ಕಾಪು ಕ್ಷೇತ್ರ ಕಟಪಾಡಿ ಬೂತ್ ನಂಬರ್ 91 ರ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಾಮಫಲಕ ಅನಾವರಣ

ಕಾಪು ಕ್ಷೇತ್ರದ ಕಟಪಾಡಿ ಪಂಚಾಯತ್ ಮೂಡಬೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯ 91 ನೇ ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ‌ ಇವರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರಿಂದ ನಾಮಫಲಕ ಅಳವಡಿಕೆ ಕಾರ್ಯಕ್ರಮ ನಡೆಯಿತು. ಆಗಮಿಸುತ್ತಿದ್ದಂತೆ ರಾಜ್ಯಾಧ್ಯಕ್ಷರನ್ನು ಬೂತ್ ಅಧ್ಯಕ್ಷರು ಹಾರಾರ್ಪಣೆ ಮಾಡಿ ಸ್ವಾಗತಿಸಿದರೆ, ಮಹಿಳೆಯರಿಂದ ಆರತಿ‌ಬೆಳಗಿಸಿ ಚಂಡೆ ಹಾಗೂ ಪೂರ್ಣಕುಂಭದೊಡನೆ ಮನೆ ತನಕ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ನಾಮಫಲಕ ಅಳವಡಿಸುವ ಮೊದಲು ಗೋಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪುContinue reading “ಕಾಪು ಕ್ಷೇತ್ರ ಕಟಪಾಡಿ ಬೂತ್ ನಂಬರ್ 91 ರ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಾಮಫಲಕ ಅನಾವರಣ”

ಮತಾಂತರ ಮತ್ತು ಆಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ :ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆಲವೊಂದು ಭಾಗಗಳಲ್ಲಿ ಕ್ರಿಶ್ಚಿಯನ್ ಮಿಷನರಿಗಳಿಂದ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರ ಪ್ರಕ್ರಿಯೆ, ಹಾಗೂ ಜಿಲ್ಲೆಯಾದ್ಯಂತ ನಡೆಯುತ್ತಿರುವ ಗೋ ಕಳ್ಳತನ ಮತ್ತು ಆಕ್ರಮ ಗೋ ಸಾಗಾಟನ್ನು ಸಹಿಸಲಾಗುವುದಿಲ್ಲ. ಜಿಲ್ಲಾಡಳಿತ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಬಗ್ಗೆ ದೂರು ನೀಡಿದಾಗ ತಡ ಮಾಡದೇ ತಕ್ಷಣ ಕಾರ್ಯಾಚರಣೆ ಕೈಗೊಂಡಲ್ಲಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.Continue reading “ಮತಾಂತರ ಮತ್ತು ಆಕ್ರಮ ಗೋ ಕಳ್ಳತನ, ಗೋ ಸಾಗಾಟವನ್ನು ಹಿಂದೂ ಸಮಾಜ ಸಹಿಸದು: ಕುಯಿಲಾಡಿ ಸುರೇಶ್ ನಾಯಕ್”

ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ

ಕಾಪು: ಇಂದು ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು ಇವರ ಅಧ್ಯಕ್ಷತೆಯಲ್ಲಿ ಕಳತ್ತೂರು ಗುರ್ಮೆ ಸುರೇಶ್ ಶೆಟ್ಟಿ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಾಶಕ್ತಿಕೇಂದ್ರದ ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ನೀಡಲಾಯಿತು. ಕಾಪು ಮಂಡಲದ ಕಾರ್ಯದರ್ಶಿ, ಕುತ್ಯಾರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲತಾ ಅಚಾರ್ಯ ಸ್ವಾಗತಿಸಿದರು .ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿContinue reading “ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ”

ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಇವರ ಮನೆಯಲ್ಲಿ ನಡೆಯಿತು. ಪಕ್ಷದ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿಸ್ತ್ರತವಾಗಿ ಮಾಹಿತಿ ನೀಡಿದರು. ಬೂತ್ ಸಮಿತಿಯಿಂದ ರಾಷ್ಟ್ರ ಸಮಿತಿಯವರೆಗಿನ ಸಂಘಟನಾತ್ಮಕ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿ ಪಕ್ಚದ ಎಲ್ಲ ಕಾರ್ಯಕ್ರಮಗಳನ್ನು ಬೂತ್ ಮಟ್ಟದಲ್ಲಿ ಚಾಚೂ ತಪ್ಪದೆ ನಡೆಸಬೇಕೆಂದು ವಿನಂತಿಸಿದರು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೆ ಅತ್ಯಂತ ಗೌರವದ ಸ್ಥಾನವಿದ್ದುContinue reading “ಕೊಡಿಬೆಟ್ಟು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ”

ಮಣಿಪುರ ಪಂಚಾಯತ್ ಮೋಕ್ಷಗಿರಿ ಧಾರ್ಮಿಕ ಕ್ಷೇತ್ರದಲ್ಲಿ ಸ್ಮಶಾನ ಮತ್ತು ಡಂಪಿಂಗ್ ಯಾರ್ಡ್ ಮಾಡಲು ವಿಎಚ್ ಪಿ ಮತ್ತು ಬಜರಂಗದಳ ವಿರೋಧ

ಮಣಿಪುರ ಪಂಚಾಯತ್ ಅಧ್ಯಕ್ಷರಾದ ಹಸನ್ ರವರು ಏಕಪಕ್ಷೀಯವಾಗಿ‌ ಸಾರ್ವಜನಿಕರ ವಿರೋಧ ಇದ್ದರೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಕುಂತಳನಗರದ ಮೋಕ್ಷಗಿರಿಯಲ್ಲಿ ಸ್ಮಶಾನ ಮತ್ತು ಎಸ್ ಎಲ್ ಆರ್ ಎಮ್ ಘಟಕ ಮಾಲು ಹೊರಟಿದ್ದು ಅಲ್ಲಿದ್ದ ಧಾರ್ಮಿಕ ಕಾರ್ಯಕ್ರಮಗಳ ಕುರುಹು ಆಗಿದ್ದ ಸಭಾ ವೇದಿಕೆ ಧ್ವಂಸಗೊಳಿಸಿದ್ದು ಖಂಡನೀಯವೆಂದು ವಿಶ್ವಹಿಂದು‌ಪರಿಷತ್ ಭಜರಂಗಳ ಅಭಿಪ್ರಾಯ ವ್ಯಕ್ತಪಡಿಸಿದೆ. ಇಂದು ಸ್ಥಳಕ್ಕೆ ಭೇಟಿ‌ನೀಡಿದ ಬಜರಂಗದಳ ರಾಜ್ಯ ಸಂಚಾಲಕರಾದ ಸುನಿಲ್ ಕೆ ಆರ್, ಜಿಲ್ಲಾ ಕಾರ್ಯದರ್ಶಿ, ದಿನೇಶ್ ಮೆಂಡನ್, ಜಿಲ್ಲಾ ವಿಶ್ವಹಿಂದು ಪರಿಷತ್ ಅಧ್ಯಕ್ಷರಾದContinue reading “ಮಣಿಪುರ ಪಂಚಾಯತ್ ಮೋಕ್ಷಗಿರಿ ಧಾರ್ಮಿಕ ಕ್ಷೇತ್ರದಲ್ಲಿ ಸ್ಮಶಾನ ಮತ್ತು ಡಂಪಿಂಗ್ ಯಾರ್ಡ್ ಮಾಡಲು ವಿಎಚ್ ಪಿ ಮತ್ತು ಬಜರಂಗದಳ ವಿರೋಧ”

ಅಲೆವೂರು ಯುವಕ ಸಂಘ ಹಾಗೂ ಅಲೆವೂರು ಮಹಿಳಾ ಸಂಘದ ನೇತ್ರತ್ವದಲ್ಲಿ ಅಲೆವೂರಿನಲ್ಲಿ ವ್ಯಾಕ್ಸಿನ್ ಮೇಳ

ಉಡುಪಿ : ಜಿಲ್ಲಾ ಆರೋಗ್ಯ ಇಲಾಖೆ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ. ಗ್ರಾಮ ಪಂಚಾಯತ್ ಅಲೆವೂರು.ಅಲೆವೂರು ಯುವಕ ಸಂಘ (ರಿ) ರಾಮಪುರ, ಮತ್ತು ಅಲೆವೂರು ಮಹಿಳಾ ಸಂಘ ರಾಮಪುರ ಇದರ ಸಹಯೋಗದಲ್ಲಿ *ಸುಬೋಧಿನಿ ಹಿರಿಯ ಪ್ರಾಥಮಿಕ* ಶಾಲೆ ರಾಮಪುರ ಅಲೆವೂರು ಇಲ್ಲಿ ಬ್ರಹತ್ ವ್ಯಾಕ್ಸಿನೇಶನ್ ಮೇಳ ನಡೆಯಿತು. ಉದ್ಘಾಟನೆಯನ್ನು ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್ ಹಾಗೂ ಅಲೆವೂರು ಮಹಿಳಾ ಸಂಘದ ಅಧ್ಯಕ್ಷರಾದ ರಮಾ ಜೆ ರಾವ್ ಇವರು ಜಂಟಿಯಾಗಿ ನೆರವೇರಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದContinue reading “ಅಲೆವೂರು ಯುವಕ ಸಂಘ ಹಾಗೂ ಅಲೆವೂರು ಮಹಿಳಾ ಸಂಘದ ನೇತ್ರತ್ವದಲ್ಲಿ ಅಲೆವೂರಿನಲ್ಲಿ ವ್ಯಾಕ್ಸಿನ್ ಮೇಳ”

ಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶ

ಉಚ್ಚಿಲ ಮಹಾಶಕ್ತಿಕೇಂದ್ರದಲ್ಲಿ ನಾಮಫಲಕ‌ ಸಮಾವೇಶ ನಡೆಯಿತು. ಬೂತ್ ಅಧ್ಯಕ್ಷರು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಬೂತ್ ಅಧ್ಯಕ್ಷರ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದೆವು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಸಭೆಯಲ್ಲಿ ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಹಿಳಾಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ ಕೇಸರಿ ಯುವರಾಜ್ ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಕೇಶವContinue reading “ಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶಉಚ್ಚಿಲ ಮಹಾಶಕ್ತಿಕೇಂದ್ರ ನಾಮಫಲಕ ಸಮಾವೇಶ

ಬಿಜೆಪಿ ಭರ್ಜರಿ ಗೆಲುವು ಸಂಘಟಿತ ಹೋರಾಟಕ್ಕೆ ಸಂದ ಜಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ :ಕುತೂಹಲ ಕೆರಳಿಸಿರುವ ರಾಜ್ಯದ ಪ್ರಮುಖ ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಸಂಘಟಿತ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಕಾಂಗ್ರೆಸ್ಸನ್ನು ಎಲ್ಲಾ ಕಡೆಗಳಲ್ಲಿಯೂ ಅಧಿಕಾರದಿಂದ ಹೊರಗಿಟ್ಟ ಜನತೆಗೆ ಅಭಿನಂದನೆ ಸಲ್ಲಿಸಿರುವ ಅವರು, ಈ ಫಲಿತಾಂಶ ಮುಂದಿನ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಿಗೆContinue reading “ಬಿಜೆಪಿ ಭರ್ಜರಿ ಗೆಲುವು ಸಂಘಟಿತ ಹೋರಾಟಕ್ಕೆ ಸಂದ ಜಯ: ಕುಯಿಲಾಡಿ ಸುರೇಶ್ ನಾಯಕ್”

ಕಾಪು ಬಿಜೆಪಿ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಸಭೆ.

ಕಾಪು ಬಿಜೆಪಿ ಕಚೇರಿಯಲ್ಲಿ ಮಹಾಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿ ಪಕ್ಷದಲ್ಲಿ ಇರುವಷ್ಟು ಸಂಘಟನಾತ್ಮಕ ವ್ಯವಸ್ಥೆ ಇತರ ಯಾವುದೇ ಪಕ್ಷದಲ್ಲಿ ಇಲ್ಲ. ಬೂತ್ ಮಟ್ಟದಿಂದ ಹಿಡಿದು ರಾಷ್ಟ್ರೀಯ ಮಟ್ಟದವರೆಗೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ತೆ ಇದೆ. ಅದರಲ್ಲಿ ಮಹಾಶಕ್ತಿಕೇಂದ್ರದ ಜವಾಬ್ದಾರಿ ಅತ್ಯಂತ ಮಹತ್ತರವಾದುದು. ಮಹಾಶಕ್ತಿಕೇಂದ್ರಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಿದರೆ ಸಂಘಟನೆ ಬಲಿಷ್ಠಗೊಳ್ಳುವುದು. ಪ್ರಾಮಾಣಿಕವಾಗಿ ಜವಾಬ್ದಾರಿಗೆ ನ್ಯಾಯ ಕೊಟ್ಟು ಪಕ್ಷ ಬೆಳೆಸೋಣ ಅದರೊಂದಿಗೆ ನಾವೂ ಬೆಳೆಯೋಣ ಎಂದರು. ಜಿಲ್ಲಾ ಪ್ರಧಾನContinue reading “ಕಾಪು ಬಿಜೆಪಿ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಸಭೆ.”

ಜಿ.ಪಂ., ತಾ.ಪಂ. ಚುನಾವಣೆಗೆ ಸನ್ನದ್ಧರಾಗಿ: ಸಚಿವ ವಿ.ಸುನೀಲ್ ಕುಮಾರ್ ಕರೆ

ಸದ್ಯದಲ್ಲೇ ಬರಲಿರುವ ಜಿ.ಪಂ. ಮತ್ತು ತಾ.ಪಂ. ಚುನಾವಣಾ ದೃಷ್ಠಿಯಿಂದ ಪ್ರತೀ ಮಹಾ ಶಕ್ತಿಕೇಂದ್ರ ಶಹ ಬೂತ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ಸಮಾವೇಶ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಿ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿ ಎಂದು ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರುContinue reading “ಜಿ.ಪಂ., ತಾ.ಪಂ. ಚುನಾವಣೆಗೆ ಸನ್ನದ್ಧರಾಗಿ: ಸಚಿವ ವಿ.ಸುನೀಲ್ ಕುಮಾರ್ ಕರೆ”

Design a site like this with WordPress.com
Get started