್ಲಿ ಮಗದೊಮ್ಮೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತ ಗೆಲುವು ಸಾಧಿಸಲಿದೆ.‌

ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಉತ್ತಮ ಕೆಲಸ ಕಾರ್ಯಗಳಿಗೆ ಪ್ರಚಾರ ನೀಡುವ ಜೊತೆಗೆ ಸಕಾರಾತ್ಮಕ ಅಂಶಗಳನ್ನು ಮೈಗೂಡಿಸಿಕೊಂಡು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿ.ಎಮ್. ಸುಕುಮಾರ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಜಿಲ್ಲಾ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿ, ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಪಿಎಫ್ಐ ಸಹಿತ ಒಂಬತ್ತು ಜಿಹಾದಿ ಸಂಘಟನೆಗಳನ್ನು ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್

ಉಡುಪಿ: ಭಯೋತ್ಪಾದನೆ, ಆಕ್ರಮ ಹಣ ವರ್ಗಾವಣೆ ಸಹಿತ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದ ಒಂಬತ್ತು ಮತಾಂಧ ಜಿಹಾದಿ ಸಂಘಟನೆಗಳನ್ನು ಏಕಕಾಲಕ್ಕೆ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ನರೇಂದ್ರ ಮೋದಿ ‌ನೇತೃತ್ವದ ಕೇಂದ್ರ ಸರಕಾರದ ದಿಟ್ಟ ಕ್ರಮ ಅಭಿನಂದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಸಿಮಿ‌ ಭಯೋತ್ಪಾದಕ ಜಿಹಾದಿ ಸಂಘಟನೆಯನ್ನು ಬ್ಯಾನ್ ಮಾಡಿದ 20 ವರ್ಷಗಳ ಬಳಿಕ ಇದೀಗ ಸೆ.27ರಂದು ಅತ್ಯಂತ ಚಾಣಾಕ್ಷ ನಡೆಯೊಂದಿಗೆ ಮೋದಿ ನೇತೃತ್ವದ ಕೇಂದ್ರ ಸರಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಅದರ ಜಿಹಾದಿ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಅಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ನ್ಯಾಷನಲ್ ಕಾನ್ಫಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್, ನ್ಯಾಷನಲ್ ವುಮೆನ್ಸ್ ಫ್ರಂಟ್, ನ್ಯಾಷನಲ್ ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್ ಕೇರಳ ಮುಂತಾದ ದೇಶದ್ರೋಹಿ ಸಂಘಟನೆಗಳನ್ನು 5 ವರ್ಷಗಳಿಗೆ ಬ್ಯಾನ್ ಮಾಡಿರುವ ಕ್ರಮ ದೇಶದ ಅಂತರಿಕ ಸುರಕ್ಷತೆ ಮತ್ತು ಸಮಗ್ರತೆಯ ದೃಷ್ಟಿಯಿಂದ ಸಕಾಲಿಕ ಮತ್ತು ಅತ್ಯಂತ ಮಹತ್ವಪೂರ್ಣವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತನ್ನ ಸ್ವಂತ ರಾಜಕೀಯ ದುರ್ಲಾಭಕ್ಕಾಗಿ ಪಿಎಫ್ಐ, ಎಸ್ಡಿಪಿಐ ನಂತಹ ಜಿಹಾದಿ ದೇಶ ದ್ರೋಹಿ ಸಂಘಟನೆಗಳ ಕಾರ್ಯಕರ್ಯರ ನೂರಾರು ಕೇಸ್ ಗಳನ್ನು ವಾಪಾಸು ಪಡೆದು ಸಾವಿರಾರು ಜಿಹಾದಿ ಮಾನಸಿಕತೆಯ ಕಾರ್ಯಕರ್ತರಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಸಿದ್ದು, ಇದೀಗ‌ ಪಿಎಫ್ಐ ಸಹಿತ ಒಂಬತ್ತು ದೇಶದ್ರೋಹಿ ಜಿಹಾದಿ ಉಗ್ರ ಸಂಘಟನೆಗಳಿಗೆ ಕೇಂದ್ರ ಸರಕಾರ ನಿಷೇಧ ಹೇರಿದ ಐತಿಹಾಸಿಕ ಕ್ರಮ ಸಿದ್ಧರಾಮಯ್ಯಗೆ ನುಂಗಲಾರದ ತುತ್ತೆನಿಸಿದೆ. ಸದಾ ಜಿಹಾದಿ ಮಾನಸಿಕತೆಯ ಮತಾಂಧರಿಗೆ ನೈತಿಕ ಬೆಂಬಲವನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್‌ ಈ ಬೆಳವಣಿಗೆಯಿಂದ ಕಂಗೆಟ್ಟಿರುವುದಂತೂ ಸತ್ಯ.

ನಿಷೇಧಿತ ದೇಶದ್ರೋಹಿ ಜಿಹಾದಿ ಸಂಘಟನೆ ಸಿಮಿ ಕಾರ್ಯಕರ್ತರಿಂದಲೇ ಆರಂಭಗೊಂಡಿರುವ ಪಿಎಫ್ಐ ಜಿಹಾದಿ ಉಗ್ರ ಸಂಘಟನೆಗೆ ವಿದೇಶಗಳಿಂದ ಕೋಟಿ ಕೋಟಿ ಹಣ ವರ್ಗಾವಣೆ, ಕರ್ನಾಟಕದ ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ನೇರ ಪಾತ್ರ, ದೇಶದಾದ್ಯಂತ ಹಿಂದೂ ನಾಯಕರ ಹತ್ಯೆಗೆ ಸ್ಕೆಚ್, ಲವ್ ಜಿಹಾದ್,‌ ದೇಶದ ಹಲವೆಡೆ ಉಗ್ರ ತರಬೇತಿ ಕೇಂದ್ರ, 2047ಕ್ಕೆ ಮುಸ್ಲಿಂ ರಾಷ್ಟ್ರದ ಕನಸು, ದೇಶದಾದ್ಯಂತ ವಿಧ್ವಂಸಕ ಕೃತ್ಯ ಎಸಗಲು ಸಂಚು ಮುಂತಾದ ದುಷ್ಕೃತ್ಯದ ಬಗ್ಗೆ ಸಮಗ್ರ ಸಾಕ್ಷ್ಯಾಧಾರವನ್ನು ಕ್ರೋಡೀಕರಿಸಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೋಡಿ ಸದ್ದಿಲ್ಲದೆ ಜಿಹಾದಿ ಉಗ್ರ ಸಂಘಟನೆ ಪಿಎಫ್ಐ ನ ಶವ ಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಿದೆ.

ಮಾಜಿ ಸಿ.ಎಂ. ಸಿದ್ದರಾಮಯ್ಯ ಸಹಿತ‌ ಅನೇಕ ಕಾಂಗ್ರೆಸ್ ನಾಯಕರು ಉಡುಪಿಯಲ್ಲಿ ವಿಲಕ್ಷಣಕಾರಿಯಾಗಿ ನಡೆದಿದ್ದ ಹಿಜಾಬ್ ವಿವಾದವನ್ನು ಕೂಡಾ ಸಮರ್ಥಿಸಿಕೊಂಡಿದ್ದು, ಇದೀಗ ಈ ಪ್ರಕರಣದ ಹಿಂದೆಯೂ ಇಂತಹ ಜಿಹಾದಿ ಉಗ್ರ ಸಂಘಟನೆಗಳ ಬಹಳ ದೊಡ್ಡ ಪಾತ್ರವಿದೆ ಎಂಬ ಗುಮಾನಿ ಜಗಜ್ಜಾಹೀರಾಗಿದೆ. ಜೊತೆಗೆ ಕಾಂಗ್ರೆಸ್ ನ ಒಂದೇ ವರ್ಗದ ಅತಿಯಾದ ಓಲೈಕೆ ತಂತ್ರದ ಮುಖವಾಡವೂ ಕಳಚಿ ಬಿದ್ದಿದೆ.

ದೇಶದ ಏಕತೆ, ಸಮಗ್ರತೆ ಮತ್ತು ಅಖಂಡತೆಗೆ ಧಕ್ಕೆ ತರುವಂತಹ ಯಾವುದೇ ದೇಶ ವಿರೋಧಿ ಚಟುವಟಿಕೆಗಳಿಗೆ ಇನ್ನು ಎಳ್ಳಷ್ಟೂ ಅಸ್ಪದವಿಲ್ಲ ಎಂಬ ಸ್ಪಷ್ಟ ಸಂದೇಶವು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ರವರ ದಿಟ್ಟ ನಡೆಯಿಂದ ಸಾಬೀತಾಗಿದೆ. ಇದನ್ನೂ ಮೀರಿ ಯಾವುದೇ ಮತಾಂಧ ದೇಶದ್ರೋಹಿ ಸಂಘಟನೆಗಳು ಬಾಲ ಬಿಚ್ಚಲು ಪ್ರಯತ್ನಿಸಿದಲ್ಲಿ ಅಂತಹ ಜಿಹಾದಿ ಮಾನಸಿಕತೆಯ ಭಯೋತ್ಪಾದಕ ಸಂಘಟನೆಗಳನ್ನು ಮಟ್ಟಹಾಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸರ್ವಶಕ್ತವಾಗಿದ್ದು, ಇದರ ಪರಿಣಾಮವಾಗಿ ಅಂತಹ ಜಿಹಾದಿ ಸಂಘಟನೆಗಳು ಇದೇ ಮಾದರಿಯಲ್ಲಿ ಒಂಬತ್ತರ ನಂತರದ ಸ್ಥಾನವನ್ನು ಪಡೆಯುವುದರಲ್ಲಿ‌ ಯಾವುದೇ ಸಂದೇಹವಿಲ್ಲ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಿಡಿ ಕಿಂಗ್ ‘ರಾಗಾ’ ಮೀರಿಸಲು ಅಸಂಬದ್ಧ ಡಯಲಾಗ್ ಹೊಡೆದು ನಗೆ ಪಾಟಲಿಗೀಡಾದ ಮಿಥುನ್ ರೈ : ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯ

News by: ಜನತಾಲೋಕನ್ಯೂಸ್

ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಹೀನಾಯವಾಗಿ ಸೋತು ‌ಮೂಲೆಗುಂಪಾಗಿರುವ ಮಿಥುನ್ ರೈ‌ ನಾಯಕತ್ವವಿಲ್ಲದೆ ಕಂಗೆಟ್ಟಿರುವ ಉಡುಪಿ ಕಾಂಗ್ರೆಸ್ ನಿಂದ ನಡೆದ ನಾಮ್ ಕಾ ವಾಸ್ತೇ ಪ್ರತಿಭಟನೆಯಲ್ಲಿ‌ ರಾಜಕೀಯ ಕ್ಷೇತ್ರದ ಖ್ಯಾತ ಕಾಮಿಡಿ ಕಿಂಗ್ ಎನಿಸಿಕೊಂಡಿರುವ ರಾಹುಲ್ ಗಾಂಧಿಯವರನ್ನು ಮೀರಿಸುವ ಇರಾದೆಯಿಂದ ಅಸಂಬದ್ಧ ಡಯಲಾಗ್ ಹೊಡೆದು ನಗೆಪಾಟಲಿಗೀಡಾಗಿದ್ದಾರೆ ಎಂದು ಬಿಜೆಪಿ ಉಡುಪಿ ನಗರ ಯುವ‌ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ದೇಶದೆಲ್ಲೆಡೆ ಅಸ್ತಿತ್ವ ಕಳೆದುಕೊಂಡಿರುವ ಭ್ರಷ್ಟ ಕಾಂಗ್ರೆಸ್ ಉಡುಪಿ ಜಿಲ್ಲೆಯಲ್ಲಿ ಯಾವುದೇ ಸಮರ್ಥ ನಾಯಕರಿಲ್ಲದೆ ಸೊರಗಿದೆ. ಅದಕ್ಕಾಗಿ ಬೇರೆ ಜಿಲ್ಲೆಗಳಿಂದ ತಿರಸ್ಕೃತವಾಗಿರುವ ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದು ಪ್ರತಿಭಟನೆ, ಕಾಮಿಡಿ ಭಾಷಣ ಮಾಡಿಸುತ್ತಿರುವುದು ಹಾಸ್ಯಾಸ್ಪದವಾಗಿದೆ.

ವಿಶ್ವ ನಾಯಕ, ಧೀಮಂತ ವ್ಯಕ್ತಿತ್ವದ ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವೆ ಶೋಭಾ ಕರಂದ್ಲಾಜೆ ಯವರ ಬಗ್ಗೆ ಸೊಲ್ಲೆತ್ತಲು ಮಿಥುನ್ ರೈ ಯವರಂತಹ ಅಪಕ್ವ ರಾಜಕಾರಿಣಿಗೆ ಯಾವ ನೈತಿಕತೆಯೂ ಇಲ್ಲ. ಸಂಸದೆ ಶೋಭಾ ಕರಂದ್ಲಾಜೆಯವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಕ್ಷೇತ್ರದ ಜನತೆಗೆ ಲಭ್ಯವಿರುತ್ತಾರೆ. ಉಡುಪಿ ಕ್ಷೇತ್ರದ ಬಗ್ಗೆ ಏನೇನೂ ತಿಳಿಯದೆ ಗಾಢ ನಿದ್ದೆಯಿಂದ ಎಚ್ಚೆತ್ತು ಬಂದಂತೆ ವರ್ತಿಸಿರುವ ಮಿಥುನ್‌ ರೈ ಯವರಿಗೆ ಇದೆಲ್ಲ ಹೇಗೆ ತಾನೆ ತಿಳಿಯಬೇಕು.

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಎ ಇದರ ಹೆಬ್ರಿಯಿಂದ ಮಲ್ಪೆವರೆಗಿನ ರಸ್ತೆ ಅಭಿವೃದ್ಧಿಗೆ ಈಗಾಗಲೇ ರೂ.320.00 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದು ನ್ಯಾಷನಲ್ ತೀರ್ಥಹಳ್ಳಿ ಜೆವಿ ಇವರಿಗೆ ಕಾಮಗಾರಿ ಕೈಗೊಳ್ಳಲು ಕಾರ್ಯಾದೇಶ ನೀಡಲಾಗಿದ್ದು, ಇದರಲ್ಲಿ ಕರಾವಳಿ ಜಂಕ್ಷನ್ ನಿಂದ ಮಲ್ಪೆಯ ವರೆಗಿನ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಭೂಸ್ವಾಧೀನ ಸೇರಿದಂತೆ ರಸ್ತೆ ಅಭಿವೃದ್ಧಿಗೆ ರೂ.80.00 ಕೋಟಿ ಮಂಜೂರಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಕಾಮಗಾರಿ ಆರಂಭಗೊಳ್ಳಲಿದೆ. ಪ್ರಸಕ್ತ‌ ಸುಗಮ ಸಂಚಾರಕ್ಕಾಗಿ ಸದ್ರಿ ರಸ್ತೆಯ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ಪರಿಹಾರ ಕಾಮಗಾರಿಯನ್ನು ಸದರಿ ಸಂಸ್ಥೆಯೇ ನಡೆಸುತ್ತದೆ ಎಂದು ಈಗಾಗಲೇ ಉಡುಪಿಯ ಜನಪ್ರಿಯ ಶಾಸಕ ಕೆ.ರಘುಪತಿ ಭಟ್ ರವರು ಈ ಹಿಂದೆಯೇ ಮಾಹಿತಿ ನೀಡಿದ್ದರು.

ಕೇವಲ ಚಪ್ಪಾಳೆ ಗಿಟ್ಟಿಸುವ ಗೀಳಿನಲ್ಲಿ ಕ್ಷುಲ್ಲಕ ಹೇಳಿಕೆಗಳನ್ನು ನೀಡಿ ಬಿಟ್ಟಿ ಪ್ರಚಾರ ಪಡೆಯುವ ಚಾಳಿ ಹೊಂದಿರುವ ಮಿಥುನ್ ರೈ ಯವರ ವ್ಯಕ್ತಿತ್ವ ಏನು ಎಂಬುದು ಎಲ್ಲರಿಗೂ ತಿಳಿದ ವಿಚಾರ.‌ ಪಕ್ಷದ ಯಾವುದೇ ಮುಖಂಡರ ಬಗ್ಗೆ ಇಂತಹ ಅಸಂಬದ್ಧ ಹೇಳಿಕೆಗಳು ಅಥವಾ ಕಾಮಿಡಿ ಪ್ರಹಸನ ಮುಂದುವರಿದಲ್ಲಿ ಅದನ್ನು ಸಮರ್ಪಕವಾಗಿ ಎದುರಿಸಲು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಮರ್ಥರಿದ್ದಾರೆ ಎಂದು ರೋಷನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ : ಶ್ರೀಕಾಂತ್ ನಾಯಕ್

News by: ಜನತಾಲೋಕವಾಣಿನ್ಯೂಸ್

ಕಾಪು: ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು ಅವರು ಊರಲ್ಲಿ ಇಲ್ಲದಿದ್ದಾಗ ಸಕ್ರಿಯವಾಗಿ ಸ್ಪಂಧಿಸಲು ಅವರ ಕಚೇರಿ ಸದಾ ತೆರೆದಿರುತ್ತದೆ. ಇದೇ ಬರುವ ದಿನಾಂಕ ಸೆ.30 ರಂದು ಕಾಪು ಪೇಟೆಯಲ್ಲಿ ಮಾನ್ಯ ಸಂಸದರ ಕಾರ್ಯಕ್ರಮ ನಿಗದಿಯಾಗಿದ್ದು ನಾವು ಸುಮಾರು 500 ಜನ ಸೆಲ್ಫಿ ತೆಗೆಯಲು ಸಿಧ್ಧರಿದ್ದೇವೆ. ಮಿಥುನ್ ರೈ ಯವರು ಹಣದೊಂದಿಗೆ ಬರಬೇಕು ಮತ್ತು ಅವರ ಪಕ್ಷ ಕಾರ್ಯಕರ್ತರನ್ನೂ ಬೇಕಾದರೆ ಕರೆತರಲಿ. ಸೆಲ್ಫಿಗೆ ನಾವು ಅವಕಾಶ ಒದಗಿಸುತ್ತೇವೆ.

ಒಂದು ಸೆಲ್ಫಿಗೆ ಐದು ಸಾವಿರ ನೀಡುವುದಾದರೆ ಅವರ ಬಳಿ ಹಣ ಎಷ್ಟಿರಬಹುದು? ಕಷ್ಟಪಟ್ಟು ದುಡಿದ ಹಣ ಹಾಗೆ ನೀಡುವರೇ? ವಿಧಾನ ಸಭಾ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರವರ ಹೇಳಿಕೆಯಂತೆ ಕಾಂಗ್ರೆಸ್ ನವರು ಮೂರು ತಲೆಮಾರಿಗೆ ಬೇಕಾದಷ್ಟು ಹಣ ಭ್ರಷ್ಟಾಚಾರ ಮೂಲಕ ಮಾಡಿದ್ದು ಇದನ್ನು ಪರೋಕ್ಷವಾಗಿ ಮಿಥುನ್ ರೈ ಒಪ್ಪಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದವರು ಸುಮ್ಮನೆ ಕಾಮಿಡಿ ಮಾತನಾಡುವುದು ಬಿಟ್ಟು ಗಂಭೀರವಾಗಿರುವ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಲಿತರೆ ಒಳ್ಳೆಯದು. ಪಿಎಫ್ಐ ಯಂತಹ ದೇಶದ್ರೋಹಿಗಳ ಕೇಸು ಖುಲಾಸೆಗೊಳಿಸಿದ್ದು ನಿಮ್ಮ ಪಕ್ಷ. ಇಂತಹ ದೇಶವಿರೋಧಿಗಳ ಬಗ್ಗೆ ಮಾತನಾಡಲು ಧೈರ್ಯ ಇಲ್ಲದೆ ತುಷ್ಟೀಕರಣದ ಪರಮಾವಧಿಗೆ ತಲುಪಿರುವ ನಿಮ್ಮ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಖಂಡಿತವಾಗಿತಯೂ ಹೇಳ ಹೆಸರಿಲ್ಲದಂತೆ ಮಾಡುವರು ಜನತೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರೆತ್ತಲೂ ಯೋಗ್ಯತೆ ಇಲ್ಲದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್


ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ‌ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ‌ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಶೋಭಾ ಕರಂದ್ಲಾಜೆಯವರು‌‌ ಈ ಹಿಂದೆ ರಾಜ್ಯದ ಮಂತ್ರಿಯಾಗಿ ಉತ್ತಮ ಕೆಲಸ ಕಾರ್ಯಗಳೊಂದಿಗೆ ದಕ್ಷತೆಯಿಂದ ತನ್ನ ಖಾತೆಯನ್ನು ನಿರ್ವಹಿಸಿದ ರೀತಿ ಹಾಗೂ ಈಗ ಸಂಸದೆ ಹಾಗೂ ಕೇಂದ್ರ ಸಚಿವೆಯಾಗಿ ಅತ್ಯಂತ ಪರಿಣಾಮಕಾರಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಬಗ್ಗೆ ನೇರವಾಗಿ ಚರ್ಚೆ ನಡೆಸಲು ನಾವು ಸಿದ್ದರಿದ್ದೇವೆ. ಮಿಥುನ್ ರೈ ಅವರಿಗೆ ಮಾತನಾಡಲು ಅಥವಾ ಆರೋಪ ಮಾಡಲು ಆಸಕ್ತಿ ಇದ್ದಲ್ಲಿ ನೇರವಾದ ಚರ್ಚೆಗೆ ಬರಲಿ. ಅದನ್ನು ಬಿಟ್ಟು ಪುಕ್ಕಟೆ ಪ್ರಚಾರಕ್ಕಾಗಿ ಗಾಳಿಯಲ್ಲಿ ಗುಂಡು ಹೊಡೆಯುವ ಕ್ಷುಲ್ಲಕ ರಾಜಕಾರಣಕ್ಕೆ ಕೈ ಹಾಕುವುದು ಬೇಡ. ಇದೇ ಚಾಳಿಯನ್ನು ಮತ್ತೆ‌ ಮುಂದುವರೆಸಿದಲ್ಲಿ ಅದೇ ದಾಟಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಲು ಸದಾ ಸಿದ್ಧರಿದ್ದೇವೆ.

ಕ್ರಿಯಾಶೀಲ ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಕ್ಷುಲ್ಲಕ ಮಾತುಗಳನ್ನಾಡುವ ಮೊದಲು ಈ ಹಿಂದೆ ಉಡುಪಿ ಕ್ಷೇತ್ರದಲ್ಲಿ ಸುದೀರ್ಘ ಅವಧಿಗೆ ಸಂಸದರಾಗಿದ್ದ ಕಾಂಗ್ರೆಸ್ ಪಕ್ಷದ ದುರೀಣರೊಬ್ಬರು ಉಡುಪಿಗೆ ನೀಡಿದ ಕೊಡುಗೆಗಳೇನು ಎಂಬ ಬಗ್ಗೆಯೂ ಮಿಥುನ್ ರೈ ಅವರು ಆತ್ಮಾವಲೋಕನ ಮಾಡುವುದು ಉತ್ತಮ.

ಕಾಂಗ್ರೆಸ್ ಪ್ರಾಯೋಜಿತ ಪ್ರಹಸನ 40% ಕಮಿಷನ್ ಬಗ್ಗೆ ಮಾತನಾಡಲು ಡಿ.ಕೆ. ಶಿವಕುಮಾರ್ ಶಿಷ್ಯ ಮಿಥುನ್ ರೈ ಅವರಿಗೆ ಯಾವ ನೈತಿಕತೆಯೂ ಇಲ್ಲ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಯಾವ ರೀತಿ ಕಮಿಷನ್ ಸಂದಾಯವಾಗುತ್ತಿತ್ತು ಎಂಬುದು ಜಗಜ್ಜಾಹೀರಾಗಿದೆ. ಕಾಂಗ್ರೆಸ್ ವರಿಷ್ಠರೇ ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಆರೋಪಿಗಳಾಗಿ ವಿಚಾರಣೆ ಎದುರಿಸುತ್ತಿರುವಾಗ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರಕ್ಕೆ ಬೇರೆ ಉದಾಹರಣೆಯ ಅಗತ್ಯ ಬೇಕೆನಿಸದು.

ಮಿಥುನ್ ರೈ ಅವರು ಗಾಜಿನ ಮನೆಯಲ್ಲಿ ಕುಳಿತು ಇನ್ನೊಂದು ಮನೆಗೆ ಕಲ್ಲು ಹೊಡೆಯುವ ಕೆಲಸ ಮಾಡಿದರೆ ಅದು ಅವರ ಮನೆಯನ್ನೇ ಒಡೆದು ಹಾಕುತ್ತದೆ ಎಂಬ ಸಾಮಾನ್ಯ ಪರಿಜ್ಞಾನ ಹೊಂದಿದರೆ ಒಳಿತು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿ.ಸಿ.ಎ.ಆರ್.ಐ. ಗೋವಾ ಐಎಂಸಿ ಮೆಂಬರ್ ಶಿವಕುಮಾರ್ ಅಂಬಲಪಾಡಿ ಇವರಿಗೆ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ. ಗೌರವ ಸನ್ಮಾನ

News by: ಜನತಾಲೋಕವಾಣಿನ್ಯೂಸ್



ಉಡುಪಿ: ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ., ಉಡುಪಿ ಇದರ ನಿರ್ದೇಶಕ ಮಂಡಳಿಯ ಸ್ಥಾಪಕ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯರಾಗಿ‌ ನಾಮ ನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿಯ ಮಣಿಪಾಲ್ ಸೆಂಟರ್ ನಲ್ಲಿ ನಡೆದ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ. ಇದರ 12ನೇ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿಯ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಮಣಿಪಾಲ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ. ಇದರ ಉಪಾಧ್ಯಕ್ಷ ಶಶೀಂದ್ರ ಭಟ್, ಆಡಳಿತ ಮಂಡಳಿಯ ಸದಸ್ಯರಾದ ಕೆ.ದಿನಕರ ಶೆಟ್ಟಿ, ಎಮ್.ಸುಧಾಕರ ಶೆಟ್ಟಿ, ಜಗದೀಶ್ ಕುಡ್ವ, ಅಜಿತ್ ಕುಮಾರ್ ಶೆಟ್ಟಿ, ಕೆ.ರಮೇಶ್ ಶೇರಿಗಾರ್, ಬಿ.ರಾಜಗೋಪಾಲ್ ಆಚಾರ್ಯ, ಸುಶೀಲ ಚಂದ್ರಕುಮಾರ್, ಶಕುಂತಳಾ ಶೆಟ್ಟಿ, ಸಹಕಾರಿಯ ಪ್ರಭಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಾ, ಸಿಬ್ಬಂದಿಗಳಾದ ಸರೋಜಿನಿ, ಅಕ್ಷತಾ ಶೆಟ್ಟಿ, ಮೋನಿಷಾ ಹಾಗೂ ಸಹಕಾರಿಯ ಪಾಲು ಬಂಡವಾಳದಾರರು ಮತ್ತು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ಆರೋಗ್ಯ ಶಿಬಿರದ ಮೂಲಕ ‘ಸೇವಾ ಪಾಕ್ಷಿಕ’ ಅಭಿಯಾನದ ಸೇವಾ ಕಾರ್ಯಗಳು ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪುವಂತಾಗಿದೆ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್



ಉಡುಪಿ: ಬಿಜೆಪಿ ಸೆ.17ರಿಂದ ಅ.2ರ ತನಕ ಜಿಲ್ಲೆಯಾದ್ಯಂತ ಆಚರಿಸುತ್ತಿರುವ ಸೇವಾ ಪಾಕ್ಷಿಕ ಅಭಿಯಾನದ ಸೇವಾ ಕಾರ್ಯಗಳು ವೈಶಿಷ್ಟ್ಯಪೂರ್ಣ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ತಲುಪುವಂತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಸೆ.25 ರವಿವಾರ ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಮತ್ತು ಜಿಲ್ಲಾ ವೈದ್ಯಕೀಯ ‌ಪ್ರಕೋಷ್ಠದ ಜಂಟಿ ಆಶ್ರಯದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನುರಿತ ವೈದ್ಯರ ಸಹಯೋಗದೊಂದಿಗೆ ‘ಸೇವಾ‌ ಪಾಕ್ಷಿಕ’ ಅಭಿಯಾನ ಮತ್ತು ‘ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ’ಯ ಪ್ರಯುಕ್ತ ಜಿಲ್ಲೆಯ ಪತ್ರಕರ್ತರು, ಪತ್ರಿಕಾ ವಿತರಕರು, ಕೇಬಲ್ ಅಪರೇಟರ್ ಸಿಬ್ಬಂದಿಗಳು ಮತ್ತು ಸಾರ್ವಜನಿಕರಿಗಾಗಿ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಿದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದು, ಜನತೆ ಮೋದಿಯವರನ್ನು ಸ್ವೀಕರಿಸಿದ ಪರಿ ಹೆಮ್ಮೆ ಎನಿಸುತ್ತದೆ. ಈ ನಿಟ್ಟಿನಲ್ಲಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಕಾರ್ಯಗಳಾಗಬೇಕಿದೆ.

‘ಸೇವಾ ಪಾಕ್ಷಿಕ’ ಅಭಿಯಾನದಡಿ ವೈದ್ಯಕೀಯ ಸೇವೆ, ರಕ್ತದಾನ, ಕೋವಿಡ್ ಲಸಿಕೆ ವಿತರಣೆ, ಸ್ವಚ್ಛತೆ, ಸಸಿ ನೆಡುವ ಅಭಿಯಾನ ಮುಂತಾದ ನೂರಾರು ಸೇವಾ ಕಾರ್ಯಗಳು ಜಿಲ್ಲೆಯಾದ್ಯಂತ ವೇಗ ಪಡೆದಿದೆ. ಈ ವಿನೂತನ ಮಾದರಿಯ ಆರೋಗ್ಯ ತಪಾಸಣಾ ಶಿಬಿರವು ಪ್ರಚಾರಕ್ಕೆ ಹೊರತಾಗಿ ಆರೋಗ್ಯದ ನೈಜ ಕಾಳಜಿ ಇರುವ ಜನತೆಗೆ ವೈವಿಧ್ಯಮಯ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಸಮಾರಂಭದ ಮುಖ್ಯ ಅತಿಥಿಗಳಾದ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಯವರು ಆರೋಗ್ಯ ಸಂರಕ್ಷಣೆಯ ಔಚಿತ್ಯವನ್ನು ವಿಶ್ಲೇಷಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ! ರಾಮಚಂದ್ರ ಕಾಮತ್ ಮಾತನಾಡಿ ಆರೋಗ್ಯ, ಆಯುಷ್ಯ, ಯಶಸ್ಸು ಮತ್ತು ನೆಮ್ಮದಿ ಒಂದಕ್ಕೊಂದು ಪೂರಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸ್ಬಯಂ ಆರೋಗ್ಯದ ಕಾಳಜಿಯೊಂದಿಗೆ ಸಕಾಲಿಕ ಆರೋಗ್ಯ ತಪಾಸಣೆಯ ಮೂಲಕ ತಮ್ಮ ಆರೋಗ್ಯ ಸಂರಕ್ಷಣೆ ಹೆಚ್ಚಿನ ಮಹತ್ವ ನೀಡುವುದು ಇಂದಿನ ಅಗತ್ಯತೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಡಾ! ಧರ್ಮ ಯು. ಶೆಟ್ಟಿ, ಶಿವಾನಿ ಡಯಾಗ್ನೊಸ್ಟಿಕ್ಸ್ ಮುಖ್ಯಸ್ಥ ಶಿವಾನಂದ ನಾಯಕ್, ಜಿಲ್ಲೆಯ ಹಿರಿಯ ಪತ್ರಿಕಾ ವಿತರಕ ಬಾಲಕೃಷ್ಣ ಶೆಟ್ಟಿ ಕರ್ಜೆ, ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹ ಸಂಚಾಲಕ ಡಾ! ವಿದ್ಯಾಧರ ಶೆಟ್ಟಿ, ಜಿಲ್ಲಾ‍ ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಪ್ರಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆೆ ಸ್ವಾಗತಿಸಿದರು. ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

12 ವಿಭಾಗದಲ್ಲಿ ವೈದ್ಯಕೀಯ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, 250ಕ್ಕೂ ಅಧಿಕ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ ಇದರ ವತಿಯಿಂದ 100ಕ್ಕೂ ಅಧಿಕ ಮಂದಿಗೆ ಕೋವಿಡ್ ಬೂಸ್ಟರ್‌ ಡೋಸ್ ವಿತರಿಸಲಾಯಿತು. ಶ್ರೀಕಾಂತ್ ನಾಯಕ್ ನೇತೃತ್ವದ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಅಲೆವೂರು ಮತ್ತು ಗ್ರಾಮ ಒನ್ ಸೇವಾ ಕೇಂದ್ರ ಕಟಪಾಡಿ ವತಿಯಿಂದ 200ಕ್ಕೂ ಮಿಕ್ಕಿ ನಾಗರಿಕರಿಗೆ ಆಯುಷ್ಮಾನ್ ಭಾರತ್ ಕಾರ್ಡ್ – ಅಭಾ ಕಾರ್ಡ್ ನೊಂದಾವಣೆ ಪ್ರಕ್ರಿಯೆ ನಡೆಯಿತು. ಜಿಲ್ಲೆಯ ಪತ್ರಕರ್ತರು, ಪತ್ರಿಕಾ ವಿತರಕರು, ಕೇಬಲ್ ಅಪರೇಟರ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಂಡರು.

ಪಂಡಿತ್ ಜೀ ಜೀವನಾದರ್ಶ, ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವ ಪಡೆದಿದೆ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್

ಉಡುಪಿ: ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಜೀವನಾದರ್ಶ ಹಾಗೂ ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವವನ್ನು ಪಡೆದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಸೆ.25 ರವಿವಾರ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ಪಂಡಿತ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವನ ಜೀವನ ಮೌಲ್ಯಗಳ ಗುಣಗಾನಗೈದರು.

ಪಕ್ಷದ ರಾಷ್ಟ್ರಿಯ ಅಧ್ಯಕ್ಷರ ಕರೆಯಂತೆ ‘ಸೇವಾ ಪಾಕ್ಷಿಕ’ ಅಭಿಯಾನದ ಅಂಗವಾಗಿ‌ ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ 13 ಅಂಶಗಳ ವೈವಿಧ್ಯಮಯ ಸೇವಾ ಚಟುವಟಿಕೆಗಳು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿವೆ. ರವಿವಾರ ಪಂಡಿತ್ ಜೀ ಯವರ ಜನ್ಮ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಆಚರಿಸುವ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಾಮೂಹಿಕವಾಗಿ ವೀಕ್ಷಿಸುವ ಪ್ರಕ್ರಿಯೆ ನಡೆದಿದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು,‌ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾಯಾಲಯ ಕಾರ್ಯದರ್ಶಿ‌ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಗುರ್ಮೆ, ಜಿಲ್ಲಾ ಸಾಮಾಜಿಕ ಜಾಲತಾಣದ ಚಂದ್ರಶೇಖರ್ ಪ್ರಭು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ಪ್ರಮುಖರಾದ ಮೋಹನ ಉಪಾಧ್ಯಾಯ ಮುಂತಾದವರು ಉಪಸ್ಥಿತರಿದ್ದರು.

ಸೆ.25 ಬಿಜೆಪಿ ‘ಸೇವಾ ಪಾಕ್ಷಿಕ’‌ ಪ್ತಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ, ಆಯುಷ್ಮಾನ್ ಕಾರ್ಡ್‌, ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ

News By: ಜನತಾಲೋಕವಾಣಿನ್ಯೂಸ್



ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಕೋಷ್ಠ‌ ಮತ್ತು ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ತಜ್ಞ ವೈದ್ಯರಿಂದ ‘ಸೇವಾ ಪಾಕ್ಷಿಕ’ ಅಭಿಯಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಜನ್ಮ‌ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಪತ್ರಕರ್ತರು, ಪತ್ರಿಕಾ ವಿತರಕರು, ಕೇಬಲ್ ಅಪರೇಟರ್ ಸಿಬ್ಬಂದಿಗಳು ಮತ್ತು ಸಾರ್ವಜನಿಕ ಬಂಧುಗಳಿಗೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ವು ಸೆ.25 ರವಿವಾರ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00ರ ವರೆಗೆ ಉಡುಪಿ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಲಿದೆ. ಜೊತೆಗೆ ಆಯುಷ್ಮಾನ್ ಭಾರತ್ ಕಾರ್ಡ್ – ಅಭಾ ಕಾರ್ಡ್ ನೊಂದಾವಣೆ ಹಾಗೂ‌ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ ನಡೆಯಲಿದೆ. ಶಿಬಿರದ ಅಪೇಕ್ಷಿತರು, ಸಾರ್ವಜನಿಕ ಬಂಧುಗಳು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು‌ ಮತ್ತು ಕಾರ್ಯಕರ್ತ ಬಂಧುಗಳು ಶಿಬಿರದ ಪ್ರಯೋಜನವನ್ನು‌ ಪಡೆಯಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು.

ಅವರು ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಾಧ್ಯಮ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸೆ.25ರ ಬೆಳಿಗ್ಗೆ 9.00ಕ್ಕೆ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ! ರಾಮಚಂದ್ರ ಕಾಮತ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ಶಿಬಿರವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ‌ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಕುಂಜಿಬೆಟ್ಟು ವಾರ್ಡ್ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಪಕ್ಷದ ಪ್ರಮಖರು, ಜಿಲ್ಲಾ ಮಾಧ್ಯಮ ತಂಡ ಹಾಗೂ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಪ್ರಮುಖರು ಭಾಗವಹಿಸಲಿದ್ದಾರೆ.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಔಷಧಿ ವಿತರಣೆ ಬಗ್ಗೆ ಆಶ್ರಿತಾ ಟ್ರಸ್ಟ್, ಕೋಟ ಹಾಗೂ ರಕ್ತ ಪರೀಕ್ಷೆಯ ಬಗ್ಗೆ ನವ್ಯ ಚೇತನ ಟ್ರಸ್ಟ್ ಮತ್ತು ಶಿವಾನಿ ಡಯಾಗ್ನೊಸ್ಟಿಕ್ಸ್, ಉಡುಪಿ ಇವರು ಸಹಕರಿಸಲಿದ್ದಾರೆ.

ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆಯು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಇವರ ಸಹಯೋಗದೊಂದಿಗೆ ನಡೆಯಲಿದೆ.

ಆಯುಷ್ಮಾನ್ ಕಾರ್ಡ್ – ಅಭಾ ಕಾರ್ಡ್ ನೊಂದಾವಣೆಯ ಬಗ್ಗೆ ಶ್ರೀಮತಿ ಸೌಮ್ಯ, ಗ್ರಾಮ ಒನ್ ಉದ್ಯಾವರ ಹಾಗೂ ಶ್ರೀಕಾಂತ್ ನಾಯಕ್ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಅಲೆವೂರು ಇವರು ಸಹಕರಿಸಲಿದ್ದಾರೆ.

ಆಯುಷ್ಮಾನ್ ಕಾರ್ಡ್ ನೊಂದಾವಣೆ ಹಾಗೂ ಕೋವಿಡ್ ಲಸಿಕೆ ಪಡೆಯಲಿಚ್ಛಿಸುವವರು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ಆಧಾರ್ ಲಿಂಕ್ ಇರುವ ಮೊಬೈಲನ್ನು ತಮ್ಮೊಂದಿಗೆ ತರುವಂತೆ ಸೂಚಿಸಲಾಗಿದೆ.

ಜಿಲ್ಲೆಯ ಪತ್ರಕರ್ತ ಬಂಧುಗಳು,‌ ಪತ್ರಿಕಾ ವಿತರಕರು, ಕೇಬಲ್ ಅಪರೇಟರ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿ ಭಾಗವಹಿಸಿ ಈ ಸುಸಜ್ಜಿತ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಇತರ ಸೇವಾ ಕಾರ್ಯಗಳ ಪ್ರಯೋಜನವನ್ನು ಪಡೆಯಬೇಕು ಎಂದು ಕಿಣಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ,‌ ಜಿಲ್ಲಾ ಮಾಧ್ಯಮ ಸಮಿತಿ ಸದಸ್ಯರಾದ ವಿಜಯ್ ಶೆಟ್ಟಿ ಕೊಂಡಾಡಿ, ವಿನಾಯಕ್ ನಾಯಕ್, ಉಡುಪಿ ಗ್ರಾಮಾಂತರ ಸಹ ಸಂಚಾಲಕ ಮಹೇಶ್ ಕೊಕ್ಕರ್ಣೆ, ಕಾಪು ಮಂಡಲ ಸಂಚಾಲಕ ಸಮರ್ಥ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ

  • news by: ಜನತಾಲೋಕವಾಣಿನ್ಯೂಸ್

ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ದ ಡಿಜಿಟಲೀಕರಣದ ಬಗ್ಗೆ ಮಾಹಿತಿ ಕಾರ್ಯಾಗಾರವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಶುಕ್ರವಾರ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ‌‌ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳನ್ನು ಅತ್ಯಂತ ಶೃದ್ಧೆ ಮತ್ತು ಬದ್ಧತೆಯಿಂದ ನಿಭಾಯಿಸುವ ಸಶಕ್ತ ಕಾರ್ಯ ತಂಡಗಳು ಜಿಲ್ಲೆ, ಮಂಡಲ ಹಾಗೂ ವಿವಿಧ ಘಟಕಗಳ ಹಂತಗಳಲ್ಲಿವೆ. ಈ ನಿಟ್ಟಿನಲ್ಲಿ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ಬಾಕಿ ಇರುವ ಕೆಲವೊಂದು ಬೂತ್ ಗಳ ಅಧ್ಯಯನ ಹಾಗೂ ಪರಿಶೀಲನ ಪತ್ರಕವನ್ನು ಅಗತ್ಯ ಮಾಹಿತಿಯೊಂದಿಗೆ ಶೀಘ್ರವಾಗಿ ಪೂರ್ತಿಗೊಳಿಸಿ, ರಾಜ್ಯ ತಂಡ ನೀಡಿರುವ ಉಪಯುಕ್ತ ಮಾರ್ಗದರ್ಶನದೊಂದಿಗೆ ಸಮಗ್ರ ಮಾಹಿತಿಯ ಡಿಜಿಟಲೀಕರಣ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬೂತ್ ಸಶಸ್ತೀಕರಣ ಅಭಿಯಾನದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ ಅಭಿಯಾನದ ಅಧ್ಯಯನ ಹಾಗೂ ಪರಿಶೀಲನ ಪತ್ರಕದ ಡಿಜಿಟಲೀಕರವು ಗರಿಷ್ಠ ಪ್ರಮಾಣದಲ್ಲಿ ಪ್ರಗತಿಯಲ್ಲಿದೆ. ಜಿಲ್ಲಾ ಮತ್ತು ಮಂಡಲವಾರು ತಂಡಗಳು ಜಿಲ್ಲಾ ವ್ಯಾಪ್ತಿಯ ಎಲ್ಲಾ 1,111 ಬೂತ್ ಗಳ ಸಮಗ್ರ ಮಾಹಿತಿಯ ಡಿಜಿಟಲೀಕರಣ ಹಾಗೂ ಪರಿಷ್ಕರಣೆಗೆ ಹೆಚ್ಚಿನ ಒತ್ತು‌ ನೀಡಿ ಶೀಘ್ರವಾಗಿ ಜಿಲ್ಲಾ ಬಿಜೆಪಿ ‘ಪರಿಪೂರ್ಣ ಬೂತ್ ಡಿಜಿಟಲೀಕೃತ ಜಿಲ್ಲೆ’ ಎಂಬ ಹೆಗ್ಗಳಿಕೆಗೆ ಪಾತ್ರವಾಗುವಂತೆ ತೊಡಗಿಸಿಕೊಳ್ಳಬೇಕು ಎಂದರು.

‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದ ‘ಅಧ್ಯಯನ ಹಾಗೂ ಪರಿಶೀಲನ’ ರಾಜ್ಯ ತಂಡದ ಪ್ರಮುಖ್ ಮಂಜುನಾಥ್ ಮಾಹಿತಿಯ ಡಿಜಿಟಲೀಕರಣ, ಪರಿಷ್ಕರಣೆ ಹಾಗೂ ಡಿಜಿಟಲ್ ಪುಸ್ತಕದ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪದಾಧಿಕಾರಿಗಳು, ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭಿಯಾನದ ಜಿಲ್ಲಾ ಮತ್ತು ಮಂಡಲಗಳ ತಂಡದ ಸದಸ್ಯರು ಉಪಸ್ಥಿತರಿದ್ದರು.

Design a site like this with WordPress.com
Get started