ಡಬಲ್ ಎಂಜಿನ್ ಸರಕಾರದ ಸಾಧನೆಗೆ ಬೆಚ್ಚಿಬಿದ್ದ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ಖಚಿತ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶದ ಆಂತರಿಕ ಹಾಗೂ ಬಾಹ್ಯ ಭದ್ರತೆ, ಯಶಸ್ವಿ ಕೋವಿಡ್ ನಿರ್ವಹಣೆ, ಪಿಎಫ್ಐ ನಂತಹ ಮತಾಂಧ ದೇಶದ್ರೋಹಿ ಜಿಹಾದಿ ಸಂಘಟನೆಗಳ ನಿಷೇಧ, ಬೆಂಗಳೂರಿನಲ್ಲಿ ಎನ್ಐಎ ಸ್ಥಾಪನೆ ಸಹಿತ ಆಯುಷ್ಮಾನ್ ಭಾರತ್, ಕೃಷಿ ಸಮ್ಮಾನ್, ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮೀ ಮುಂತಾದ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರಕಾರದ ಸಾಧನೆಯನ್ನು ಕಂಡು ಬೆಚ್ಚಿ ಬಿದ್ದಿರುವ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸಹಿತContinue reading “ಡಬಲ್ ಎಂಜಿನ್ ಸರಕಾರದ ಸಾಧನೆಗೆ ಬೆಚ್ಚಿಬಿದ್ದ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ಖಚಿತ: ಕುಯಿಲಾಡಿ ಸುರೇಶ್ ನಾಯಕ್”

ಉಡುಪಿ ಜಿಲ್ಲೆಯ ಗ್ರೌಂಡ್ ರಿಪೋರ್ಟ್ ಅರಿವಿಲ್ಲದ ಬಿ.ಕೆ. ಹರಿಪ್ರಸಾದ್ ವೃಥಾ ಪ್ರಲಾಪ; ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ನಿಶ್ಚಿತ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕರಾವಳಿ ಕರ್ನಾಟಕದ ಬಿಜೆಪಿಯ ಭದ್ರ ಕೋಟೆ ಎನಿಸಿರುವ ಉಡುಪಿ ಜಿಲ್ಲೆಯ ಗ್ರೌಂಡ್ ರಿಪೋರ್ಟ್ ಬಗ್ಗೆ ಎಳ್ಳಷ್ಟೂ ಅರಿವಿಲ್ಲದ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ವೃಥಾ ಪ್ರಲಾಪದಲ್ಲಿ ತೊಡಗಿರುವುದು ಹಾಸ್ಯಾಸ್ಪದ. ‘ವ್ಯಕ್ತಿಗಿಂತ ಪಕ್ಷ ಮೇಲು’ ಎಂಬ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇರಿಸಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿContinue reading “ಉಡುಪಿ ಜಿಲ್ಲೆಯ ಗ್ರೌಂಡ್ ರಿಪೋರ್ಟ್ ಅರಿವಿಲ್ಲದ ಬಿ.ಕೆ. ಹರಿಪ್ರಸಾದ್ ವೃಥಾ ಪ್ರಲಾಪ; ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ನಿಶ್ಚಿತ: ಕುಯಿಲಾಡಿ ಸುರೇಶ್ ನಾಯಕ್”

ಅಂಬೇಡ್ಕರ್ ತತ್ವಾದರ್ಶಗಳು ಸರ್ವಕಾಲಿಕ ಸತ್ಯ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶದ ಎಲ್ಲಾ ಆಗು ಹೋಗುಗಳಿಗೆ ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚನೆಯಾಗಿರುವ ಸಂವಿಧಾನವೇ ಸಾಕ್ಷಿ. ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನವನ್ನು ಅರಿತುಕೊಂಡು ಭಾರತಕ್ಕೆ ಬೇಕಾದ ಶ್ರೇಷ್ಠ ಸಂವಿಧಾನವನ್ನು ರಚನೆ ಮಾಡಿದ ಕೀರ್ತಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ. ಡಾ! ಬಿ. ಆರ್. ಅಂಬೇಡ್ಕರ್ ರವರ ಉನ್ನತ ಮೌಲ್ಯಗಳು, ತತ್ವಾದರ್ಶಗಳು ಸರ್ವಕಾಲಿಕ ಸತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿContinue reading “ಅಂಬೇಡ್ಕರ್ ತತ್ವಾದರ್ಶಗಳು ಸರ್ವಕಾಲಿಕ ಸತ್ಯ : ಕುಯಿಲಾಡಿ ಸುರೇಶ್ ನಾಯಕ್”

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಒಂದು ಕ್ಷೇತ್ರಕ್ಕೆ ಒಂದೇ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ರಾ ಮಾಜಿ ಸಚಿವ ಈಶ್ವರಪ್ಪ? ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.ಕಳೆದContinue reading “ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ”

ರಾಜಸ್ಥಾನದಲ್ಲಿ ನೀಡಿದ ಗ್ಯಾರಂಟಿಗೆ ಕೈ ಕೊಟ್ಟ ಕಾಂಗ್ರೆಸ್ ಕರ್ನಾಟಕದಲ್ಲಿ ನಕಲಿ ಗ್ಯಾರಂಟಿ ಕಾರ್ಡ್ ಹಂಚಿ ಜನರ ಕಿವಿಗೆ ಹೂ ಇಡಲು ಹೊರಟಿರುವುದು ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಧಿಕಾರದ ಅವಧಿ ಮುಗಿಯುತ್ತಾ ಬಂದಿರುವ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಚುನಾವಣಾ ಸಂದರ್ಭದಲ್ಲಿ ನೀಡಿದ ಪೊಳ್ಳು ಭರವಸೆಯ ಗ್ಯಾರಂಟಿಯನ್ನು ಪೂರೈಸದೆ ಕೈ ಕೊಟ್ಟಿರುವ ಕಾಂಗ್ರೆಸ್ ಕರ್ನಾಟಕದಲ್ಲೂ ಅಧಿಕಾರದ ಹಗಲು ಕನಸಿನಿಂದ ನಕಲಿ ಗ್ಯಾರಂಟಿ ಕಾರ್ಡ್ ಹಂಚುತ್ತಾ ಜನರ ಕಿವಿಗೆ ಹೂ ಇಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್’ ತತ್ವದಡಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತುContinue reading “ರಾಜಸ್ಥಾನದಲ್ಲಿ ನೀಡಿದ ಗ್ಯಾರಂಟಿಗೆ ಕೈ ಕೊಟ್ಟ ಕಾಂಗ್ರೆಸ್ ಕರ್ನಾಟಕದಲ್ಲಿ ನಕಲಿ ಗ್ಯಾರಂಟಿ ಕಾರ್ಡ್ ಹಂಚಿ ಜನರ ಕಿವಿಗೆ ಹೂ ಇಡಲು ಹೊರಟಿರುವುದು ಹಾಸ್ಯಾಸ್ಪದ : ಕುಯಿಲಾಡಿ ಸುರೇಶ್ ನಾಯಕ್”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ – ಅಲೆವೂರು ಪಂಚಾಯತ್ ವ್ಯಾಪ್ತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ

ಕಾಪು: ಚುನಾವಣಾ ಪೂರ್ವಭಾವಿಯಾಗಿ ಅಲೆವೂರು ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ‌ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಎಲ್ಲರೂ ಸಮಯ ನೀಡಲು ವಿನಂತಿಸಿದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ – ಅಲೆವೂರು ಪಂಚಾಯತ್ ವ್ಯಾಪ್ತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ”

ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿಗೆ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರದ ಉದ್ಘಾಟನೆ

ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಯಾವುದೇ ಸರಕಾರ ಬಡವರಿಗೆ ನ್ಯಾಯವನ್ನು ಕೊಡುತ್ತಿರುವಾಗ ಇಲ್ಲಿಯವರೆಗೆ ಗ್ಯಾರಂಟಿ ಕಾರ್ಡನ್ನು ಕೊಟ್ಟಿಲ್ಲ. ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂಬುದರ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದಾಗಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡುಗಳಿಗೆ ಯಾವುದೇ ವಾರಂಟಿ ಇಲ್ಲ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ನಡೆದContinue reading “ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡಿಗೆ ವಾರಂಟಿ ಇಲ್ಲ : ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರದ ಉದ್ಘಾಟನೆ”

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ‌ ಜನಪ್ರತಿನಿಧಿಗಳ ಸಭೆ

ಕಾಪು: ಚುನಾವಣಾ ಪೂರ್ವಭಾವಿಯಾಗಿ ಎಲ್ಲೂರಯ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರುಗಳು, ಶಕ್ತಿಕೇಂದ್ರ ಪ್ರಮುಖರು, ಪಂಚಾಯತ್ ಸದಸ್ಯರುಗಳು ಹಾಗೂ‌ ಪಕ್ಷದ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ದಿನದಲ್ಲಿ ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ರವರು ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾತನಾಡಿ ಚುನಾವಣೆಗಾಗಿ ಎಲ್ಲರೂ ಸಮಯ ನೀಡಲು ವಿನಂತಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿ ಶಿಲ್ಪಾ ಜಿ‌ ಸುವರ್ಣ,Continue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ- ಎಲ್ಲೂರು ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಹಾಗೂ‌ ಜನಪ್ರತಿನಿಧಿಗಳ ಸಭೆ”

ಎ.12ರ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಪ್ರಸಾದ್ ಕುಮಾರ್ ಕರೆ

ಉಡುಪಿ: ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಏ.12ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಯೋಜನಾಬದ್ದ ಪೂರ್ವಸಿದ್ಧತೆ ಹಾಗೂ ಸಕ್ರಿಯ ಭಾಗವಹಿಸುವಿಕೆ ಮೂಲಕ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಪಕ್ಷದ ಸಾಮಾಜಿಕ ಜಾಲತಾಣದ ಸಕ್ರಿಯ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದContinue reading “ಎ.12ರ ಬಿಜೆಪಿ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಯಶಸ್ವಿಗೊಳಿಸಲು ಪ್ರಸಾದ್ ಕುಮಾರ್ ಕರೆ”

ಏ.12ರಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಡುಪಿಗೆ; ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಭಾಗಿ : ಕುಯಿಲಾಡಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರು ಏ.12ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಏ.12ರ ಬೆಳಗ್ಗೆ 10.00 ಗಂಟೆಗೆ ಕಾಪು ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಲಿರುವ ಬಿಜೆಪಿ ಮಂಗಳೂರು ವಿಭಾಗ ಮಟ್ಟದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Design a site like this with WordPress.com
Get started