ಉಡುಪಿಯಲ್ಲಿ ಸಮುದಾಯ ಮಟ್ಟದಲ್ಲಿ ಸೋಂಕು: ಡಾ.ಶಶಿಕಿರಣ್ ‌ಎಚ್ಚರಿಕೆ.

ಉಡುಪಿ: ಜಿಲ್ಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶೀತಜ್ವರ ರೋಗ ಲಕ್ಷಣ ಇರುವವರರಲ್ಲಿ ಕೋವಿಡ್‌ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸಮುದಾಯ ಮಟ್ಟದಲ್ಲಿ ಸೋಂಕು ಹರಡಿರುವ ಭೀತಿ ಸೃಷ್ಟಿಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಡಾ.ಟಿಎಂಎ ಪೈ ಆಸ್ಪತ್ರೆಯ ತಜ್ಞ ವೈದ್ಯ ಡಾ.ಶಶಿಕಿರಣ್ ಉಮಾಕಾಂತ್.

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಸ್ವಾಮೀಜಿಗಳಿಗೆ ಕೊರೋನಾ ಸೋಂಕು ದೃಢ

ಉಡುಪಿ , ಜು.21:  ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ.Continue reading “ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಸ್ವಾಮೀಜಿಗಳಿಗೆ ಕೊರೋನಾ ಸೋಂಕು ದೃಢ”

Design a site like this with WordPress.com
Get started