ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶ ಉದ್ಘಾಟಿಸುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ‌ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು. ಮಧ್ಯಾಹ್ನ 3.15ಕ್ಕೆContinue reading “ಮೇ 15: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ”

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ ದರ್ಶನ ಹಾಗೂ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 13ರಂದು ಉಡುಪಿಗೆ ಆಗಮಿಸಿರುವ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಣಿಪಾಲದಲ್ಲಿ‌ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ‌ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ,Continue reading “ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ”

ಕೃಷ್ಣ ನಗರಿ ಉಡುಪಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ

ಉಡುಪಿ: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಮೇ 10ರಂದು ಉಡುಪಿಯ ಕಿದಿಯೂರ್ ಹೋಟೆಲ್‍ನಲ್ಲಿ ನಡೆಯಿತು.ಈ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಖನಾದವನ್ನು ಮೊಳಗಿಸುವ ಮೂಲಕ ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ರಾಜ್ಯದ ಸಚಿವರಾದ ಸುನೀಲ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿಗಳಾದ ಕೆ.ಉದಯಕುಮಾರ್ ಶೆಟ್ಟಿ, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿContinue reading “ಕೃಷ್ಣ ನಗರಿ ಉಡುಪಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ”

ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ಸರಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕರ್ನಾಟಕ ಸರಕಾರದ ಮಾನ್ಯContinue reading “ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”

ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಕುಯಿಲಾಡಿ ಕರೆಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆ

ಉಡುಪಿ: ಮೇರಾ ಬೂತ್ ಸಬ್ಸೇ‌ ಮಜ್ಬೂತ್’ ಎಂಬ ತತ್ವದಡಿ ಪ್ರತಿಯೊಂದು ಬೂತ್ ಗಳನ್ನು ಗೆಲ್ಲುವ ಗುರಿಯೊಂದಿಗೆ ಬೂತ್ ಮತ್ತು ಶಕ್ತಿಕೇಂದ್ರಗಳನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ‌ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಮೇ 2ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ‌ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇ 7ರಂದು ಬಿಜೆಪಿ ಜಿಲ್ಲಾ‌‌ ಕಾರ್ಯಕಾರಿಣಿ ಸಭೆ ನಡೆಯಲಿದೆ.Continue reading “ಜಿಲ್ಲೆಯಾದ್ಯಂತ ಮಹಾ ಶಕ್ತಿಕೇಂದ್ರಗಳನ್ನು ಸಕ್ರಿಯಗೊಳಿಸಲು ಕುಯಿಲಾಡಿ ಕರೆಜಿಲ್ಲಾ ಪದಾಧಿಕಾರಿಗಳು ಮತ್ತು ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳ ಸಭೆ”

ಸಮಾಜ ಘಾತುಕ‌ರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೆರವು;‌‌ ಕಾಂಗ್ರೆಸ್ ನ ನ‌ಕಲಿ ಜಾತ್ಯಾತೀತತೆಯ ನೈಜ ಬಣ್ಣ ಬಯಲು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಮೇಲೆ ಕಲ್ಲು ಹೊಡೆದು ದಾಂಧಲೆ ನಡೆಸಿರುವ ಗಲಭೆಕೋರ ಸಮಾಜ ಘಾತುಕರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೆರವು ನೀಡಲು ಮುಂದಾಗಿರುವುದು‌ ನಾಚಿಕೆಗೇಡಿನ ವಿಚಾರವಾಗಿದೆ. ಕಾಂಗ್ರೆಸ್ ನಾಯಕನ ಈ ಕುಕೃತ್ಯದಿಂದ ಜಾತ್ಯಾತೀತತೆಯ ಸೋಗಿನಲ್ಲಿರುವ ಕಾಂಗ್ರೆಸ್ ನ ನೈಜ ಬಣ್ಣ ಬಯಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಹಿಂದೆ ಪಾದರಾಯನಪುರ ಪುಂಡರಿಗೂ ಸಹಾಯ ಮಾಡಿ ವಿವಾದಕ್ಕೀಡಾಗಿದ್ದ ಜಮೀರ್ ಅಹ್ಮದ್‌ ಖಾನ್ ಜಾಮೀನಿನಲ್ಲಿ ಹೊರಬಂದ ಪುಂಡರಿಗೆ ನಗದು ಮತ್ತುContinue reading “ಸಮಾಜ ಘಾತುಕ‌ರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೆರವು;‌‌ ಕಾಂಗ್ರೆಸ್ ನ ನ‌ಕಲಿ ಜಾತ್ಯಾತೀತತೆಯ ನೈಜ ಬಣ್ಣ ಬಯಲು: ಕುಯಿಲಾಡಿ ಸುರೇಶ್ ನಾಯಕ್”

ನಿಧನ

ಕೆಮ್ಮಣ್ಣು ಪಡು ತೋನ್ಸೆ, ಅಡ್ಡ ಬೆಂಗ್ರೆ ನಿವಾಸಿ ಜಗನ್ನಾಥ ಕೆ. ಜತ್ತನ್ (72 ವರ್ಷ) ರವರು‌ ಎ.26ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವ್ಯಾಪಾರಸ್ಥರಾಗಿದ್ದ ಅವರು ಪಡು ತೋನ್ಸೆ ಶ್ರೀ ರಾಮ ಭಜನಾ ಮಂದಿರದ ಗೌರವಾಧ್ಯಕ್ಷರಾಗಿ, ಕೋಡಿ ಬೆಂಗ್ರೆ ಬಿಲ್ಲವರ ಸೇವಾ ಸಂಘದ ಉಪಾಧ್ಯಕ್ಷರಾಗಿ ಸೇವೆ‌ ಸಲ್ಲಿಸಿದ್ದರು.

ಪಿಎಸ್ಐ ಪರೀಕ್ಷೆ ಆಕ್ರಮ: ಶಾಸಕ ಪ್ರಿಯಾಂಕ್ ಖರ್ಗೆ ಬಂಧಿಸಿ ತನಿಖೆ ನಡೆಸುವಂತೆ ಕುಯಿಲಾಡಿ ಆಗ್ರಹ

ಉಡುಪಿ: ಪಿಎಸ್ಐ ನೇಮಕಾತಿ ಪರೀಕ್ಷೆ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಮಾಜಿ ಸಚಿವ ಕಾಂಗ್ರೆಸ್ ಶಾಸಕ‌ ಪ್ರಿಯಾಂಕ್ ಖರ್ಗೆ ತನ್ನ ಬಳಿ ಇದ್ದ‍‍‍‍‍ ‍ಆಡಿಯೋವನ್ನು ವಿಳಂಬವಾಗಿ ಬಿಡುಗಡೆ ಮಾಡಿದ‌ ಮರ್ಮ ಹಾಗೂ ಇನ್ನಿತರ ಎಲ್ಲಾ ವಿವರಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಸಿಐಡಿ ವಿಶೇಷ ಘಟಕಕ್ಕೆ ಸಹಕರಿಸದಿದ್ದಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸರಕಾರವನ್ನು ಆಗ್ರಹಿಸಿದ್ದಾರೆ. ಸದ್ರಿ ಪ್ರಕರಣದಲ್ಲಿ ಕಾಂಗ್ರೆಸ್ ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಲ್ಲಿದೆ. ಆದರೆContinue reading “ಪಿಎಸ್ಐ ಪರೀಕ್ಷೆ ಆಕ್ರಮ: ಶಾಸಕ ಪ್ರಿಯಾಂಕ್ ಖರ್ಗೆ ಬಂಧಿಸಿ ತನಿಖೆ ನಡೆಸುವಂತೆ ಕುಯಿಲಾಡಿ ಆಗ್ರಹ”

ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಸ್ವಾತಂತ್ರ್ಯ ನಂತರ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್ ಬ್ರಹ್ಮಾಂಡ ಭ್ರಷ್ಟಾಚಾರಗೈದಿರುವುದನ್ನು ಮರೆತು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಬಿಜೆಪಿ ಬಗ್ಗೆ ಲಘುವಾಗಿ ಮಾತನಾಡಿರುವುದು ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಗಳಾಗಿ ಇದೀಗ ಬೇಲ್ ಮೇಲೆ ಹೊರಗಡೆ ತಿರುಗಾಡುತ್ತಿರುವುದು ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕೇಂದ್ರದ ಯೋಜನೆಯ ಪ್ರತಿ 1Continue reading “ಮಂಜುನಾಥ ಭಂಡಾರಿ ಹೇಳಿಕೆ ದೆವ್ವದ ಬಾಯಲ್ಲಿ ಭಗವದ್ಗೀತೆ ಎಂಬಂತಿದೆ : ಕುಯಿಲಾಡಿ ಸುರೇಶ್ ನಾಯಕ್”

ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ

ಕಾಪು: ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಪಕ್ಷದ ಸೂಚನೆ ಮೇರೆಗೆ ಇಂದು ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತ್ರತ್ವದಲ್ಲಿ ಯೋಧರಿಗೆ ಸನ್ಮಾನ ಮಾಡುವ ಕಾರ್ಯಕ್ರಮ‌ ನಡೆಯಿತು. ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು‌ ಮಂಡಲContinue reading “ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ”

Design a site like this with WordPress.com
Get started