ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವುದನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಲೇ ನಿಲ್ಲಿಸಬೇಕೆಂದು ಆದೇಶ ನೀಡಿದ್ದಾರೆ.
ಚಿಕ್ಕಮಕ್ಕಳಿಗೆ ಆನ್ ಲೈನ್ ಶಿಕ್ಷಣ ಮಾನಸಿಕ ಒತ್ತಡ ಹೇರುತ್ತದೆ. ಇದರಿಂದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹಲವು ತಜ್ಞರೇ ವರದಿ ನೀಡಿದ್ದರು. ಪೋಷಕರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು
ಈ ಹಿನ್ನಲೆಯಲ್ಲಿ ಸುರೇಶ್ ಕುಮಾರ್ ಇಂದಿನಿಂದಲೇ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಿ ಆದೇಶ ನೀಡಿದ್ದಾರೆ.
ದುಡ್ಡು ಮಾಡಲು ನಿಂತು ಬಿಟ್ರಾ ಕೊರೋನಾ ವಾರಿಯರ್ಸ್!!? ನಿಜಕ್ಕೂ ಇದು ಅಚ್ಚರಿ ಮೂಡಿಸುವ ವಿಚಾರ. KOVID 19 ಇಡೀ ಜಗತ್ತನ್ನೇ ಹಿಂಡಿ ಹಿಪ್ಪೆ ಮಾಡಿದೆ. ಜನತೆಯ ಬದುಕು ನಲುಗಿ ಹೋಗಿದೆ. ಜೀವನವೇ ಸಾಕಾಗಿಬಿಟ್ಟಿದೆ. ಸಾವು ಕಣ್ಣೆದುರಲ್ಲೇ ಇದೆ. ಆದರೂ ಜನರು ಬದಲಾಗಲಿಲ್ಲ!! ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕಾಗಿಬಂದಾಗ ಒಲ್ಲದ ಮನಸ್ಸಿನಿಂದಲೋ, ಸಾವಿನ ಭಯದಿಂದಲೋ ಒಗ್ಗಿಕೊಂಡರು ಒಂದಷ್ಟು ಅನಿಷ್ಟ ಮಂದಿಯ ಹೊರತಾಗಿ!? ಜನರ ಹಿತದೃಷ್ಟಿಯಿಂದ, ಆರ್ಥಿಕ ಚೇತರಿಕೆಗಾಗಿ ಹಂತಹಂತವಾಗಿ ಕಠಿಣ ಹಾಗೂ ಕಡ್ಡಾಯ ನೀತಿಗಳನ್ನು ಸಡಿಲಗೊಳಿಸುತ್ತಾ ಬಂದಂತೆಲ್ಲ ಜನತೆ ತಮ್ಮ ಕರ್ತವ್ಯವನ್ನು ಮರೆತು ಕೇವಲ ಸರ್ಕಾರ ಇದನ್ನೆಲ್ಲ ನೋಡಿಕೊಳ್ಳಬೇಕು ಎಂಬ ತಮ್ಮ ಮಾಮೂಲಿ ನಿಲುವಿಗೆ ಪುನಃ ಅಂಟಿಕೊಂಡುಬಿಟ್ಟರು. ಕೊರೋನಾ ಸಂದರ್ಭದಲ್ಲೂ ಕೂಡ ಸರ್ಕಾರದ ಮುಂಜಾಗ್ರತಾ ಕ್ರಮಗಳು, ಕಠಿಣ ನಿಲುವುಗಳು ರಾಜಕೀಯ ಹಾಗೂ ಧಾರ್ಮಿಕವಾಗಿ ಹಲವು ವಿರೋಧಗಳಿಗೂ ಕಾರಣವಾಗಿದ್ದು ವಿಪರ್ಯಾಸ!!! ಜೀವಕ್ಕೆ ಬೆಲೆಕೊಟ್ಟಾಗ ಉಡುಪಿ ಜಿಲ್ಲೆಯು ಮೂರೇ ಸೋಂಕಿತರಿಗೆ ನಿಂತಿತ್ತು. ಯಾವಾಗ ಭಾವನೆಗಳಿಗೆ ಬೆಲೆಕೊಡಬೇಕೆಂದು ಒತ್ತಾಯಮಾಡು ಒತ್ತಡ ತರಲಾಯಿತೋ ಅಲ್ಲಿಗೆ ಮೂರಂಕಿ ಮುಗಿಸಿ ನಾಲ್ಕಂಕಿಗೆ ಮಗ್ಗುಲು ಬದಲಾಯಿಸಿದೆ.
ಇದಕ್ಕೇನು ಕಾರಣ? ಯಾರು ಕಾರಣ ಎಂಬುದಕ್ಕಿಂತ ಮುಂಚೆ ನಾವು ಯೋಚಿಸಬೇಕಾದ ಬಹುಮುಖ್ಯ ವಿಚಾರವೆಂದರೆ ನಮ್ಮ ಕೊರೋನಾ ವಾರಿಯರ್ಸ್ ಹಣ ಮಾಡಲು ನಿಂತು ಬಿಟ್ರಾ ಅನ್ನೋದು!? ಹಾಗಂತ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಎಗ್ಗಿಲ್ಲದೆ ಹರಿದಾಡಿಬಿಟ್ಟಿದೆ. ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಬೇಕಿದ್ದ ನಾವು, ನಮ್ಮನ್ನು ಕಾಪಾಡಲು ನಿಂತವರ ವಿರುದ್ಧವೇ ನಿಂತುಬಿಟ್ಟಿದ್ದೇವೆ ಅನ್ನುವುದು ಮಾತ್ರ ಹಾಸ್ಯಾಸ್ಪದ. ಕೊರೋನಾ +ve ಇಲ್ಲ, ಎಲ್ಲವೂ ಕೂಡ ತಲೆಗೆ ಮೂರುವರೆ ಲಕ್ಷ ರೂಪಾಯಿ ದುಡ್ಡು ಹೊಡೆಯುವ ತಂತ್ರ ಅಂತ ಬಿಂಬಿಸಲಾಗುತ್ತಿದೆ. ಎಗ್ಗಿಲ್ಲದೆ ಆರೋಪ ಮಾಡುವ ನೀವು ಹಲವು ವಾಸ್ತವ ಸಂಗತಿಗಳನ್ನು ಮೊದಲು ಗಮನಿಸಬೇಕು. ರಿಪೋರ್ಟ್ ನೀಡಿ ಕರೆದುಕೊಂಡು ಹೋಗಿ ಎನ್ನುವವರು ಸತ್ತರೆ, ನಿಮ್ಮನ್ನು ನಂಬುದವರಿಗಷ್ಟೇ ನಷ್ಟ!! ನೀವ್ಯಾರು ಒಂದೇ ಒಂದು ಪೈಸೆ ಖರ್ಚುಮಾಡಿ ಗುಣಮುಖರಾಗಿ ಬರುವುದಿಲ್ಲ! ಹಾಗಿದ್ದಾಗ್ಯೂ ಹಣ ಹೊಡೆಯುವ ತಂತ್ರ ಎಂಬ ಅನಕ್ಷರ ಧೋರಣೆ ಬಿಟ್ಟುಬಿಡಿ ಇಲ್ಲವೇ ಸೂಕ್ತ ದಾಖಲೆಗಳಿದ್ದರೆ ಕಾನೂನು ಹೋರಾಟ ಮಾಡಿ.
ಸರ್ಕಾರ ನಿಮಗೆ ಖರ್ಚು ಮಾಡುವ ಪ್ರತಿಯೊಂದು ಪೈಸೆಯೂ ಜನರ ತೆರಿಗೆ ಹಣ. ಸಾಲದ್ದಕ್ಕೆ ಉಡುಪಿಯಲ್ಲಿ ಒಂದೇ ಒಂದು KOVID TEST LAB ಕೂಡ ಸರ್ಕಾರ ಸ್ಥಾಪಿಸಿಲ್ಲ!!
ಕೆಎಂಸಿ, ಯೆನಪೋಯ,ವೆನ್ಲಾಕ್, ಶಿವಮೊಗ್ಗ,ಹಾಸನ ಹೀಗೆ ನಾನಾ ಕಡೆಗಳಿಗೆ ನಿಮ್ಮಿಂದ ಸಂಗ್ರಹಿಸಿದ ಅಮೃತವನ್ನು ಕಳಿಸಿ, ಅದರಲ್ಲಿ ವಿಷ ಇದೆಯೇ ಅಂತ ಪರೀಕ್ಷಿಸಲಾಗುತ್ತಿದೆ.
ಒಬ್ಬ ವ್ಯಕ್ತಿಯ ರಿಪೋರ್ಟ್ ತಿಳಿಯಲು ಬರೋಬ್ಬರಿ ಎಂಟು ಗಂಟೆಗಳು ಬೇಕು!!
ಅತ್ಯಂತ ಆಧುನಿಕ ವ್ಯವಸ್ಥೆ ಹೊಂದಿರುವ ಲ್ಯಾಬ್ ಇರುವ ಆಸ್ಪತ್ರೆಗಳಲ್ಲಿ max to max 100 ಜನರ ರಿಪೋರ್ಟ್ ದಿನವೊಂದಕ್ಕೆ ಪಡೆಯಬಹುದು ಅಷ್ಟೇ!! ಇನ್ನುಳಿದವುಗಳಲ್ಲಿ 50 ದಾಟಿದರೆ ಹೆಚ್ಚು!!? ಹೀಗಿರುವಾಗ ಕೇವಲ 2 - 3 ದಿನದಲ್ಲಿ ಆಗಮಿಸಿದ ಎಂಟು ಸಾವಿರದಷ್ಟು ಮಂದಿಯ ರಿಪೋರ್ಟ್ ಅಷ್ಟು ಸುಲಭವಾಗಿ ಸಿಕ್ಕೀತೆ?? ಕಾಯುವ, ಕೇಳುವ ತಾಳ್ಮೆ ಇರದ ನೀವು ವಾಚಾಮಗೋಚರ ಮಾತಾಡುತ್ತಿರುವುದು ತಪ್ಪು. CORONA ವಾರಿಯರ್ಸ್ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ತಿಂಗಳುಗಳಿಂದ ಸಂಪೂರ್ಣ ಕುಟುಂಬದಿಂದ ದೂರವುಳಿದವರಿದ್ದಾರೆ. ಅವರಿಗೂ ಭಾವನೆಗಳಿವೆ. ಬದುಕುವ ಬಯಕೆಗಳು ಜೀವಂತವಾಗಿವೆ. ಸಮುದಾಯಕ್ಕೆ ಸೋಂಕು ಹರಡಬಾರಡು, ಸೋಂಕಿತರನ್ನು ಗುಣಪಡಿಸಬೇಕೆಂದು ಕರ್ತವ್ಯವೇ ದೇವರೆಂಬಂತೆ ದುಡಿಯುತ್ತಿದ್ದಾರೆ. ಹೀಗಿರುವಾಗ ಅವರು ದುಡ್ಡು ಹೊಡೆಯಲು *+ve* ಎಂಬ ತಂತ್ರ ಅನುಸರಿಸುತ್ತಿದ್ದಾರೆಂಬ ನಿಮ್ಮ ದಾಖಲೆರಹಿತ ಆರೋಪಕ್ಕೆ ಏನನ್ನಬೇಕೋ ತಿಳಿಯುತ್ತಿಲ್ಲ!! *ಉಡುಪಿಯ 98% ಸೋಂಕಿತರು Asymptomatic!!* ಯಾವ ವ್ಯಕ್ತಿಯಲ್ಲೂ ಸೋಂಕಿನ ಲವಲೇಷ ಲಕ್ಷಣವೂ ಕಾಣಿಸಿಲ್ಲ.
Asymptomatic ರೋಗಿಯೊಬ್ಬನ ಪ್ರತಿದಿನದ ಖರ್ಚು ಸರ್ಕಾರಿ ಲೆಕ್ಕಾಚಾರದಲ್ಲಿ 8000 ಸಾವಿರ, sensitive ಕೇಸುಗಳಲ್ಲಿ ಇನ್ನೂ ಹೆಚ್ಚು!! ಖಾಸಗಿ ಆಸ್ಪತ್ರೆಯಲ್ಲಾದರೆ Asymptomatic ವ್ಯಕ್ತಿಯ ದಿನವಹಿ ಖರ್ಚು ಅಂದಾಜು ಇಪ್ಪತ್ತು ಸಾವಿರ ಮೀರುತ್ತದೆ. Sensitive ಪ್ರಕರಣವಿದ್ದರೆ ಇನ್ನೂ ಹೆಚ್ಚು ವ್ಯಯಿಸಬೇಕಾಗುತ್ತದೆ.
ನೆಗೆಟಿವ್ ಇರುವವರನ್ನು ಪಾಸಿಟಿವ್ ಎಂದು ಸುಳ್ಳು ರಿಪೋರ್ಟ್ ಕೊಟ್ಟು ದುಡ್ಡುಮಾಡಲು ತಂತ್ರ ರೂಪಿಸಿದ್ದಾರೆಂದರೆ ನಂಬಲು ಹೇಗೆ ಸಾಧ್ಯ ಹೇಳಿ? ಅಷ್ಟು ಸುಲಭವಾಗಿ ಅದನ್ನೆಲ್ಲ ಮಾಡುವಂತಿದ್ದರೆ ಪತ್ರಿಕೆಗಳು, ಸುದ್ದಿ ಮಾಧ್ಯಮಗಳು ಕಣ್ಮುಚ್ಚಿ ಕುಳಿತುಬಿಡುತ್ತಿದ್ದವಾ?? ವ್ಯಕ್ತಿಯೊಬ್ಬನಿಗೆ ಸೋಂಕು ಇರುವುದು ಖಾತರಿಯಾದ ತಕ್ಷಣವೇ Lab ನಿಂದ, ಜಿಲ್ಲಾ call center ಗೆ ಮಾಹಿತಿ ರವಾನೆಯಾಗುತ್ತದೆ. ಅಲ್ಲಿಂದಲೇ ambulance ನ ವ್ಯವಸ್ಥೆ ಮಾಡುತ್ತಾರೆ.
ಇಷ್ಟೆಲ್ಲ ಆಗಿಯೂ ಕೂಡ ನಿಮಗೆ ನೆಮ್ಮದಿ ಇಲ್ಲವೆಂದಾದರೆ ವೈದ್ಯರಲ್ಲಿ ನಮ್ಮನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಿ ಅಂತ ಹೇಳಿ. ನಿಮ್ಮ ವರ್ತನೆಯಿಂದ ಬೇಸತ್ತ ಅವರು ಖಂಡಿತ ಕಳುಹಿಸುತ್ತಾರೆ!! +ve, -ve ನ ಅಸಲಿಯತ್ತಿನ ಪರಿಚಯ ಖಂಡಿತವಾಗಿಯೂ ಆಗುತ್ತದೆ. ಹಲವು ಜನರಲ್ಲಿ ರೋಗನಿರೋಧಕ ಶಕ್ತಿ (immunity power) ಉತ್ತಮವಾಗಿದ್ದು ಚೇತರಿಸಿಕೊಂಡಿದ್ದಾರೆ. ಅವರಲ್ಲಿ ಯಾವುದೇ ವ್ಯತ್ಯಾಸವಾಗಲಿಲ್ಲ. Asymptomatic ಆಗುವ ಬದಲು ಜೋರು ಹುಷಾರಿಲ್ಲದೆ *+ve* ಬಂದದ್ದಾಗಿದ್ದರೆ ಎಲ್ಲರೂ ಕಣ್ಮುಚ್ಚಿ ಒಪ್ಪಿಕೊಂಡಿಬಿಡುತ್ತಿದ್ದೀರಿ ಅನ್ನಿಸುತ್ತಿದೆ!? ಇನ್ನು, ಕೆಲವರು ಒಂದೆರಡು ದಿನಗಳಲ್ಲೇ ಡಿಸ್ಚಾರ್ಜ್ ಆಗಿದ್ದಾರೆ. ಅವರ ರಿಪೋರ್ಟ್ ಬರುವಾಗಲೇ ಕೆಲ ದಿನ ತಗುಲಿದೆ, ಮರು ಟೆಸ್ಟ್ ನಲ್ಲಿ *-ve* ಆಗಿದೆ. ಸೋಂಕಿತರೊಡನೆ ಇರುವುದು ಬೇಡವೆಂದು ಕಳುಹಿಸಿಕೊಡಲಾಗಿದೆ. *ದಿನಗಳೆದಂತೆ ವೈರಸ್ ಕೂಡ ತನ್ನ ಶಕ್ತಿಯನ್ನು, ಸೋಂಕು ಹರಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತದೆ. ಇಲ್ಲಿಯೂ ಹಾಗೇ ಆಗಿದೆ!!*
ಕೊರೋನಾ ಗೆಲ್ಲುವ ಶಕ್ತಿ ನಮ್ಮಲ್ಲೇ ಇದೆ. ಉತ್ತಮ ಆಹಾರ, ಸಾಮಾಜಿಕ ಅಂತರ, ಸಾಧ್ಯವಾದಷ್ಟು ಮನೆಯಲ್ಲೇ ಇರುವುದು, ಬಿಸಿನೀರು ಕುಡಿಯುವುದು, ಶುಚಿತ್ವನ್ನು ಪಾಲಿಸಿಕೊಳ್ಳುವುದು ಇತ್ಯಾದಿ. ಇನ್ನೂ ಕೆಲವರಿಗೆ ಕೊರೋನಾ ಸದ್ದಿಲ್ಲದೆ ಬಂದು ಹೋಗಿರಬಹುದು! ಏಕೆಂದರೆ CORONA ಜೊತೆ ಬದುಕಬೇಕಿದೆ ನಾವು!!!
DC, SP, DHO, ಪ್ರಮುಖ ವೈದ್ಯಾಧಿಕಾರಿಗಳು, ಪೊಲೀಸ್ ಸಿಬ್ಬಂದಿ, ನರ್ಸ್ಗಳು, ಆಶಾಕರ್ಯಕರ್ತೆಯರು ಹಾಗೂ ಕೊರೋನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಎಲ್ಲರೂ ಕೂಡ ಪ್ರಶಂಸಾರ್ಹರು, ಅಭಿನಂದನಾರ್ಹರೇ ಹೋರತು ಟೀಕಾಯೋಗ್ಯರಲ್ಲ!!
ಇವರೆಲ್ಲ ಸೇರಿ ದುಡ್ಡುಮಾಡಲು ರೂಪಿಸಿದ ಮಹಾಸಂಚು ಎಂಬಂತೆ ಆರೋಪಿಸುತ್ತಿರುವುದು ಅವರ ಆತ್ಮಸ್ಥೈರ್ಯ ಕುಗ್ಗಿಸುವ, ನೈತಿಕ ಬಲ ಕಡಿಮೆಮಾಡುವ, ಕರ್ತವ್ಯದಿಂದ ವಿಮುಖರಾಗುವಂತೆ ಮಾಡುವ ಹೀನ ನಡವಳಿಕೆ ಅಂತಲೇ ಭಾವಿಸಬೇಕಾಗುತ್ತದೆ. ಅವರನ್ನು ಗೌರವಿಸದಿದ್ದರೂ, ಪ್ರಶಂಶಿಸದಿದ್ದರೂ ಪರವಾಗಿಲ್ಲ ವೃತಾ ಆರೋಪಗಳನ್ನು ಮಾತ್ರ ಮಾಡಬೇಡಿ. ಅವರೆಲ್ಲರೂ ಸೇರಿ ಕರ್ತವ್ಯದಿಂದಲೇ ದೂರವುಳಿಯಲು ನಿರ್ಧರಿಸಿದರೆ ಇನ್ನಷ್ಟು ಪರುಣಾಮಗಳನ್ನು ಎದುರಿಸಬೇಕಾಗುತ್ತದೆ
ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ. 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ ಶಿವಮೊಗ್ಗದಲ್ಲಿ ಜೂ. 13 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.null
ಇನ್ನು ಬುಧವಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಿದೆ.
ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೆ ಔಷಧೀಯ ಸಸ್ಯಗಳನ್ನು ಕೂಡಾ ಬೆಳೆಸುತ್ತಿದ್ದರು. ಅವು ಅಲಂಕಾರ ಸಸ್ಯವಾಗಿ ಕಂಗೊಳಿಸುತ್ತಾ ಔಷಧಿಗೆ ಬಳಕೆಯಾಗುತ್ತಿತ್ತು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ. ಇದು ಹಿಂದೆ ಕಾಲರಾದಂತಹ ರೋಗವನ್ನೇ ಹತೋಟಿಗೆ ತರುವಂತಹ ಶಕ್ತಿಯನ್ನು ಹೊಂದಿತ್ತು ಎಂದರೆ ಅಚ್ಚರಿಯಾಗಬಹುದು.
ಇವತ್ತಿಗೂ ದೊಡ್ಡಪತ್ರೆ ಹೆಚ್ಚಿನ ಮನೆಗಳಲ್ಲಿ ಕಂಡು ಬರುತ್ತದೆ. ಇದನ್ನು ಸಾಂಬಾರ ಬಳ್ಳಿ, ಸಾವಿರ ಸಾಂಬಾರ(ಅಜವನದ ಎಲೆ), ಕರ್ಪೂರವಳ್ಳಿ ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ತೇವವಿರುವ ಮತ್ತು ಜವಳು ಮಣ್ಣಿನಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನೆಗಳಲ್ಲಿ ಹೂವಿನ ಕುಂಡದಲ್ಲಿಯೂ ಇದನ್ನು ಬೆಳೆಸಬಹಹುದು. ಎಲೆಗಳು ಹಸಿರಾಗಿ ದಪ್ಪವಾಗಿರುತ್ತದೆ. ಎಲೆಯಲ್ಲಿ ನೀರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಔಷಧೀಯ ಗುಣವಿದೆ.
ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ನೆಟ್ಟು ಬೆಳೆಸುವುದರಿಂದ ಏನು ಉಪಯೋಗ ಎಂಬುದನ್ನು ನೋಡುವುದಾದರೆ…
ಸಾಮಾನ್ಯವಾಗಿ ಮಕ್ಕಳಲ್ಲಿ ಕಂಡು ಬರುವ ಕಫ, ಉಬ್ಬಸ ನಿವಾರಣೆಗೆ ಬಳಸಬಹುದು. ಗಿಡದಿಂದ ಎಲೆಗಳನ್ನು ತೆಗೆದು ಚೆನ್ನಾಗಿ ತೊಳೆದು ಬೆಂಕಿಯಲ್ಲಿ ಬಾಡಿಸಿಕೊಂಡು ಮಕ್ಕಳ ಎದೆಗೆ ಶಾಖ ಕೊಡಬೇಕು ಅಥವಾ ದೊಡ್ಡಪತ್ರೆ ಎಲೆಯೊಂದಿಗೆ ತುಳಸಿ ಎಲೆಯನ್ನು ಅರೆದು ಅದರ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ.
ಇದೇ ರೀತಿ 4ರಿಂದ 5 ಎಲೆಗಳನ್ನು ಕೆಂಡದ ಮೇಲೆ ಬಾಡಿಸಿ ರಸವನ್ನು ತೆಗೆದು ಕುಡಿದರೆ ಜ್ವರ ಕಡಿಮೆಯಾಗುತ್ತದೆ. ಅಥವಾ ಮಕ್ಕಳಿಗೆ ಜ್ವರ ಬಂದಾಗ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಶೀತದಿಂದಾಗಿ ಮಕ್ಕಳಿಗೆ ಮಲಬದ್ದತೆಯಾದರೆ ಎಲೆಗಳ ಸರವನ್ನು ಜೇನುತುಪ್ಪ ಬೆರೆಸಿ ಕುಡಿಸಿದರೆ ಮಲಬದ್ದತೆ ನಿವಾರಣೆಯಾಗುತ್ತದೆ. ಅರಸಿನ ಕಾಮಾಲೆ ರೋಗವುಳ್ಳವರು 10(ಹತ್ತು) ದಿನಗಳ ಕಾಲ ದೊಡ್ಡಪತ್ರೆ ಎಲೆಗಳನ್ನು ಆಹಾರ ರೂಪದಲ್ಲಿ ಸೇವಿಸಿದರೆ ರೋಗ ಗುಣವಾಗುತ್ತದೆ. ಕಂಬಳಿ ಹುಳುವಿನಂತಹ ಕೀಟಗಳು ಕಚ್ಚಿದ ಜಾಗಕ್ಕೆ ಎಲೆಯನ್ನು ಜಜ್ಜಿ ಉಜ್ಜಿದರೆ ಉರಿ ಕಡಿಮೆಯಾಗುವುದು.
ಎಲೆಯನ್ನು ಉಪ್ಪಿನೊಂದಿಗೆ ನೆಂಚಿಕೊಂಡು ತಿಂದರೆ ಜೀರ್ಣಶಕ್ತಿ ಹೆಚ್ಚುತ್ತದೆ. ದೊಡ್ಡಪತ್ರೆ ಎಲೆಯನ್ನು ಜಜ್ಜಿ ಆದರ ವಾಸನೆ ಸೇವಿಸಿದರೆ ಕಟ್ಟಿದ ಮೂಗಿನಿಂದ ನಿವಾರಣೆಯನ್ನು ಹೊಂದಬಹುದು. ಗ್ಯಾಸ್ಟ್ರಿಕ್ ತಡೆಯುತ್ತದೆ. ದೇಹದಿಂದ ವಿಷವನ್ನು ಹೊರ ಹಾಕುತ್ತದೆ. ರಕ್ತವನ್ನು ಶುದ್ಧೀಕರಿಸುತ್ತದೆ.
ದೊಡ್ಡಪತ್ರೆ ಎಲೆಯನ್ನು ಕಿವುಚಿ ರಸ ತೆಗೆದು, ಚರ್ಮದ ಸೋಂಕು ಅಥವಾ ಕೀಟ ಕಡಿತದ ಜಾಗಕ್ಕೆ ಲೇಪಿಸಿ. ಇದರಿಂದ ಉರಿ, ಬಾವು ಮತ್ತು ತುರಿಕೆ ಕೂಡಲೇ ಕಡಿಮೆಯಾಗುವುದು.
ಇನ್ನು ಎಲೆಗಳ ಚಟ್ನಿ, ತಂಬುಳಿ ಮೊದಲಾದವುಗಳು ಸೇವಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಒಟ್ಟಿನಲ್ಲಿ ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಹಲವು ರೀತಿಯ ಉಪಯೋಗ ಪಡೆಯಬಹುದು ಎಂಬುದರಲ್ಲಿ ಎರಡು ಮಾತಿಲ್ಲ
ನೀವು ನಿಮ್ಮ ಸ್ನೇಹಿತರಿಂದಲೂ ಬೆಂಬಲವನ್ನು ಪಡೆಯುತ್ತೀರಿ. ಇದು ನಿಮ್ಮನ್ನು ಮುಂದುವರಿಯಲು ಪ್ರೇರೇಪಿಸುತ್ತದೆ.
ವೃಷಭ
ಬಹಳಷ್ಟು ಅನುಕೂಲಕರವಾಗಲಿದೆ. ಮತ್ತು ಹಣದ ಗಳಿಕೆಯ ಮೂಲಗಳು ನಿರಂತರವಾಗಿರುತ್ತವೆ. ಇದರಿಂದ ನೀವು ಸಂತೋಷವಾಗಿರುತ್ತೀರಿ
ಕರ್ಕಾಟಕ
ವೃತ್ತಿಪರ ಜೀವನದಲ್ಲಿ ಬದಲಾವಣೆಗಳು ಬರುತ್ತವೆ. ಬಹುಶಃ ಸ್ಥಳಾಂತರವು ಇರಬಹುದು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಈ ವರ್ಷ ಸಾಧನೆಗಳಿಂದ ತುಂಬಿರಬಹುದು.
ಮಿಥುನ
ನೀವು ತುಂಬಾ ಅದೃಷ್ಟಶಾಲಿಯಾಗುತ್ತೀರಿ ಮತ್ತು ಉತ್ತಮ ಆರೋಗ್ಯವನ್ನು ಆನಂದಿಸುವಿರಿ. ನಿಮ್ಮ ದಿನಚರಿಯನ್ನು ನೀವು ನಿಯಮಿತವಾಗಿ ಇಟ್ಟುಕೊಳ್ಳಬೇಕು.
ಸಿಂಹ
ಪ್ರೀತಿಯ ಜೀವನವು ಇನ್ನಷ್ಟು ಆಳವಾಗಲಿದೆ ನಿಮ್ಮ ಸಂಗಾತಿಗೆ ನೀವು ಹೆಚ್ಚು ನಿಷ್ಠರಾಗಿರುತ್ತೀರಿ. ನಿಮ್ಮ ಪ್ರೀತಿ ಸ್ಥಿರವಾಗಿರುತ್ತದೆ ಮತ್ತು ನಿಮ್ಮ ಪ್ರಿಯತಮೆಯೊಂದಿಗೆ ನೀವು ಶಾಂತ ಕ್ಷಣಗಳನ್ನು ಆನಂದಿಸುವಿರಿ.
ಕನ್ಯಾ
ವಿವಾಹಿತರಿಗೆ ಸಾಧನೆಗಳಿಂದ ತುಂಬಿರಬಹುದು. ನಿಮ್ಮ ಜೀವನ ಸಂಗಾತಿಗೆ ಅವರ ಕೆಲಸದ ಸ್ಥಳದಲ್ಲಿ ಯಾವುದೇ ಪ್ರಮುಖ ಯಶಸ್ಸನ್ನು ಪಡೆಯಬಹುದು. ಸ್ವಲ್ಪ ಸಮಯದವರೆಗೆ ಪರಸ್ಪರ ದೂರವಿರಬೇಕಾಗಬಹುದು.
ತುಲಾ
ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ನೀವು ನಿಮ್ಮ ಆರ್ಥಿಕ ಜೀವನಬದಲಾಯಿಸಬೇಕಾದ ಅಗತ್ಯವಿರಬಹುದು ಏಕೆಂದರೆ ಇದು ಏರಿಳಿತಗಳಿಂದ ತುಂಬಿರಬಹುದು.
ವೃಶ್ಚಿಕ
ಕುಟುಂಬದಲ್ಲಿ ಹೊಸ ಸದಸ್ಯನು ಬರಬಹುದು. ನೀವು ಕುಟುಂಬವನ್ನು ಒಟ್ಟಿಗೆ ಇರಿಸಲು ಬಯಸಿದರೆ ನೀವು ಕೆಲವು ರಾಜಿ ಮಾಡಿಕೊಳ್ಳಬೇಕು.
ಧನು
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಯಶಸ್ಸು ಪಡೆಯುವುದರಿಂದ ನಿಮ್ಮ ಸ್ಥೈರ್ಯ ಹೆಚ್ಚಾಗುತ್ತದೆ. ನೀವು ನಿಮ್ಮ ಆರ್ಥಿಕ ಜೀವನಬದಲಾಯಿಸಬೇಕಾದ ಅಗತ್ಯವಿರಬಹುದು.
ಮಕರ
ನಿಮ್ಮ ವೃತ್ತಿಜೀವನಕ್ಕೆ ಸಾಮಾನ್ಯವಾಗಿ ಶುಭವಾಗಿರುತ್ತದೆ. ನೀವು ಕೆಲವು ದೊಡ್ಡ ಉದ್ಯಮಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಕೆಲಸ ಮಾಡಬಹುದು.
ಕುಂಭ
ಆರ್ಥಿಕ ಭಾಗದಲ್ಲಿ ನೀವು ಸ್ವಲ್ಪ ಕಷ್ಟಪಡಬೇಕಾಗಬಹುದು ಮತ್ತು ನಿಮ್ಮ ಖರ್ಚುಗಳು ಹೆಚ್ಚಾಗುತ್ತವೆ. ಆದ್ದರಿಂದ ನಿಮ್ಮ ಉಳಿತಾಯದತ್ತ ಗಮನ ಹರಿಸಿ ಮತ್ತು ಹಣಕ್ಕೆ ಸಂಬಂಧಿಸಿದ ಹೂಡಿಕೆಯನ್ನು ಬುದ್ಧಿವಂತಿಕೆಯಿಂದ ಮಾಡಿ.
ಮೀನ
ನೀವು ಪಿತ್ತರಸಕ್ಕೆ ಸಂಬಂಧಿಸಿದ ದೈಹಿಕ ಸಮಸ್ಯೆಗಳನ್ನು ಹೊಂದುವ ಸಾಧ್ಯತೆಯಿದೆ. ಪ್ರೀತಿಯ ಜೀವನದಲ್ಲಿ ಅನೇಕ ದೀರ್ಘಕಾಲೀನ ಬದಲಾವಣೆಗಳಾಗಬಹುದು.
ಉಡುಪಿ ಜೂನ್ 10 : ಜಿಲ್ಲೆಗೆ ಮಹಾರಾಷ್ಠçದಿಂದ ಬರುವವರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್ ಮಾಡುವ ಕುರಿತಂತೆ ಈಗಾಗಲೇ ಸರಕಾರದ ಆಧೇಶವಾಗಿದ್ದು, ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಎಪಿಡಮಿಕ್ ಆಕ್ಟ್ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ, ನೂತನ ಕ್ವಾರಂಟೈನ್ ನಿಯಮದ ಅನುಷ್ಠಾನ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾರಾಷ್ಠçದಿಂದ ಬರುವವರನ್ನು 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಿ ಆ ಮನೆಯನ್ನು ಸೀಲ್ ಡೌನ್ ಮಾಡಬೇಕಾಗಿದ್ದು, ಮನೆಯ ಸುತ್ತ ಟೇಪ್ ಹಾಕಬೇಕು ಹಾಗೂ ಮನೆಗೆ ಸ್ಟಿಕರ್ ಅಳವಡಿಸಬೇಕು, ಪಕ್ಕದ ಮನೆಯವರಿಎ ಈ ಬಗ್ಗೆ ಮಾಹಿತಿ ನೀಡುವುದಲ್ಲದೇ ಕ್ವಾರಂಟೈನ್ ನಲ್ಲಿರುವರು ನಿಯಮ ಉಲ್ಲಂಘಿಸಿ ಹೊರಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ತಿಳಿಸಬೇಕು, ಸಂಬAದಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಂದಾಯ ನಿರೀಕ್ಷಕರು, ಬಿಲ್ ಕಲೆಕ್ಟರ್ ಮತ್ತು ಪಿಡಿಓ ಗಳ ತಂಡ ಪರಿಶೀಲನೆ ನಡೆಸಬೇಕು, ಈ ಕುರಿತಂತೆ ಎಲ್ಲಾ ತಹಸೀಲ್ದಾರ್ ಗಳು ಮತ್ತು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಪ್ರತಿಯೊಂದು ಗ್ರಾಮಗಳಿಗೆ ತಂಡವನ್ನು ರಚಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನಿಯಮ ಉಲ್ಲಂಘಿಸುವವರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸೀಲ್ಡೌನ್ ಮಾಡಿದ ಮನೆಯ ನಿವಾಸಿಗಳು 14 ದಿನಕ್ಕೆ ಬೇಕಾಗುವ ದಿನಸಿ ಸಾಮಗ್ರಿಗಳನ್ನು ಮೊದಲೇ ಖರೀದಿಸಿರಬೇಕು, ಹಾಲು ಮತ್ತು ತರಕಾರಿಯನ್ನು ಸಂಬಂದಪಟ್ಟ ನಿರ್ದಿಷ್ಟ ಅಂಗಡಿಯಿಂದ ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳ ತಂಡ ಪ್ರತೀ ದಿನ ಈ ಮನೆಗಳಿಗೆ ಭೇಟಿ ನೀಡಿ ,ಗ್ರಾಮ ಪಂಚಾಯತ್ ನಲ್ಲಿನ ತಂಡ ಭೇಟಿ ಪರಿಶೀಲನೆ ನಡೆಸಿದ ಕುರಿತು ತಪಾಸಣೆ ನಡೆಸಿ, ಅದೇ ದಿನ ಸಂಜೆಯೊಳಗೆ ವರದಿ ನೀಡಬೇಕು ಎಂದು ತಿಳಿಸಿದರು. ಕ್ವಾರಂಟೈನ್ ಗೆ ಒಳಪಡುವವರ ಕೈ ಗೆ ಕಡ್ಡಾಯವಾಗಿ ಸೀಲ್ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕ್ವಾರಂಟೈನ್ ಸೀಲ್ ಇರುವವರನ್ನು ಮಾಲ್ ಗಳು, ಹೋಟೆಲ್ ಗಳು, ದೇವಸ್ಥಾನದ ಒಳಗಡೆ ಪ್ರವೇಶ ನೀಡಿದಲ್ಲಿ ಸಂಬಂದಪಟ್ಟ ಸಂಸ್ಥೆಗಳ ಮುಖ್ಯಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು, ಎಲ್ಲಾ ಸಂಸ್ಥೆಗಳು ತಮ್ಮ ಪ್ರವೇಶ ದ್ವಾರದಲ್ಲೇ ಇದನ್ನು ಪರೀಕ್ಷಿಸಿ ಅಂತಹವರು ಕಂಡುಬಂದಲ್ಲಿ ಕೂಡಲೇ 100 ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಜಿಲ್ಲೆಗೆ ಹೊರರಾಜ್ಯದಿಂದ ಬರುವವರು ಕಡ್ಡಾಯವಾಗಿ ಸೇವಾ ಸಿಂಧು ಆಪ್ ನಲ್ಲಿ ನೊಂದಾಯಿಸಿಕೊಂಡು ಬರುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ಸಾಮಾಜಿಕ ಅಂತರ ಉಲ್ಲಂಘನೆ, ಮಾಸ್ಕ್ ಧರಿಸದೇ ಇರುವವರಿಗೆ ಕಟ್ಟುನಿಟ್ಟಾಗಿ ದಂಡ ವಿಧಿಸುವಂತೆ ಹಾಗೂ ಬಸ್ ಗಳಲ್ಲಿ ನಿಗಧಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದು, ಈ ಕುರಿತಂತೆ ಸಂಬಂದಪಟ್ಟ ಬಸ್ ಮಾಲೀಕರು,ಡ್ರೈವರ್ ಮತ್ತು ಕಂಡಕ್ಟರ್ ವಿರುದ್ದ ತಕ್ಷಣದಿಂದಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಎಎಸ್ಪಿ ಕುಮಾರ ಚಂದ್ರ, ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗಳು ಕ್ವಾರಂಟೈನ್ ವ್ಯವಸ್ಥೆಯಲ್ಲಿ, ಹೋಮ್ ಕ್ವಾರೆಂಟೈನ್ ನಿಂದ ಸಾಂಸ್ಥಿಕ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ ನಿಂದ ಹೋಮ್ ಕ್ವಾರೆಂಟೈನ್ಗೆ ಬದಲಾವಣೆ ಮಾಡುವ ಅಧಿಕಾರವನ್ನು ಸರ್ಕಾರ ನೀಡಿದ್ದು, ಅದರಂತೆ , ಉಡುಪಿ ಜಿಲ್ಲೆಯಲ್ಲಿ ನೂತನ ಕ್ವಾರಂಟೈನ್ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು ಅವರು ಬುಧವಾರ ಜಿಲ್ಲಾಪಂಚಾಯತ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಪಾಲಿಸಲು ಸಿದ್ದತೆ ನಡೆಸಿದ್ದು, ಉಡುಪಿ ಜಿಲ್ಲೆಗೆ ಬೇರೆ ರಾಜ್ಯದಿಂದ ಆಗಮಿಸುವ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಮಾಡಲಾಗುತ್ತಿದ್ದು, ಹೋಮ್ ಕ್ವಾರಂಟೈನ್ ನಲ್ಲಿರುವವರ ಮನೆಬಾಗಿಲಿಗೆ ಭಿತ್ತಿಪತ್ರವನ್ನು ಅಂಟಿಸಲಾಗುವುದು, ನೆರೆಹೊರೆಯ ಮನೆಗೆ ಮಾಹಿತಿಯನ್ನು ನೀಡಲಾಗುತ್ತದೆ, ಗ್ರಾಮೀಣ ಪ್ರದೇಶದಲ್ಲಿ . ಕ್ವಾರಂಟೈನ್ಗೆ ಬರುವವರ ಬಗ್ಗೆ ಗ್ರಾಮ ಪಂಚಾಯತಿ ನಿಗಾ ಇರಿಸಲು ಸೂಚಿಸಿದ್ದು, ಗ್ರಾಮ ಪಂಚಾಯತ್ ನಲ್ಲಿ ಆಯ್ಕೆ ಮಾಡಿರುವ ಸಿಬ್ಬಂದಿಗಳು ಕ್ವಾರಂಟೈನ್ನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕ್ವಾರಂಟೈನ್ ವಾಚ್ ಆಪ್ ನಲ್ಲಿ ಬೇಟಿನೀಡಿದ ಮಾಹಿತಿಯನ್ನು ನೀಡಬೇಕು. ಪ್ರತೀ ಗ್ರಾಮದಲ್ಲಿ ಮೇಲ್ವಿಚಾರಣೆಗಾಗಿ 3 ಜನರ ತಂಡವನ್ನು ನೇಮಕ ಮಾಡಲಾಗಿದೆ.ಇವರು ಮನೆಗಳಿಗೆ ಬೇಟಿ ನೀಡಿ ಪ್ರತಿದಿನ ವರದಿಯನ್ನು ನೀಡಬೇಕು , ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದರೆ ಪ್ಲೆöÊಯಿಂಗ್ ಸ್ಕಾ÷್ವಡ್ ತಂಡದವರು ಎಫ್ ಐ ಆರ್ ದಾಖಲೆ ಮಾಡಿ, ಅವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ. ಪ್ರತೀ ತಾಲೂಕಿನಲ್ಲಿ ತಲಾ ಎರಡು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಮೀಸಲಿರಿಸಿದ್ದು, ಅಗತ್ಯವಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಗೆ ಸಹ ಅವಕಾಶವಿದೆ ಎಂದು ಡಿಸಿ ಹೇಳಿದರು. ಕ್ವಾರಂಟೈನ್ ವಾಚ್ ಮೂಲಕ ವ್ಯಕ್ತಿಗಳ ತಾಪಮಾನ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಲ್ಸ್ ಆಕ್ಸೂಮೀಟರ್ ರಿಡಿಂಗ್ ಮಾಡಲು ಸೂಚಿಸಲಾಗಿದೆ. ವಿಶೇಷ ವರ್ಗದಕ್ಕೆ ಸೇರಿದ 10 ವರ್ಷದೊಳಗಿನ ಮಕ್ಕಳು,ಗರ್ಭಿಣಿಯರು, 60 ವರ್ಷ ಮೇಲ್ಪಟ್ಟವರಲ್ಲಿ ಆಕ್ಸಿಜನ್ ಕೊರತೆ ಕಂಡುಬAದಲ್ಲಿ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಡಿಸಿ ಹೇಳಿದರು. ಟಾಸ್ಕ್ ಪೊರ್ಸ್ ಕಮಿಟಿಗಳಾಗಿ ಗ್ರಾಮೀಣ ಪ್ರದೇಶದಲ್ಲಿ ಮಾಡಲಾಗಿದೆ. ಹಾಗೆಯೇ ನಗರ ಪ್ರದೇಶಗಳಲ್ಲಿ ವಾರ್ಡ್ ವೈಸ್ ಗಳಾಗಿ ನೇಮಕ ಮಾಡಲಾಗಿದೆ. ಸಿಲ್ ಡೌನ್ ಆದ ಪ್ರದೇಶದಲ್ಲಿ ಕಂದಾಯ,ಆರೋಗ್ಯ,ಪೋಲಿಸ್ ಅಧಿಕಾರಿಗಳು ಬೇಟಿ ನೀಡಿ ಮಾಹಿತಿಯನ್ನು ನೀಡುತ್ತಾರೆ. ಹೋಮ್ ಕ್ವಾರಂಟೈನ್ ನಲ್ಲಿ ಸೀಲ್ ಹಾಕಿದವರು ಅನಗತ್ಯವಾಗಿ ತಿರುಗಾಡುವುದು ಕಂಡು ಬಂದಲ್ಲಿ, ಸಾರ್ವಜನಿಕರು 100 ದೂರವಾಣೆ ಸಂಖ್ಯೆಗೆ ಕರೆಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸೇವಾಸಿಂಧು ಮೂಲಕ ಮಹಾರಾಷ್ಟçದಿಂದ ಬರುವವರ ಪಾಸ್ ಗಳನ್ನು ಅನುಮೋದಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದ್ದು, ಅವರು ನಿಗದಿತ ದಿನಾಂಕ ಆಯ್ಕೆಮಾಡಿ ಬರಬಹುದಾಗಿದೆ, ಜಿಲ್ಲೆಗೆ ಹೊರ ರಾಜ್ಯದಿಂದ ಬರುವವರು, ಜಿಲ್ಲೆಯಲ್ಲಿ ಆರಂಭಿಸಿರುವ 7 ಜಿಲ್ಲಾ ವರದಿ ಕೇಂದ್ರಗಳಲ್ಲಿ ತಮ್ಮ ಸಂಪೂರ್ಣ ವಿವರ ನೀಡುವಂತೆ ಸೂಚಿಸಿದರು. ಕೆಲವೊಂದು ಕಡೆಗಳಲ್ಲಿ ಶಾಲಾ ಕ್ವಾರಂಟೈನ್ ಕೇಂದ್ರಗಳಾಗಿ ಮಾಡಲಾಗಿದ್ದು ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ.ಶಾಲೆ ಕೊಠಡಿಗಳನ್ನು ರೋಗ ನಿರೋಧಿಕರಿಸಿ ಸ್ವಚ್ಚಗೊಳಿಸಲಾಗಿದೆ. ಪರೀಕ್ಷಗೆ 3 ದಿನಗಳ ಮುನ್ನ ಹಾಗೂ ಪ್ರತೀ ಪರೀಕ್ಷೆಯ ನಂತರ ಮತ್ತೊಂದು ಪರೀಕ್ಷೆಗೆ ಕೊಠಡಿಯನ್ನು ರೋಗ ನಿರೋಧಿಕರಿಸಿ ಸ್ವಚ್ಚಗೊಳಿಸಲಾಗುವುದು, ಪೋಷಕರು ಮತ್ತು ವಿದ್ಯಾರ್ಥಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಅವರ ಸುರಕ್ಷತೆಗೆ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.
ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಅವರು ಮಂಗಳವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ , ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ವ ಸಿದ್ದತೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಶಾಲಾ ಶೈಕ್ಷಣಿಕ ಅವಧಿ ಕಡಿಮೆಯಾಗಲಿದ್ದು, ಇದಕ್ಕಾಗಿ ಶಾಲಾ ಪಠ್ಯವನ್ನು ಕಡಿಮೆಗೊಳಿಸುವ ಕುರಿತಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ಮುಂದಿನ ತರಗತಿಗೆ ಅಗತ್ಯವಿರುವ ಪಠ್ಯದ ಕೊರತೆಯಾಗದಂತೆ , ಸೀಮಿತ ಅವಧಿಯೊಳಗೆ ಅತ್ಯಗತ್ಯ ಇರುವ ಪಠ್ಯ ಮಾತ್ರ ಒಳಗೊಳ್ಳುವಂತೆ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಕೋವಿಡ್-19 ಅವಧಿಯಲ್ಲಿ ರಾಜ್ಯದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಚಂದನ ವಾಹಿನಿಯ ಮೂಲಕ ಪರೀಕ್ಷೆಗಾಗಿ ಪಠ್ಯದ ಪುರ್ನ ಮನನ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ರಾಜ್ಯದಲ್ಲಿ ಶಿಕ್ಷಣ ಇಲಾಖೆಗೆ ಸಂಬAದಿಸಿದAತೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಪತ್ಯೇಕ ಟಿವಿ ಚಾನೆಲ್ ಆರಂಭಿಸುವ ಚಿಂತನೆ ಇದ್ದು, ಈ ಕುರಿತಂತೆ ಕೇಂದ್ರ ಸಚಿವ ಅಜಿತ್ ಜಾವೆಡ್ಕರ್ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು. ಕೋವಿಡ್ ಅವಧಿಯಲ್ಲಿ ರಾಜ್ಯದ ಶಿಕ್ಷಕರು ಕಾನನ ಶಾಲೆ, ವಠಾರ ಶಾಲೆ, ಓಣಿ ಶಾಲೆ, ಓದಿನ ಮನೆ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಪಾಠ ಮಾಡಿದ್ದು, ಇದು ಶಿಕ್ಷಕರಲ್ಲಿನ ಸೃಜನ ಶೀಲತೆ, ಕತೃತ್ವ ಶಕ್ತಿ ಗುಣಗಳನ್ನು ತೋರಿಸುತತದೆ ಈ ಕುರಿತಂತೆ ಎಲ್ಲಾ ಶಿಕ್ಷಕರಿಗೆ ಧನ್ಯವಾದ ತಿಳಿಸುವುದಾಗಿ ಸಚಿವರು ಹೇಳಿದರು. ರಾಜ್ಯದಲ್ಲಿ ಎಸ್.ಎಎಸ್.ಎಲ್.ಸಿ ಪರೀಕ್ಷೆ ನಡೆಸಲು ಸಂಬAದಿಸಿದAತೆ , ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತು ಹೈಕೋರ್ಟ್ ಗೆ ಸಲ್ಲಿಸಿರುವ ವರದಿಯಂತೆ, ಥರ್ಮಲ್ ಸ್ಕಾö್ಯನರ್, ಮಾಸ್ಕ್, ಸ್ಯಾನಿಟೈಜರ್, ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷಾ ವಿಧಾನಗಳಿಗೆ ಯಾವುದೇ ಕುಂದು ಬಾರದ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಗರಿಷ್ಠ ಸುರಕ್ಷತೆಗೆ ಆದ್ಯತೆ ನೀಡಿದೆ, ಪರೀಕ್ಷೆ ಕುರಿತಂತೆ ಮಕ್ಕಳಿಗೆ ಹಿತಕರ ವಾತಾವರಣ ನಿರ್ಮಿಸಿ, ಯಾವುದೇ ಆತಂಕಕ್ಕೆ ಒಳಗಾಗದಂತೆ ಪರೀಕ್ಷೆ ಬರೆಯಲು ಶಿಕ್ಷಕರು ಪ್ರೋತ್ಸಾಹ ತುಂಬುವAತೆ ಸಚಿವ ಸುರೇಶ್ ಕುಮಾರ್ ಹೇಳಿದರು. ರಾಜ್ಯದಲ್ಲಿ ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರುವ ಕಾರ್ಯಕ್ರಮವನ್ನು ಅಭಿಯಾನದ ರೀತಿಯಲ್ಲಿ ನಡೆಸಲಾಗುವುದು, ಪ್ರಸಕ್ತ ವರ್ಷದಲ್ಲಿ ಶಾಲಾ ಮಕ್ಕಳ ಹಾಜರಾತಿ ಗಣನೆಗೆ ತೆಗೆದುಕೊಂಡು ಶಾಲೆಗಳಲ್ಲಿನ ಹೆಚ್ವುವರಿ ಶಿಕ್ಷಕರ ವರ್ಗಾವಣೆ ಮಾಡುವುದಿಲ್ಲ ಎಂದು ಸಚಿವರು ತಿಳಿಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಖಾಸಗಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು, ಜಿಲ್ಲಾ ಕೇಂದ್ರಕ್ಕೆ ಆಗಮಿಸುವವರಿಗೆ, ಜಿಲ್ಲೆಯಲ್ಲಿ ಉಳಿಯಲು ಹಾಸ್ಟಲ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಸಭೆಯಲ್ಲಿ , ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಶಾಸಕರಾದ ರಘುಪತಿಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ,ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ದ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಸೆಲ್ವಮಣಿ, ಉ.ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ರೋಶನ್ , ಉಡುಪಿ ಎಸ್ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.
ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಿ ಮೂರು ನಾಲ್ಕು ತಿಂಗಳೇ ಕಳೆಯುತ್ತಿದೆ. ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ಘೋಷಣೆಯಿಂದಾಗಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಾದ್ಯವಾಗಿರಲಿಲ್ಲ. ಹೀಗಾಗಿ ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕೋರಿಕೊಂಡಿದ್ದರು. ಇದೀಗ ಡಿಕೆ ಶಿವಕುಮಾರ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರ, ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ.
ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಅವಕಾಶ ಮಾಡಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಪತ್ರ ಬರೆದು ಕೋರಿಕೊಂಡಿದ್ದರು. ಆದ್ರೇ ರಾಜ್ಯ ಸರ್ಕಾರ ಇದೀಗ ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುವಂತ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡುವುದಕ್ಕೆ ಬ್ರೇಕ್ ಹಾಕಿದೆ.ಈ ಹಿಂದೆ ಜೂನ್ 08ರಂದು ನಡೆಸಲು ಅನುಮತಿ ಕೇಳಿದಾಗಲೂ ಸರಕಾರ ಅನುಮತಿ ನೀಡಲು ನಿರಾಕರಿಸಿತ್ತು.